<p><strong>ಕೋಲ್ಕತ್ತ</strong>: ಕಲ್ಕತ್ತ ಹೈಕೋರ್ಟ್ನ ನ್ಯಾಯಮೂರ್ತಿ ರಂಜನ್ ದಾಶ್ ಅವರು, ಸೋಮವಾರ ನಿವೃತ್ತಿ ನಂತರದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾಡಿದ ವಿದಾಯ ಭಾಷಣದಲ್ಲಿ ನಾನು ಆರ್ಎಸ್ಎಸ್ ಕಾರ್ಯಕರ್ತ ಎಂದು ಹೇಳಿಕೊಂಡರು. </p>.<p>ನ್ಯಾಯಮೂರ್ತಿಗಳು, ವಕೀಲರ ಸಂಘದ ಸದಸ್ಯರ ಸಮ್ಮುಖದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮತ್ತೆ ಕರೆ ಬಂದರೆ ನಾನು ಆರ್ಎಸ್ಎಸ್ ಸೇವೆಗೆ ಮರಳಲು, ಯಾವುದೇ ಹೊಣೆ ನಿಭಾಯಿಸಲು ಸಿದ್ಧ’ ಎಂದರು.</p>.<p>ಈ ಮಾತು ಕೆಲವರಿಗೆ ಇಷ್ಟವಾಗದಿರಬಹುದು. ಆದರೆ, ನಾನು ಆರ್ಎಸ್ಎಸ್ನಲ್ಲಿ ಇದ್ದೆ. ಮತ್ತು ಈಗಲೂ ಆ ಸಂಘಟನೆಯ ಸದಸ್ಯ ಎಂಬುದನ್ನು ಒಪ್ಪಿಕೊಳ್ಳಲೇಬೇಕು ಎಂದು ಹೇಳಿದರು.</p>.<p>ನ್ಯಾಯಮೂರ್ತಿ ದಾಶ್ ಅವರು ಒಡಿಶಾ ಹೈಕೋರ್ಟ್ನಿಂದ ಇಲ್ಲಿಗೆ ವರ್ಗಾವಣೆಯಾಗಿದ್ದರು. ಕಲ್ಕತ್ತ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿ 14 ವರ್ಷ ಕಾರ್ಯನಿರ್ವಹಿಸಿದ್ದರು.</p>.<p>‘ಬಾಲ್ಯದಿಂದಲೂ ನಾನು ಆರ್ಎಸ್ಎಸ್ ಜೊತೆಗೆ ಗುರುತಿಸಿಕೊಂಡಿದ್ದೆನೆ. ಅಲ್ಲಿ ನಾನು ಧೈರ್ಯವನ್ನು ಒಗ್ಗೂಡಿಸಿಕೊಂಡಿದ್ದೇನೆ. ಎಲ್ಲರನ್ನು ಸಮಾನವಾಗಿ ಕಾಣುವ, ಮುಖ್ಯವಾಗಿ ದೇಶಭಕ್ತಿ ಹಾಗೂ ಕೆಲಸದಲ್ಲಿ ಬದ್ಧತೆಯನ್ನು ಕಲಿತಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಕಲ್ಕತ್ತ ಹೈಕೋರ್ಟ್ನ ನ್ಯಾಯಮೂರ್ತಿ ರಂಜನ್ ದಾಶ್ ಅವರು, ಸೋಮವಾರ ನಿವೃತ್ತಿ ನಂತರದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾಡಿದ ವಿದಾಯ ಭಾಷಣದಲ್ಲಿ ನಾನು ಆರ್ಎಸ್ಎಸ್ ಕಾರ್ಯಕರ್ತ ಎಂದು ಹೇಳಿಕೊಂಡರು. </p>.<p>ನ್ಯಾಯಮೂರ್ತಿಗಳು, ವಕೀಲರ ಸಂಘದ ಸದಸ್ಯರ ಸಮ್ಮುಖದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮತ್ತೆ ಕರೆ ಬಂದರೆ ನಾನು ಆರ್ಎಸ್ಎಸ್ ಸೇವೆಗೆ ಮರಳಲು, ಯಾವುದೇ ಹೊಣೆ ನಿಭಾಯಿಸಲು ಸಿದ್ಧ’ ಎಂದರು.</p>.<p>ಈ ಮಾತು ಕೆಲವರಿಗೆ ಇಷ್ಟವಾಗದಿರಬಹುದು. ಆದರೆ, ನಾನು ಆರ್ಎಸ್ಎಸ್ನಲ್ಲಿ ಇದ್ದೆ. ಮತ್ತು ಈಗಲೂ ಆ ಸಂಘಟನೆಯ ಸದಸ್ಯ ಎಂಬುದನ್ನು ಒಪ್ಪಿಕೊಳ್ಳಲೇಬೇಕು ಎಂದು ಹೇಳಿದರು.</p>.<p>ನ್ಯಾಯಮೂರ್ತಿ ದಾಶ್ ಅವರು ಒಡಿಶಾ ಹೈಕೋರ್ಟ್ನಿಂದ ಇಲ್ಲಿಗೆ ವರ್ಗಾವಣೆಯಾಗಿದ್ದರು. ಕಲ್ಕತ್ತ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿ 14 ವರ್ಷ ಕಾರ್ಯನಿರ್ವಹಿಸಿದ್ದರು.</p>.<p>‘ಬಾಲ್ಯದಿಂದಲೂ ನಾನು ಆರ್ಎಸ್ಎಸ್ ಜೊತೆಗೆ ಗುರುತಿಸಿಕೊಂಡಿದ್ದೆನೆ. ಅಲ್ಲಿ ನಾನು ಧೈರ್ಯವನ್ನು ಒಗ್ಗೂಡಿಸಿಕೊಂಡಿದ್ದೇನೆ. ಎಲ್ಲರನ್ನು ಸಮಾನವಾಗಿ ಕಾಣುವ, ಮುಖ್ಯವಾಗಿ ದೇಶಭಕ್ತಿ ಹಾಗೂ ಕೆಲಸದಲ್ಲಿ ಬದ್ಧತೆಯನ್ನು ಕಲಿತಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>