<p><strong>ಅಕೊಲಾ:</strong> ‘ಬಿಜೆಪಿಯು ‘ಒಡೆದು ಆಳುವ ನೀತಿ’ಯನ್ನು ಅಳವಡಿಸಿಕೊಂಡಿದೆ. ಪಕ್ಷದ ಮುಖಂಡರ ಬಾಯಿಯಿಂದ ‘ವಿಭಜಕ’ ಧ್ವನಿ ಹೊರಹೊಮ್ಮುತ್ತಿದೆ. ಹಿರಿಯ ಮುಖಂಡರು ಮೌನಕ್ಕೆ ಶರಣಾಗಿದ್ದಾರೆ’ ಎಂದು ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಇಮ್ರಾನ್ ಪ್ರತಾಪ್ಗಢಿ ಹೇಳಿದ್ದಾರೆ. </p>.<p>‘ವಿಮಾನ ನಿಲ್ದಾಣಗಳ ಖಾಸಗೀಕರಣದಂತೆ, ಕೊಳೆಗೇರಿ ಅಭಿವೃದ್ಧಿ ಹೆಸರಲ್ಲಿ ಧಾರಾವಿಯನ್ನು ಮಾರಾಟ ಮಾಡಿದಂತೆ ಮುಂಬೈ ನಗರವನ್ನು ಮಾರಾಟ ಮಾಡಲು ಬಿಡುವುದಿಲ್ಲ’ ಎಂದು ಅವರು ಹೇಳಿದರು. </p>.<p class="bodytext">ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ನಡೆಸಿದ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p class="bodytext">‘ಮುಂಬೈ ಮಹಾರಾಷ್ಟ್ರಕ್ಕೆ ಸೇರಿದೆ ಮತ್ತು ಯಾವಾಗಲೂ ಮಹಾರಾಷ್ಟ್ರದ ಭಾಗವಾಗಿಯೇ ಇರಲಿದೆ. ಆದರೆ, ಜನರನ್ನು ವಿಭಜಿಸುವುದರ ಮೇಲೆ, ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದರ ಮೇಲೆ ಬಿಜೆಪಿಯ ರಾಜಕೀಯ ಕೇಂದ್ರೀಕೃತವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಕೊಲಾ:</strong> ‘ಬಿಜೆಪಿಯು ‘ಒಡೆದು ಆಳುವ ನೀತಿ’ಯನ್ನು ಅಳವಡಿಸಿಕೊಂಡಿದೆ. ಪಕ್ಷದ ಮುಖಂಡರ ಬಾಯಿಯಿಂದ ‘ವಿಭಜಕ’ ಧ್ವನಿ ಹೊರಹೊಮ್ಮುತ್ತಿದೆ. ಹಿರಿಯ ಮುಖಂಡರು ಮೌನಕ್ಕೆ ಶರಣಾಗಿದ್ದಾರೆ’ ಎಂದು ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಇಮ್ರಾನ್ ಪ್ರತಾಪ್ಗಢಿ ಹೇಳಿದ್ದಾರೆ. </p>.<p>‘ವಿಮಾನ ನಿಲ್ದಾಣಗಳ ಖಾಸಗೀಕರಣದಂತೆ, ಕೊಳೆಗೇರಿ ಅಭಿವೃದ್ಧಿ ಹೆಸರಲ್ಲಿ ಧಾರಾವಿಯನ್ನು ಮಾರಾಟ ಮಾಡಿದಂತೆ ಮುಂಬೈ ನಗರವನ್ನು ಮಾರಾಟ ಮಾಡಲು ಬಿಡುವುದಿಲ್ಲ’ ಎಂದು ಅವರು ಹೇಳಿದರು. </p>.<p class="bodytext">ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ನಡೆಸಿದ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p class="bodytext">‘ಮುಂಬೈ ಮಹಾರಾಷ್ಟ್ರಕ್ಕೆ ಸೇರಿದೆ ಮತ್ತು ಯಾವಾಗಲೂ ಮಹಾರಾಷ್ಟ್ರದ ಭಾಗವಾಗಿಯೇ ಇರಲಿದೆ. ಆದರೆ, ಜನರನ್ನು ವಿಭಜಿಸುವುದರ ಮೇಲೆ, ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದರ ಮೇಲೆ ಬಿಜೆಪಿಯ ರಾಜಕೀಯ ಕೇಂದ್ರೀಕೃತವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>