<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಮತ್ತು ಮಂಗಳವಾರ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಭಾರತದಲ್ಲಿ ಶೀತದ ವಾತಾವರಣ ಇರಲಿದ್ದು, ಹಲವು ಪ್ರದೇಶಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹೇಳಿದೆ.</p>.<p>ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 10 ಡಿಗ್ರಿ ಮತ್ತು ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಭಾರಿ ಮಳೆಯ ಕಾರಣದಿಂದಾಗಿ ಭಾನುವಾರ ಕನಿಷ್ಠ ತಾಪಮಾನ 9.9 ಡಿಗ್ರಿ ಮತ್ತು ಗರಿಷ್ಠ ತಾಪಮಾನ 18 ಡಿಗ್ರಿಯಷ್ಟಿತ್ತು.</p>.<p>ಸಫ್ದರ್ಜಂಗ್ ವೀಕ್ಷಣಾಲಯದ ಅಂಕಿ–ಅಂಶಗಳ ಪ್ರಕಾರ ರಾಜಧಾನಿಯಲ್ಲಿ ಸಂಜೆ 5.30ರ ವೇಳೆಗೆ 14.8 ಮಿಮೀ ಮಳೆಯಾಗಿದೆ ಎಂದು ತಿಳಿಸಿದೆ.</p>.<p>ಉತ್ತರ ಭಾರತದಲ್ಲಿ ಇನ್ನೂ ಮೂರ್ನಾಲ್ಕು ದಿನಗಳವರಗೆ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡುಬರುವುದಿಲ್ಲ. ದೆಹಲಿ ಹೊರತುಪಡಿಸಿ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ಮಿಜೋರಾಂ ಹಾಗೂ ತ್ರಿಪುರದಲ್ಲಿಯೂ ಇನ್ನೆರಡು ದಿನಗಳವರೆಗೆ ಹಿಮ ಕವಿದ ವಾತಾವರಣ ಇರಲಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಮತ್ತು ಮಂಗಳವಾರ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಭಾರತದಲ್ಲಿ ಶೀತದ ವಾತಾವರಣ ಇರಲಿದ್ದು, ಹಲವು ಪ್ರದೇಶಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹೇಳಿದೆ.</p>.<p>ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 10 ಡಿಗ್ರಿ ಮತ್ತು ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಭಾರಿ ಮಳೆಯ ಕಾರಣದಿಂದಾಗಿ ಭಾನುವಾರ ಕನಿಷ್ಠ ತಾಪಮಾನ 9.9 ಡಿಗ್ರಿ ಮತ್ತು ಗರಿಷ್ಠ ತಾಪಮಾನ 18 ಡಿಗ್ರಿಯಷ್ಟಿತ್ತು.</p>.<p>ಸಫ್ದರ್ಜಂಗ್ ವೀಕ್ಷಣಾಲಯದ ಅಂಕಿ–ಅಂಶಗಳ ಪ್ರಕಾರ ರಾಜಧಾನಿಯಲ್ಲಿ ಸಂಜೆ 5.30ರ ವೇಳೆಗೆ 14.8 ಮಿಮೀ ಮಳೆಯಾಗಿದೆ ಎಂದು ತಿಳಿಸಿದೆ.</p>.<p>ಉತ್ತರ ಭಾರತದಲ್ಲಿ ಇನ್ನೂ ಮೂರ್ನಾಲ್ಕು ದಿನಗಳವರಗೆ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡುಬರುವುದಿಲ್ಲ. ದೆಹಲಿ ಹೊರತುಪಡಿಸಿ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ಮಿಜೋರಾಂ ಹಾಗೂ ತ್ರಿಪುರದಲ್ಲಿಯೂ ಇನ್ನೆರಡು ದಿನಗಳವರೆಗೆ ಹಿಮ ಕವಿದ ವಾತಾವರಣ ಇರಲಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>