ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2014ರಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದ ಶಾಸಕನಿಗೆ ಜೈಲು

Last Updated 23 ಫೆಬ್ರುವರಿ 2023, 2:36 IST
ಅಕ್ಷರ ಗಾತ್ರ

ಶಾಮ್ಲಿ (ಉತ್ತರ ಪ್ರದೇಶ): 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮಾಜಿ ಶಾಸಕ ಕರ್ತಾರ್ ಸಿಂಗ್ ಭದನಾ ಅವರನ್ನು ತಪ್ಪಿತಸ್ಥರೆಂದು ಇಲ್ಲಿನ ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ.

ಈ ಪ್ರಕರಣವನ್ನು ಪರಿಶೀಲಿಸಿದ ಸಿವಿಲ್ ನ್ಯಾಯಾಧೀಶ ವಿಜಯ್ ಕುಮಾರ್ ವರ್ಮಾ ಅವರು ಕರ್ತಾರ್ ಸಿಂಗ್ ಭದನಾ ಅವರಿಗೆ ಒಂದು ತಿಂಗಳ ಜೈಲು ಶಿಕ್ಷೆ ಮತ್ತು ₹100 ದಂಡ ವಿಧಿಸಿದ್ದಾರೆ.

ಶಾಮ್ಲಿ ಜಿಲ್ಲೆಯ ಬುಟ್ರಡಾ ಗ್ರಾಮದಲ್ಲಿ 2014ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, 100 ರಿಂದ 150 ಬೆಂಬಲಿಗರೊಂದಿಗೆ ಅನುಮತಿಯಿಲ್ಲದೆ ಭದನಾ ಸಾರ್ವಜನಿಕ ಸಭೆ ನಡೆಸಿದ್ದರು.

ಏಪ್ರಿಲ್ 1, 2014 ರಂದು ಭದನಾ ವಿರುದ್ಧ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ದಂಡ ಪಾವತಿಸಲು ವಿಫಲವಾದರೆ 10 ದಿನ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸುವ ಅವಕಾಶವನ್ನೂ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT