‘ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಪಾದಯಾತ್ರೆ ನಡೆಸುವ ಭಾರತ ಜೋಡೊ ಯಾತ್ರೆಯ ಪರಿಣಾಮ ಏನು ಎಂಬುದು ಮನದಟ್ಟಾ ಗಿದೆ. ಪ್ರಧಾನಿ ಮೋದಿ ಅವರು ಎರಡು ದಿನಗಳ ಕಾಲ ದಕ್ಷಿಣದ ನಾಲ್ಕು ರಾಜ್ಯಗಳ ಭೇಟಿ ಆರಂಭಿಸಿದ್ದಾರೆ. ನಿಸ್ಸಂದೇಹವಾಗಿ ಒಳ್ಳೆಯ ಫೋಟೋಶೂಟ್ ಇರಲಿದೆ. ಆದರೆ,ಇಂಥ ಯಾವ ಬೂಟಾಟಿಕೆಗಳೂ ಜನರೊಂದಿಗೆ ಹೆಜ್ಜೆ ಹಾಕುತ್ತಾ, ಅವರ ಮಾತುಗಳನ್ನು ಆಲಿಸುವುದಕ್ಕೆ ಸಮವಲ್ಲ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.