<p><strong>ನವದೆಹಲಿ:</strong> 1980ರಲ್ಲಿ ರೈತರಿಗೆ ಬೆಂಬಲ ಸೂಚಿಸುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭಾಷಣದ ತುಣುಕನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ರೈತರ ಮೇಲೆ ದಬ್ಬಾಳಿಕೆ ನಡೆಸದಂತೆ ಅಂದಿನ ಇಂದಿರಾಗಾಂಧಿ ಸರ್ಕಾರಕ್ಕೆ ಎಚ್ಚರಿಸಿದ್ದ ವಾಜಪೇಯಿ ರೈತರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/bjp-leader-amit-malviya-said-congress-leaders-least-bothered-about-manmohan-singh-875513.html" itemprop="url">ಕಾಂಗ್ರೆಸ್ ನಾಯಕರು ಸಿಂಗ್ರನ್ನು ನೋಡಲು ಹೋಗುವುದಿಲ್ಲ ಎಂದ ಅಮಿತ್ ಮಾಳವೀಯ </a></p>.<p>ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ವೈಫಲ್ಯ ಕಂಡಿವೆ. </p>.<p>ಈ ನಡುವೆ ರೈತರ ಬೆಂಬಲಕ್ಕಾಗಿ ಮಾಜಿ ಪ್ರಧಾನಿ ವಾಜಪೇಯಿ ಭಾಷಣದ ತುಣುಕನ್ನು ಹಂಚಿರುವ ವರುಣ್ ಗಾಂಧಿ, ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ವರುಣ್ ಗಾಂಧಿ, 'ವಿಶಾಲ ಹೃದಯದ ನಾಯಕನ ಜಾಣ್ಮೆಯ ಮಾತುಗಳು' ಎಂದು ಉಲ್ಲೇಖಿಸಿದ್ದಾರೆ.</p>.<p>ವಿಡಿಯೊ ತುಣುಕಿನಲ್ಲಿ ರೈತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿರುವ ವಾಜಪೇಯಿ, ಹೆದರದಂತೆ ರೈತರಿಗೆ ಧೈರ್ಯ ತುಂಬಿದ್ದಾರೆ. </p>.<p>'ಸರ್ಕಾರವು ರೈತರನ್ನು ದಮನಿಸಿದರೆ, ಕಾನೂನುಗಳನ್ನು ದುರುಪಯೋಗಪಡಿಸಿ ಶಾಂತಿಯುತ ಆಂದೋಲನವನ್ನು ನಿಗ್ರಹಿಸಿದರೆ ನಾವು ರೈತರ ಹೋರಾಟದೊಂದಿಗೆ ಸೇರಲು ಮತ್ತು ಅವರೊಂದಿಗೆ ನಿಲ್ಲಲು ಹಿಂಜರಿಯುವುದಿಲ್ಲ' ಎಂದು ವಾಜಪೇಯಿ ಎಚ್ಚರಿಸಿದ್ದರು.</p>.<p>ಲಂಖಿಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತರಿಗೆ ಬೆಂಬಲ ಸೂಚಿಸಿರುವ ವರುಣ್ ಗಾಂಧಿ, ತಪ್ಪಿತ್ತಸ್ಥರನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಬೇಡಿಕೆಯಿರಿಸಿದ್ದರು. ಇದು ಬಿಜೆಪಿಯಲ್ಲಿ ಇರಿಸು ಮುರಿಸು ಉಂಟು ಮಾಡಿತ್ತು. ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ವರುಣ್ ಗಾಂಧಿ ಅವರನ್ನು ಕೈಬಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 1980ರಲ್ಲಿ ರೈತರಿಗೆ ಬೆಂಬಲ ಸೂಚಿಸುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭಾಷಣದ ತುಣುಕನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ರೈತರ ಮೇಲೆ ದಬ್ಬಾಳಿಕೆ ನಡೆಸದಂತೆ ಅಂದಿನ ಇಂದಿರಾಗಾಂಧಿ ಸರ್ಕಾರಕ್ಕೆ ಎಚ್ಚರಿಸಿದ್ದ ವಾಜಪೇಯಿ ರೈತರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/bjp-leader-amit-malviya-said-congress-leaders-least-bothered-about-manmohan-singh-875513.html" itemprop="url">ಕಾಂಗ್ರೆಸ್ ನಾಯಕರು ಸಿಂಗ್ರನ್ನು ನೋಡಲು ಹೋಗುವುದಿಲ್ಲ ಎಂದ ಅಮಿತ್ ಮಾಳವೀಯ </a></p>.<p>ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ವೈಫಲ್ಯ ಕಂಡಿವೆ. </p>.<p>ಈ ನಡುವೆ ರೈತರ ಬೆಂಬಲಕ್ಕಾಗಿ ಮಾಜಿ ಪ್ರಧಾನಿ ವಾಜಪೇಯಿ ಭಾಷಣದ ತುಣುಕನ್ನು ಹಂಚಿರುವ ವರುಣ್ ಗಾಂಧಿ, ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ವರುಣ್ ಗಾಂಧಿ, 'ವಿಶಾಲ ಹೃದಯದ ನಾಯಕನ ಜಾಣ್ಮೆಯ ಮಾತುಗಳು' ಎಂದು ಉಲ್ಲೇಖಿಸಿದ್ದಾರೆ.</p>.<p>ವಿಡಿಯೊ ತುಣುಕಿನಲ್ಲಿ ರೈತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿರುವ ವಾಜಪೇಯಿ, ಹೆದರದಂತೆ ರೈತರಿಗೆ ಧೈರ್ಯ ತುಂಬಿದ್ದಾರೆ. </p>.<p>'ಸರ್ಕಾರವು ರೈತರನ್ನು ದಮನಿಸಿದರೆ, ಕಾನೂನುಗಳನ್ನು ದುರುಪಯೋಗಪಡಿಸಿ ಶಾಂತಿಯುತ ಆಂದೋಲನವನ್ನು ನಿಗ್ರಹಿಸಿದರೆ ನಾವು ರೈತರ ಹೋರಾಟದೊಂದಿಗೆ ಸೇರಲು ಮತ್ತು ಅವರೊಂದಿಗೆ ನಿಲ್ಲಲು ಹಿಂಜರಿಯುವುದಿಲ್ಲ' ಎಂದು ವಾಜಪೇಯಿ ಎಚ್ಚರಿಸಿದ್ದರು.</p>.<p>ಲಂಖಿಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತರಿಗೆ ಬೆಂಬಲ ಸೂಚಿಸಿರುವ ವರುಣ್ ಗಾಂಧಿ, ತಪ್ಪಿತ್ತಸ್ಥರನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಬೇಡಿಕೆಯಿರಿಸಿದ್ದರು. ಇದು ಬಿಜೆಪಿಯಲ್ಲಿ ಇರಿಸು ಮುರಿಸು ಉಂಟು ಮಾಡಿತ್ತು. ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ವರುಣ್ ಗಾಂಧಿ ಅವರನ್ನು ಕೈಬಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>