<p><strong>ಡೆಹ್ರಾಡೂನ್(ಉತ್ತರಾಖಂಡ)</strong>: ಉತ್ತರಾಖಂಡದ ಪರ್ವತ ಪ್ರದೇಶಗಳ ಕುರಿತು ತಾವು ನೀಡಿದ್ದ ಹೇಳಿಕೆ ವಿವಾದ ಸ್ವರೂಪ ಪಡೆದು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಹಣಕಾಸು ಸಚಿವ ಪ್ರೇಮಚಂದ್ ಅಗರವಾಲ್ ತಮ್ಮ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಅವರ ಗೃಹ ಕಚೇರಿಗೆ ತೆರಳಿ, ಅಗರವಾಲ್ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಫೆಬ್ರುವರಿಯಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಮಾತನಾಡುವ ವೇಳೆ, ಕಾಂಗ್ರೆಸ್ ಶಾಸಕ ಮದನ್ ಬಿಷ್ಟ್ ಅವರು ಸಚಿವ ಅಗರವಾಲ್ ವಿರುದ್ಧ ಟೀಕೆ ಮಾಡಿದ್ದರು.</p>.<p>ಬಿಷ್ಟ್ ಮಾತಿಗೆ ಆಕ್ರೋಶಗೊಂಡು ಪ್ರತಿಕ್ರಿಯೆ ನೀಡಿದ್ದ ಅಗರವಾಲ್, ‘ಪರ್ವತ ಪ್ರದೇಶಗಳ ಜನರಿಗಾಗಿ ಉತ್ತರಾಖಂಡ ರಾಜ್ಯ ರಚಿಸಲಾಗಿದೆಯೇ? ಮುಂದೊಂದು ದಿನ ಪರ್ವತ ಪ್ರದೇಶ ಹಾಗೂ ಬಯಲು ಸೀಮೆ ಎಂಬುದಾಗಿ ಈ ರಾಜ್ಯ ಇಬ್ಭಾಗವಾಗುವುದನ್ನು ನೋಡುವುದಕ್ಕಾಗಿ ನಾನು ಹೋರಾಟ ನಡೆಸಿಲ್ಲ’ ಎಂದಿದ್ದರು.</p>.<p>ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ, ರಾಜ್ಯದ ಪರ್ವತ ಪ್ರದೇಶಗಳ ಜನರು ಅಗರವಾಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.</p>.<p>ನಂತರ, ಅಗರವಾಲ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಪಕ್ಷದ ರಾಜ್ಯ ಘಟಕ ಕೂಡ ಅಗರವಾಲ್ ಅವರಿಗೆ ಎಚ್ಚರಿಕೆ ನೀಡಿತ್ತಲ್ಲದೇ, ಸಂಯಮ ಕಾಯ್ದುಕೊಳ್ಳುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್(ಉತ್ತರಾಖಂಡ)</strong>: ಉತ್ತರಾಖಂಡದ ಪರ್ವತ ಪ್ರದೇಶಗಳ ಕುರಿತು ತಾವು ನೀಡಿದ್ದ ಹೇಳಿಕೆ ವಿವಾದ ಸ್ವರೂಪ ಪಡೆದು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಹಣಕಾಸು ಸಚಿವ ಪ್ರೇಮಚಂದ್ ಅಗರವಾಲ್ ತಮ್ಮ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಅವರ ಗೃಹ ಕಚೇರಿಗೆ ತೆರಳಿ, ಅಗರವಾಲ್ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಫೆಬ್ರುವರಿಯಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಮಾತನಾಡುವ ವೇಳೆ, ಕಾಂಗ್ರೆಸ್ ಶಾಸಕ ಮದನ್ ಬಿಷ್ಟ್ ಅವರು ಸಚಿವ ಅಗರವಾಲ್ ವಿರುದ್ಧ ಟೀಕೆ ಮಾಡಿದ್ದರು.</p>.<p>ಬಿಷ್ಟ್ ಮಾತಿಗೆ ಆಕ್ರೋಶಗೊಂಡು ಪ್ರತಿಕ್ರಿಯೆ ನೀಡಿದ್ದ ಅಗರವಾಲ್, ‘ಪರ್ವತ ಪ್ರದೇಶಗಳ ಜನರಿಗಾಗಿ ಉತ್ತರಾಖಂಡ ರಾಜ್ಯ ರಚಿಸಲಾಗಿದೆಯೇ? ಮುಂದೊಂದು ದಿನ ಪರ್ವತ ಪ್ರದೇಶ ಹಾಗೂ ಬಯಲು ಸೀಮೆ ಎಂಬುದಾಗಿ ಈ ರಾಜ್ಯ ಇಬ್ಭಾಗವಾಗುವುದನ್ನು ನೋಡುವುದಕ್ಕಾಗಿ ನಾನು ಹೋರಾಟ ನಡೆಸಿಲ್ಲ’ ಎಂದಿದ್ದರು.</p>.<p>ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ, ರಾಜ್ಯದ ಪರ್ವತ ಪ್ರದೇಶಗಳ ಜನರು ಅಗರವಾಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.</p>.<p>ನಂತರ, ಅಗರವಾಲ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಪಕ್ಷದ ರಾಜ್ಯ ಘಟಕ ಕೂಡ ಅಗರವಾಲ್ ಅವರಿಗೆ ಎಚ್ಚರಿಕೆ ನೀಡಿತ್ತಲ್ಲದೇ, ಸಂಯಮ ಕಾಯ್ದುಕೊಳ್ಳುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>