<p><strong>ರಾಯ್ಪುರ:</strong> ಕಂಪ್ಯೂಟರ್ ಪ್ರತಿ ಅಥವಾ ಟ್ಯಾಬ್ ಬಳಕೆಯ ಈ ಕಾಲದಲ್ಲಿ ಛತ್ತೀಸಗಢದ ಹಣಕಾಸು ಸಚಿವ ಒ.ಪಿ ಚೌಧರಿ ಅವರು 100 ಪುಟಗಳ ಬಜೆಟ್ ಅನ್ನು ಕೈಯಲ್ಲಿ ಬರೆದು ಮಂಡಿಸಿದ್ದಾರೆ. </p><p>ಚೌಧರಿ ಅವರು ಸೋಮವಾರ ರಾಜ್ಯದ 2025–26ನೇ ಸಾಲಿನ ಆಯವ್ಯಯ ಮಂಡಿಸಿದ್ದಾರೆ. ₹1.65 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದಾರೆ.</p><p>ಛತ್ತೀಸಗಢ ವಿಧಾನಸಭೆಯ ಇತಿಹಾಸದಲ್ಲಿ ಕಂಪ್ಯೂಟರ್ನಲ್ಲಿ ಟೈಪಿಸಿದ ಪ್ರತಿ ಬಳಸದೆ ಹಸ್ತ ಪ್ರತಿಯಲ್ಲಿ ಬಜೆಟ್ ಮಂಡನೆಯಾಗಿರುವುದು ಇದೇ ಮೊದಲ ಬಾರಿಗೆ ಎಂದು ಡೆಕ್ಕನ್ ಕ್ರಾನಿಕಲ್ ವರದಿ ತಿಳಿಸಿದೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಚೌಧರಿ ಅವರು, ‘ಛತ್ತೀಸಗಢಕ್ಕೆ ಐತಿಹಾಸಿಕ ಉಪಕ್ರಮ. ರಾಜ್ಯದ ಮೊದಲ ಕೈಬರಹದ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ 100 ಪುಟಗಳ ಬಜೆಟ್ ಸಂಪ್ರದಾಯವು ಸ್ವಂತಿಕೆಯ ಹೊಸ ಉದಾಹರಣೆಯಾಗಿದೆ’ ಎಂದು ಬರೆದುಕೊಂಡಿದ್ದಾರೆ. </p><p>ಒ.ಪಿ. ಚೌಧರಿ ಈ ಹಿಂದೆ ರಾಯ್ಪುರದ ಜಿಲ್ಲಾಧಿಕಾರಿಯಾಗಿದ್ದರು. ಮೊದಲ ಪ್ರಯತ್ನದಲ್ಲೇ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾದ ಹೆಗ್ಗುರುತು ಇವರದ್ದು.</p><p>ಛತ್ತೀಸಗಢದಲ್ಲಿ ಬಿಜೆಪಿ ಆಡಳಿತವಿದ್ದು, ವಿಷ್ಣು ದೇವ್ ಸಾಯಿ ಮುಖ್ಯಮಂತ್ರಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಪುರ:</strong> ಕಂಪ್ಯೂಟರ್ ಪ್ರತಿ ಅಥವಾ ಟ್ಯಾಬ್ ಬಳಕೆಯ ಈ ಕಾಲದಲ್ಲಿ ಛತ್ತೀಸಗಢದ ಹಣಕಾಸು ಸಚಿವ ಒ.ಪಿ ಚೌಧರಿ ಅವರು 100 ಪುಟಗಳ ಬಜೆಟ್ ಅನ್ನು ಕೈಯಲ್ಲಿ ಬರೆದು ಮಂಡಿಸಿದ್ದಾರೆ. </p><p>ಚೌಧರಿ ಅವರು ಸೋಮವಾರ ರಾಜ್ಯದ 2025–26ನೇ ಸಾಲಿನ ಆಯವ್ಯಯ ಮಂಡಿಸಿದ್ದಾರೆ. ₹1.65 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದಾರೆ.</p><p>ಛತ್ತೀಸಗಢ ವಿಧಾನಸಭೆಯ ಇತಿಹಾಸದಲ್ಲಿ ಕಂಪ್ಯೂಟರ್ನಲ್ಲಿ ಟೈಪಿಸಿದ ಪ್ರತಿ ಬಳಸದೆ ಹಸ್ತ ಪ್ರತಿಯಲ್ಲಿ ಬಜೆಟ್ ಮಂಡನೆಯಾಗಿರುವುದು ಇದೇ ಮೊದಲ ಬಾರಿಗೆ ಎಂದು ಡೆಕ್ಕನ್ ಕ್ರಾನಿಕಲ್ ವರದಿ ತಿಳಿಸಿದೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಚೌಧರಿ ಅವರು, ‘ಛತ್ತೀಸಗಢಕ್ಕೆ ಐತಿಹಾಸಿಕ ಉಪಕ್ರಮ. ರಾಜ್ಯದ ಮೊದಲ ಕೈಬರಹದ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ 100 ಪುಟಗಳ ಬಜೆಟ್ ಸಂಪ್ರದಾಯವು ಸ್ವಂತಿಕೆಯ ಹೊಸ ಉದಾಹರಣೆಯಾಗಿದೆ’ ಎಂದು ಬರೆದುಕೊಂಡಿದ್ದಾರೆ. </p><p>ಒ.ಪಿ. ಚೌಧರಿ ಈ ಹಿಂದೆ ರಾಯ್ಪುರದ ಜಿಲ್ಲಾಧಿಕಾರಿಯಾಗಿದ್ದರು. ಮೊದಲ ಪ್ರಯತ್ನದಲ್ಲೇ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾದ ಹೆಗ್ಗುರುತು ಇವರದ್ದು.</p><p>ಛತ್ತೀಸಗಢದಲ್ಲಿ ಬಿಜೆಪಿ ಆಡಳಿತವಿದ್ದು, ವಿಷ್ಣು ದೇವ್ ಸಾಯಿ ಮುಖ್ಯಮಂತ್ರಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>