<p><strong>ಮುಜಾಫರ್ನಗರ: </strong>ಮತ್ತೊಂದು ಮದುವೆಗೆ ಯೋಜಿಸಿದ್ದ ಇಲ್ಲಿನ ಹಳ್ಳಿಯೊಂದರ ಇಮಾಮ್ನನ್ನು ಆತನ ಮೊದಲ ಹೆಂಡತಿ ಹೊಡೆದು ಸಾಯಿಸಿದ್ದಾಳೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಶಿಕಾರ್ಪುರ ಗ್ರಾಮದಲ್ಲಿ ಗುರುವಾರ ಸಂಜೆ ಘಟನೆ ನಡೆದಿದೆ. ಭೋರಾ ಖುರ್ದ್ ಗ್ರಾಮದ ಮಸೀದಿಯಲ್ಲಿ ಇಮಾಮ್ ಆಗಿರುವ ಮೌಲ್ವಿ ವಕಿಲ್ ಅಹ್ಮದ್ ಅವರನ್ನು ಪತ್ನಿ ಹಜ್ರಾ ಅವರು ಮರ್ಮಾಂಗಕ್ಕೆ ಹೊಡೆದು ಗಾಯಗೊಳಿಸಿದ್ದು, ಥಳಿಸಿ ಕೊಲೆ ಮಾಡಿದ್ದಾರೆ.</p>.<p>ನನ್ನ ಪತಿ ಮತ್ತೊಂದು ಮದುವೆ ಮಾಡಿಕೊಳ್ಳಲು ಯೋಜಿಸುತ್ತಿದ್ದನು. ಈ ವಿಷಯದ ಬಗ್ಗೆ ನಮ್ಮಿಬ್ಬರ ನಡುವೆ ವಾದ ನಡೆದು ಹಿಂಸಾತ್ಮಕ ರೂಪ ಪಡೆಯಿತು. ಬಳಿಕ, ನಮ್ಮ ಜಗಳ ಪತಿಯ ಕೊಲೆಯಲ್ಲಿ ಅಂತ್ಯವಾಯಿತು ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ.</p>.<p>ಪ್ರಕರಣ ಸಂಬಂಧ ಭೋರಕ್ಲಾ ಪೊಲೀಸ್ ಠಾಣೆಯಲ್ಲಿ ಪತ್ನಿ ಹಜ್ರಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಪತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಠಾಣಾಧಿಕಾರಿ (ಎಸ್ಎಚ್ಒ) ನಿತೇಂದ್ರ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಜಾಫರ್ನಗರ: </strong>ಮತ್ತೊಂದು ಮದುವೆಗೆ ಯೋಜಿಸಿದ್ದ ಇಲ್ಲಿನ ಹಳ್ಳಿಯೊಂದರ ಇಮಾಮ್ನನ್ನು ಆತನ ಮೊದಲ ಹೆಂಡತಿ ಹೊಡೆದು ಸಾಯಿಸಿದ್ದಾಳೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಶಿಕಾರ್ಪುರ ಗ್ರಾಮದಲ್ಲಿ ಗುರುವಾರ ಸಂಜೆ ಘಟನೆ ನಡೆದಿದೆ. ಭೋರಾ ಖುರ್ದ್ ಗ್ರಾಮದ ಮಸೀದಿಯಲ್ಲಿ ಇಮಾಮ್ ಆಗಿರುವ ಮೌಲ್ವಿ ವಕಿಲ್ ಅಹ್ಮದ್ ಅವರನ್ನು ಪತ್ನಿ ಹಜ್ರಾ ಅವರು ಮರ್ಮಾಂಗಕ್ಕೆ ಹೊಡೆದು ಗಾಯಗೊಳಿಸಿದ್ದು, ಥಳಿಸಿ ಕೊಲೆ ಮಾಡಿದ್ದಾರೆ.</p>.<p>ನನ್ನ ಪತಿ ಮತ್ತೊಂದು ಮದುವೆ ಮಾಡಿಕೊಳ್ಳಲು ಯೋಜಿಸುತ್ತಿದ್ದನು. ಈ ವಿಷಯದ ಬಗ್ಗೆ ನಮ್ಮಿಬ್ಬರ ನಡುವೆ ವಾದ ನಡೆದು ಹಿಂಸಾತ್ಮಕ ರೂಪ ಪಡೆಯಿತು. ಬಳಿಕ, ನಮ್ಮ ಜಗಳ ಪತಿಯ ಕೊಲೆಯಲ್ಲಿ ಅಂತ್ಯವಾಯಿತು ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ.</p>.<p>ಪ್ರಕರಣ ಸಂಬಂಧ ಭೋರಕ್ಲಾ ಪೊಲೀಸ್ ಠಾಣೆಯಲ್ಲಿ ಪತ್ನಿ ಹಜ್ರಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಪತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಠಾಣಾಧಿಕಾರಿ (ಎಸ್ಎಚ್ಒ) ನಿತೇಂದ್ರ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>