ಕೊಲಂಬೊ: ‘ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸಲು ಭಾರತ– ಶ್ರೀಲಂಕಾ ಒಟ್ಟಾಗಿ ಕೆಲಸ ಮಾಡುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸಲು ಪರಸ್ಪರ ಲಾಭ, ತಿಳಿವಳಿಕೆ ಮತ್ತು ಉತ್ತಮ ನೆರೆಹೊರೆಯ ಸಂಬಂಧ ಹೊಂದುವುದು ಅಗತ್ಯವಾಗಿದೆ’ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರು ಹೇಳಿದ್ದಾರೆ.