<p><strong>ಲಖನೌ(ಉತ್ತರ ಪ್ರದೇಶ):</strong> ಮದರಸಾಗಳು, ಮಸೀದಿಗಳು ಮತ್ತು ಈದ್ಗಾಗಳು ಸೇರಿದಂತೆ ರಾಜ್ಯದಲ್ಲಿ ಇತ್ತೀಚೆಗೆ 350ಕ್ಕೂ ಹೆಚ್ಚು ಅನಧಿಕೃತ ಧಾರ್ಮಿಕ ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಕೆಲವನ್ನು ಸೀಲ್ ಮಾಡಲಾಗಿದ್ದು, ಇನ್ನೂ ಕೆಲವು ಕಟ್ಟಡಗಳನ್ನು ಕೆಡವಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಭಾನುವಾರ ತಿಳಿಸಿದೆ.</p>.<p>ಯಾವುದೇ ಧಾರ್ಮಿಕ ಅತಿಕ್ರಮಣವನ್ನು ಸಹಿಸುವುದಿಲ್ಲ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸ್ಪಷ್ಟ ನಿರ್ದೇಶನದ ಮೇರೆಗೆ, ಪಿಲಿಭಿತ್, ಶ್ರಾವಸ್ತಿ, ಬಲರಾಂಪುರ, ಬಹ್ರೈಚ್, ಸಿದ್ಧಾರ್ಥನಗರ ಮತ್ತು ಮಹಾರಾಜ್ಗಂಜ್ ಜಿಲ್ಲೆಗಳಲ್ಲಿ ಆಡಳಿತವು ವ್ಯಾಪಕ ಕಾರ್ಯಾಚರಣೆ ಪ್ರಾರಂಭಿಸಿದೆ.</p>.<p>ಅಧಿಕಾರಿಗಳು ಅಕ್ರಮ ಧಾರ್ಮಿಕ ಕಟ್ಟಡಗಳನ್ನು ಗುರುತಿಸಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಭಾನುವಾರವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಯಾವುದೇ ಧರ್ಮದ ಹೆಸರಿನಲ್ಲಿ ಅತಿಕ್ರಮಣಕ್ಕೆ ಅವಕಾಶ ನೀಡಲಾಗುವುದಿಲ್ಲ. ನಿಯಮ ಉಲ್ಲಂಘಿಸುವವರು, ವಿಶೇಷವಾಗಿ ಮಾನ್ಯತೆ ಪಡೆಯದೆ ಧಾರ್ಮಿಕ ಸಂಸ್ಥೆಗಳನ್ನು ನಡೆಸುವವರು ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p> .ಅನಧಿಕೃತ ಧಾರ್ಮಿಕ ಕಟ್ಟಡ ತೆರವು: ಅಮಿಕಸ್ ಕ್ಯೂರಿ ನೇಮಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ(ಉತ್ತರ ಪ್ರದೇಶ):</strong> ಮದರಸಾಗಳು, ಮಸೀದಿಗಳು ಮತ್ತು ಈದ್ಗಾಗಳು ಸೇರಿದಂತೆ ರಾಜ್ಯದಲ್ಲಿ ಇತ್ತೀಚೆಗೆ 350ಕ್ಕೂ ಹೆಚ್ಚು ಅನಧಿಕೃತ ಧಾರ್ಮಿಕ ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಕೆಲವನ್ನು ಸೀಲ್ ಮಾಡಲಾಗಿದ್ದು, ಇನ್ನೂ ಕೆಲವು ಕಟ್ಟಡಗಳನ್ನು ಕೆಡವಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಭಾನುವಾರ ತಿಳಿಸಿದೆ.</p>.<p>ಯಾವುದೇ ಧಾರ್ಮಿಕ ಅತಿಕ್ರಮಣವನ್ನು ಸಹಿಸುವುದಿಲ್ಲ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸ್ಪಷ್ಟ ನಿರ್ದೇಶನದ ಮೇರೆಗೆ, ಪಿಲಿಭಿತ್, ಶ್ರಾವಸ್ತಿ, ಬಲರಾಂಪುರ, ಬಹ್ರೈಚ್, ಸಿದ್ಧಾರ್ಥನಗರ ಮತ್ತು ಮಹಾರಾಜ್ಗಂಜ್ ಜಿಲ್ಲೆಗಳಲ್ಲಿ ಆಡಳಿತವು ವ್ಯಾಪಕ ಕಾರ್ಯಾಚರಣೆ ಪ್ರಾರಂಭಿಸಿದೆ.</p>.<p>ಅಧಿಕಾರಿಗಳು ಅಕ್ರಮ ಧಾರ್ಮಿಕ ಕಟ್ಟಡಗಳನ್ನು ಗುರುತಿಸಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಭಾನುವಾರವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಯಾವುದೇ ಧರ್ಮದ ಹೆಸರಿನಲ್ಲಿ ಅತಿಕ್ರಮಣಕ್ಕೆ ಅವಕಾಶ ನೀಡಲಾಗುವುದಿಲ್ಲ. ನಿಯಮ ಉಲ್ಲಂಘಿಸುವವರು, ವಿಶೇಷವಾಗಿ ಮಾನ್ಯತೆ ಪಡೆಯದೆ ಧಾರ್ಮಿಕ ಸಂಸ್ಥೆಗಳನ್ನು ನಡೆಸುವವರು ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p> .ಅನಧಿಕೃತ ಧಾರ್ಮಿಕ ಕಟ್ಟಡ ತೆರವು: ಅಮಿಕಸ್ ಕ್ಯೂರಿ ನೇಮಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>