<p><strong>ಚಂಡೀಗಡ:</strong> ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವರ್ಚಸ್ಸು ದೇಶದೆಲ್ಲೆಡೆ ದಿನೇದಿನೇ ಹೆಚ್ಚುತ್ತಿದೆ. ಹರಿಯಾಣ ಜಿಲ್ಲಾ ಪಂಚಾಯ್ತಿ ಚುನಾವಣೆ ಫಲಿತಾಂಶ ಭಾನುವಾರ ಘೋಷಣೆಯಾಗಿದ್ದು, ಬಿಜೆಪಿ, ಆಮ್ ಆದ್ಮಿ ಮತ್ತು ಲೋಕದಳ್ ಪಕ್ಷಗಳು ಪ್ರಾಬಲ್ಯ ಮೆರೆದಿವೆ.</p>.<p><br />ಅಂಬ್ಲ, ಯಮುನಾನಗರ ಮತ್ತು ಗುರುಗ್ರಾಮ ಸೇರಿದಂತೆ ಏಳು ಜಿಲ್ಲೆಗಳ ಜಿಲ್ಲಾ ಪಂಚಾಯ್ತಿಯ 102 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ 22 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಚ್ಚರಿಯ ಫಲಿತಾಂಶ ನೀಡಿರುವ ಆಮ್ ಆದ್ಮಿ ಪಕ್ಷ ಸಿರ್ಸ, ಅಂಬ್ಲ, ಯಮುನಾನಗರ ಮತ್ತು ಜಿಂದ್ ಜಿಲ್ಲೆಗಳ 15 ಸ್ಥಾನಗಳಲ್ಲಿ ಜಯಶಾಲಿಯಾಗಿದೆ.</p>.<p>ಎಎಪಿ 100 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಭಾರತ ರಾಷ್ಟ್ರೀಯ ಲೋಕ ದಳ 14 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ. ಪಕ್ಷವು 72 ಕ್ಷೇತ್ರಗಳಲ್ಲಿ ಕಣದಲ್ಲಿತ್ತು. ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿರಲಿಲ್ಲ. ಸಾಕಷ್ಟು ಪಕ್ಷೇತರ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವರ್ಚಸ್ಸು ದೇಶದೆಲ್ಲೆಡೆ ದಿನೇದಿನೇ ಹೆಚ್ಚುತ್ತಿದೆ. ಹರಿಯಾಣ ಜಿಲ್ಲಾ ಪಂಚಾಯ್ತಿ ಚುನಾವಣೆ ಫಲಿತಾಂಶ ಭಾನುವಾರ ಘೋಷಣೆಯಾಗಿದ್ದು, ಬಿಜೆಪಿ, ಆಮ್ ಆದ್ಮಿ ಮತ್ತು ಲೋಕದಳ್ ಪಕ್ಷಗಳು ಪ್ರಾಬಲ್ಯ ಮೆರೆದಿವೆ.</p>.<p><br />ಅಂಬ್ಲ, ಯಮುನಾನಗರ ಮತ್ತು ಗುರುಗ್ರಾಮ ಸೇರಿದಂತೆ ಏಳು ಜಿಲ್ಲೆಗಳ ಜಿಲ್ಲಾ ಪಂಚಾಯ್ತಿಯ 102 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ 22 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಚ್ಚರಿಯ ಫಲಿತಾಂಶ ನೀಡಿರುವ ಆಮ್ ಆದ್ಮಿ ಪಕ್ಷ ಸಿರ್ಸ, ಅಂಬ್ಲ, ಯಮುನಾನಗರ ಮತ್ತು ಜಿಂದ್ ಜಿಲ್ಲೆಗಳ 15 ಸ್ಥಾನಗಳಲ್ಲಿ ಜಯಶಾಲಿಯಾಗಿದೆ.</p>.<p>ಎಎಪಿ 100 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಭಾರತ ರಾಷ್ಟ್ರೀಯ ಲೋಕ ದಳ 14 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ. ಪಕ್ಷವು 72 ಕ್ಷೇತ್ರಗಳಲ್ಲಿ ಕಣದಲ್ಲಿತ್ತು. ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿರಲಿಲ್ಲ. ಸಾಕಷ್ಟು ಪಕ್ಷೇತರ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>