<p><strong>ಮುಂಬೈ:</strong> ಭೀಮಾ ಕೋರೆಗಾಂವ್ನಲ್ಲಿ 2018ರಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕೆಲವು ಹೋರಾಟಗಾರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸುತ್ತಿದೆ.</p>.<p>‘ಗಲಭೆಗೆ ಸಂಬಂಧಿಸಿದಂತೆ ಕೆಲವರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ದೂರು ದಾಖಲಿಸಲಾಗಿದೆ. ಅಂಥವರಿಗೆ ಪ್ರಕರಣದಿಂದ ಮುಕ್ತಿ ನೀಡಲು ಮಹಾ ವಿಕಾಸ ಆಘಾಡಿ ನೇತೃತ್ವದ ಸರ್ಕಾರ ಬಯಸುತ್ತದೆ’ ಎಂದು ಎನ್ಸಿಪಿ ಮುಖಂಡ, ಸಚಿವ ಜಯಂತ ಪಾಟೀಲ್ ಬುಧವಾರ ಹೇಳಿದ್ದಾರೆ.</p>.<p>‘ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ, ದೂರನ್ನು ವಾಪಸ್ ಬಡೆಯಬೇಕು ಎಂದು ಹಲವರು ನಮಗೆ ಮನವಿ ಸಲ್ಲಿಸಿದ್ದಾರೆ. ಯಾರಿಗೂ ಅನ್ಯಾಯ ಆಗಬಾರದು ಎಂಬುದು ಸರ್ಕಾರದ ಉದ್ದೇಶ. ಯಾರಿಗೂ ತೊಂದರೆ ಕೊಡಲು ನಾವು ಬಯಸುವುದಿಲ್ಲ. ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಳಿಯೇ ಇದೆ’ ಎಂದು ಪಾಟೀಲ್ ಹೇಳಿದ್ದಾರೆ.</p>.<p><strong>ಮಾವೊ ವಾದಕ್ಕೆ ಬೆಂಬಲ– ಬಿಜೆಪಿ ಟೀಕೆ:</strong> ‘ಭೀಮಾ ಕೋರೆಗಾಂವ್ ಗಲಭೆ ಕುರಿತ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದೆಂದರೆ ಮಾವೋ ವಾದಿಗಳಿಗೆ ಮುಕ್ತವಾಗಿ ಬೆಂಬಲ ನೀಡಿದಂತೆ’ ಎಂದು ಬಿಜೆಪಿ ವಕ್ತಾರ ಮಾಧವ ಭಂಡಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭೀಮಾ ಕೋರೆಗಾಂವ್ನಲ್ಲಿ 2018ರಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕೆಲವು ಹೋರಾಟಗಾರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸುತ್ತಿದೆ.</p>.<p>‘ಗಲಭೆಗೆ ಸಂಬಂಧಿಸಿದಂತೆ ಕೆಲವರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ದೂರು ದಾಖಲಿಸಲಾಗಿದೆ. ಅಂಥವರಿಗೆ ಪ್ರಕರಣದಿಂದ ಮುಕ್ತಿ ನೀಡಲು ಮಹಾ ವಿಕಾಸ ಆಘಾಡಿ ನೇತೃತ್ವದ ಸರ್ಕಾರ ಬಯಸುತ್ತದೆ’ ಎಂದು ಎನ್ಸಿಪಿ ಮುಖಂಡ, ಸಚಿವ ಜಯಂತ ಪಾಟೀಲ್ ಬುಧವಾರ ಹೇಳಿದ್ದಾರೆ.</p>.<p>‘ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ, ದೂರನ್ನು ವಾಪಸ್ ಬಡೆಯಬೇಕು ಎಂದು ಹಲವರು ನಮಗೆ ಮನವಿ ಸಲ್ಲಿಸಿದ್ದಾರೆ. ಯಾರಿಗೂ ಅನ್ಯಾಯ ಆಗಬಾರದು ಎಂಬುದು ಸರ್ಕಾರದ ಉದ್ದೇಶ. ಯಾರಿಗೂ ತೊಂದರೆ ಕೊಡಲು ನಾವು ಬಯಸುವುದಿಲ್ಲ. ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಳಿಯೇ ಇದೆ’ ಎಂದು ಪಾಟೀಲ್ ಹೇಳಿದ್ದಾರೆ.</p>.<p><strong>ಮಾವೊ ವಾದಕ್ಕೆ ಬೆಂಬಲ– ಬಿಜೆಪಿ ಟೀಕೆ:</strong> ‘ಭೀಮಾ ಕೋರೆಗಾಂವ್ ಗಲಭೆ ಕುರಿತ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದೆಂದರೆ ಮಾವೋ ವಾದಿಗಳಿಗೆ ಮುಕ್ತವಾಗಿ ಬೆಂಬಲ ನೀಡಿದಂತೆ’ ಎಂದು ಬಿಜೆಪಿ ವಕ್ತಾರ ಮಾಧವ ಭಂಡಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>