<p><strong>ನವದೆಹಲಿ</strong>: 2021–22ರಲ್ಲಿ ಕರ್ನಾಟಕದಲ್ಲಿ ಪ್ರೌಢಶಾಲಾ ಹಂತದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಟ್ಟವರ ಪ್ರಮಾಣ ಶೇ 14.6ರಷ್ಟಿತ್ತು. ಇದು, ಅದೇ ಅವಧಿಯಲ್ಲಿದ್ದ ರಾಷ್ಟ್ರೀಯ ಸರಾಸರಿಗಿಂತ (ಶೇ 12.5) ಅಧಿಕ ಎಂಬ ಅಂಶ ತಿಳಿದುಬಂದಿದೆ.</p>.<p>ಕರ್ನಾಟಕವಲ್ಲದೇ ಗುಜರಾತ್, ಬಿಹಾರ, ಅಸ್ಸಾಂ ಹಾಗೂ ಪಂಜಾಬ್ನಲ್ಲಿ ಕೂಡ ಶಾಲೆಯನ್ನು ಅರ್ಧಕ್ಕೆ ಬಿಟ್ಟ ಮಕ್ಕಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಅಧಿಕ ಇದೆ ಎಂದು ‘ಯೋಜನಾ ಅನುಮೋದನೆ ಮಂಡಳಿ’ (ಪಿಎಬಿ) ಸಭೆಯ ಟಿಪ್ಪಣಿಯಲ್ಲಿ ಹೇಳಲಾಗಿದೆ.</p>.<p>2023–24ನೇ ಸಾಲಿನಲ್ಲಿ ‘ಸಮಗ್ರ ಶಿಕ್ಷಣ’ ಅನುಷ್ಠಾನಗೊಳಿಸುವ ಕುರಿತು ಚರ್ಚಿಸಲು ಶಿಕ್ಷಣ ಸಚಿವಾಲಯ ಕಳೆದ ಮಾರ್ಚ್ ಹಾಗೂ ಮೇನಲ್ಲಿ ‘ಯೋಜನಾ ಅನುಮೋದನೆ ಮಂಡಳಿ’ಯ ಸಭೆಗಳನ್ನು ನಡೆಸಿತ್ತು. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>2030ರ ವೇಳೆಗೆ ಶಾಲೆಗಳಲ್ಲಿ ‘ಒಟ್ಟು ದಾಖಲಾತಿ ಪ್ರಮಾಣ’ (ಜಿಇಆರ್) ಶೇ 100ರಷ್ಟಾಗಬೇಕು ಎಂಬ ಗುರಿಯನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಹೊಂದಿದೆ. ಆದರೆ, ಶಾಲೆಯನ್ನು ಅರ್ಧಕ್ಕೆ ಬಿಡುವ ಈ ವಿದ್ಯಮಾನ ನಿಗದಿತ ಗುರಿ ಸಾಧನೆಗೆ ಅಡ್ಡಿಯಾಗಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.</p>.<p>ದೆಹಲಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಪ್ರೌಢಶಾಲಾ ಹಂತದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಟ್ಟವರ ಕುರಿತ ಮಾಹಿತಿ ಈ ಸಭೆಯ ಟಿಪ್ಪಣಿಯಲ್ಲಿ ಇಲ್ಲ. ಆದರೆ, ಪಶ್ಚಿಮ ಬಂಗಾಳದಲ್ಲಿ 2020–21 ರಿಂದ 2021–22ರ ವರಗಿನ ಅವಧಿಯಲ್ಲಿ ಪೂರ್ವಪ್ರಾಥಮಿಕ ಹಂತದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಡುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಪ್ರೌಢಶಾಲಾ ಹಂತದಲ್ಲಿ ಈ ಪ್ರಮಾಣ ಹೆಚ್ಚುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.</p>.<p>ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳ ಸಂಖ್ಯೆ ದೆಹಲಿಯಲ್ಲಿ ಹೆಚ್ಚಿದೆ. ಇಂಥ ವಿದ್ಯಾರ್ಥಿಗಳ ಕುರಿತ ಮಾಹಿತಿಯನ್ನು ‘ಪ್ರಬಂಧ’ ಪೋರ್ಟಲ್ನಲ್ಲಿ ಅಳವಡಿಸಬೇಕು ಎಂದೂ ಹೇಳಲಾಗಿದೆ.</p>.<p><strong>ಟಿಪ್ಪಣಿಯ ಪ್ರಮುಖ ಅಂಶಗಳು </strong></p><p>* ದೇಶದಲ್ಲಿ ಶೇ 33ರಷ್ಟು ಹೆಣ್ಣು ಮಕ್ಕಳು ಶಾಲೆಯನ್ನು ಅರ್ಧಕ್ಕೆ ಬಿಡಲು ಮನೆಗೆಲಸವೇ ಕಾರಣ ಎಂದು ಯುನಿಸೆಫ್ ನಡೆಸಿದ ಸಮೀಕ್ಷೆ ಹೇಳುತ್ತದೆ.</p><p> * ಪಾಲಕರೊಂದಿಗೆ ಕೂಲಿ ಕೆಲಸ ಅಥವಾ ಇತರರ ಮನೆಗಳಲ್ಲಿ ದುಡಿಯುವ ಸಲುವಾಗಿ ಮಕ್ಕಳು ಶಾಲೆಗೆ ಹೋಗುವುದನ್ನು ನಿಲ್ಲಿಸುತ್ತಾರೆ ಎಂದೂ ವರದಿಯಲ್ಲಿ ಹೇಳಲಾಗಿದೆ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2021–22ರಲ್ಲಿ ಕರ್ನಾಟಕದಲ್ಲಿ ಪ್ರೌಢಶಾಲಾ ಹಂತದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಟ್ಟವರ ಪ್ರಮಾಣ ಶೇ 14.6ರಷ್ಟಿತ್ತು. ಇದು, ಅದೇ ಅವಧಿಯಲ್ಲಿದ್ದ ರಾಷ್ಟ್ರೀಯ ಸರಾಸರಿಗಿಂತ (ಶೇ 12.5) ಅಧಿಕ ಎಂಬ ಅಂಶ ತಿಳಿದುಬಂದಿದೆ.</p>.<p>ಕರ್ನಾಟಕವಲ್ಲದೇ ಗುಜರಾತ್, ಬಿಹಾರ, ಅಸ್ಸಾಂ ಹಾಗೂ ಪಂಜಾಬ್ನಲ್ಲಿ ಕೂಡ ಶಾಲೆಯನ್ನು ಅರ್ಧಕ್ಕೆ ಬಿಟ್ಟ ಮಕ್ಕಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಅಧಿಕ ಇದೆ ಎಂದು ‘ಯೋಜನಾ ಅನುಮೋದನೆ ಮಂಡಳಿ’ (ಪಿಎಬಿ) ಸಭೆಯ ಟಿಪ್ಪಣಿಯಲ್ಲಿ ಹೇಳಲಾಗಿದೆ.</p>.<p>2023–24ನೇ ಸಾಲಿನಲ್ಲಿ ‘ಸಮಗ್ರ ಶಿಕ್ಷಣ’ ಅನುಷ್ಠಾನಗೊಳಿಸುವ ಕುರಿತು ಚರ್ಚಿಸಲು ಶಿಕ್ಷಣ ಸಚಿವಾಲಯ ಕಳೆದ ಮಾರ್ಚ್ ಹಾಗೂ ಮೇನಲ್ಲಿ ‘ಯೋಜನಾ ಅನುಮೋದನೆ ಮಂಡಳಿ’ಯ ಸಭೆಗಳನ್ನು ನಡೆಸಿತ್ತು. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>2030ರ ವೇಳೆಗೆ ಶಾಲೆಗಳಲ್ಲಿ ‘ಒಟ್ಟು ದಾಖಲಾತಿ ಪ್ರಮಾಣ’ (ಜಿಇಆರ್) ಶೇ 100ರಷ್ಟಾಗಬೇಕು ಎಂಬ ಗುರಿಯನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಹೊಂದಿದೆ. ಆದರೆ, ಶಾಲೆಯನ್ನು ಅರ್ಧಕ್ಕೆ ಬಿಡುವ ಈ ವಿದ್ಯಮಾನ ನಿಗದಿತ ಗುರಿ ಸಾಧನೆಗೆ ಅಡ್ಡಿಯಾಗಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.</p>.<p>ದೆಹಲಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಪ್ರೌಢಶಾಲಾ ಹಂತದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಟ್ಟವರ ಕುರಿತ ಮಾಹಿತಿ ಈ ಸಭೆಯ ಟಿಪ್ಪಣಿಯಲ್ಲಿ ಇಲ್ಲ. ಆದರೆ, ಪಶ್ಚಿಮ ಬಂಗಾಳದಲ್ಲಿ 2020–21 ರಿಂದ 2021–22ರ ವರಗಿನ ಅವಧಿಯಲ್ಲಿ ಪೂರ್ವಪ್ರಾಥಮಿಕ ಹಂತದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಡುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಪ್ರೌಢಶಾಲಾ ಹಂತದಲ್ಲಿ ಈ ಪ್ರಮಾಣ ಹೆಚ್ಚುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.</p>.<p>ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳ ಸಂಖ್ಯೆ ದೆಹಲಿಯಲ್ಲಿ ಹೆಚ್ಚಿದೆ. ಇಂಥ ವಿದ್ಯಾರ್ಥಿಗಳ ಕುರಿತ ಮಾಹಿತಿಯನ್ನು ‘ಪ್ರಬಂಧ’ ಪೋರ್ಟಲ್ನಲ್ಲಿ ಅಳವಡಿಸಬೇಕು ಎಂದೂ ಹೇಳಲಾಗಿದೆ.</p>.<p><strong>ಟಿಪ್ಪಣಿಯ ಪ್ರಮುಖ ಅಂಶಗಳು </strong></p><p>* ದೇಶದಲ್ಲಿ ಶೇ 33ರಷ್ಟು ಹೆಣ್ಣು ಮಕ್ಕಳು ಶಾಲೆಯನ್ನು ಅರ್ಧಕ್ಕೆ ಬಿಡಲು ಮನೆಗೆಲಸವೇ ಕಾರಣ ಎಂದು ಯುನಿಸೆಫ್ ನಡೆಸಿದ ಸಮೀಕ್ಷೆ ಹೇಳುತ್ತದೆ.</p><p> * ಪಾಲಕರೊಂದಿಗೆ ಕೂಲಿ ಕೆಲಸ ಅಥವಾ ಇತರರ ಮನೆಗಳಲ್ಲಿ ದುಡಿಯುವ ಸಲುವಾಗಿ ಮಕ್ಕಳು ಶಾಲೆಗೆ ಹೋಗುವುದನ್ನು ನಿಲ್ಲಿಸುತ್ತಾರೆ ಎಂದೂ ವರದಿಯಲ್ಲಿ ಹೇಳಲಾಗಿದೆ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>