<p><strong>ಕೋಲ್ಕತ್ತ:</strong> ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಅವರ ಪುತ್ರ ಸುಭ್ರಾಘ್ಷು ರಾಯ್ ಬಿಜೆಪಿ ತೊರೆದು ಶುಕ್ರವಾರ ಮತ್ತೆ ತೃಣಮೂಲ ಕಾಂಗ್ರೆಸ್ಗೆ (ಟಿಎಂಸಿ) ಸೇರ್ಪಡೆಯಾಗಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಮುಕುಲ್ ನಮ್ಮ ಪಕ್ಷಕ್ಕೆ ಮರಳಿದ್ದಾರೆ. ವಿಧಾನಸಭೆ ಚುನಾವಣೆ ಸಮಯದಲ್ಲಿ ಅವರು ನಮ್ಮೊಂದಿಗೆ ಯಾವುದೇ ವಿಚಾರಗಳನ್ನು ಹಂಚಿಕೊಂಡಿರಲಿಲ್ಲ’ ಎಂದು ಹೇಳಿದರು.</p>.<p>‘ಚುನಾವಣೆ ಸಂದರ್ಭದಲ್ಲಿ ಟಿಎಂಸಿ ಬಗ್ಗೆ ಕೀಳಾಗಿ ಮಾತನಾಡಿದವರನ್ನು ಯಾವುದೇ ಕಾರಣಕ್ಕೂ ಮರಳಿ ಪಕ್ಷಕ್ಕೆ ಬರಮಾಡಿಕೊಳ್ಳುವುದಿಲ್ಲ’ ಎಂದು ಮಮತಾ ಸ್ಪಷ್ಟಪಡಿಸಿದ್ದಾರೆ.</p>.<p>ಈ ಕುರಿತು ಟಿಎಂಸಿ ಮುಖಂಡ ಪಾರ್ಥ ಚಟ್ಟೋಪಾಧ್ಯಾಯ ಮಾತನಾಡಿ, ರಾಯ್ ಮರಳಿ ಪಕ್ಷಕ್ಕೆ ಸೇರುತ್ತಿರುವ ಬಗ್ಗೆ ಫೋಷಿಸಿದ್ದಾರೆ.<br />ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ ಅವರು ಮುಕುಲ್ ರಾಯ್, ಸುಭ್ರಾಘ್ಷು ರಾಯ್ ಅವರನ್ನು ಸ್ವಾಗತಿಸಿದ್ದಾರೆ.</p>.<p>ಮುಕುಲ್ ರಾಯ್ ಮಮತಾ ಬ್ಯಾನರ್ಜಿ ಅವರ ಆಪ್ತ ಬಳಗದಲ್ಲಿದ್ದ ಗುರುತಿಸಿಕೊಂಡಿದ್ದ ಮುಖಂಡ. 2017ರಲ್ಲಿ ಅವರು ಬಿಜೆಪಿ ಸೇರ್ಪಡೆಗೊಂಡಿದ್ದರು.</p>.<p><a href="https://www.prajavani.net/india-news/yogi-adityanath-calls-on-prime-minister-narendra-modi-837918.html" itemprop="url">ಪ್ರಧಾನಿ ಮೋದಿಯವರನ್ನು ಭೇಟಿಯಾದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ </a></p>.<p>ಮುಕುಲ್ ರಾಯ್ ಅವರು ಬಿಜೆಪಿಯ ಪ್ರಮುಖ ಸಭೆಗೆ ಗೈರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೋವಿಡ್ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಕುಲ್ ರಾಯ್ ಅವರ ಪತ್ನಿಯನ್ನು ಭೇಟಿಯಾಗಿದ್ದ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆರೋಗ್ಯ ವಿಚಾರಿಸಿದ್ದರು.</p>.<p><a href="https://www.prajavani.net/india-news/doctors-are-gods-envoy-on-earth-ramdev-somersaults-says-will-take-covid-19-vaccine-837892.html" itemprop="url">ವೈದ್ಯರು ದೇವದೂತರು, ಶೀಘ್ರದಲ್ಲೇ ಲಸಿಕೆ ಪಡೆಯುವೆ: ಬಾಬಾ ರಾಮದೇವ್ </a></p>.<p>ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಮುಕುಲ್ ರಾಯ್ ಅವರು ಪಶ್ಚಿಮ ಬಂಗಾಳದ ಕೃಷ್ಣ ನಗರದ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ.</p>.<p><a href="https://www.prajavani.net/india-news/pilot-loyalists-want-resolution-of-issues-raised-by-him-in-rajasthan-837898.html" itemprop="url">ರಾಜಸ್ಥಾನ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಅಸಮಾಧಾನ: ಪೈಲಟ್ ಬೆಂಬಲಿಗರ ಸಭೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಅವರ ಪುತ್ರ ಸುಭ್ರಾಘ್ಷು ರಾಯ್ ಬಿಜೆಪಿ ತೊರೆದು ಶುಕ್ರವಾರ ಮತ್ತೆ ತೃಣಮೂಲ ಕಾಂಗ್ರೆಸ್ಗೆ (ಟಿಎಂಸಿ) ಸೇರ್ಪಡೆಯಾಗಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಮುಕುಲ್ ನಮ್ಮ ಪಕ್ಷಕ್ಕೆ ಮರಳಿದ್ದಾರೆ. ವಿಧಾನಸಭೆ ಚುನಾವಣೆ ಸಮಯದಲ್ಲಿ ಅವರು ನಮ್ಮೊಂದಿಗೆ ಯಾವುದೇ ವಿಚಾರಗಳನ್ನು ಹಂಚಿಕೊಂಡಿರಲಿಲ್ಲ’ ಎಂದು ಹೇಳಿದರು.</p>.<p>‘ಚುನಾವಣೆ ಸಂದರ್ಭದಲ್ಲಿ ಟಿಎಂಸಿ ಬಗ್ಗೆ ಕೀಳಾಗಿ ಮಾತನಾಡಿದವರನ್ನು ಯಾವುದೇ ಕಾರಣಕ್ಕೂ ಮರಳಿ ಪಕ್ಷಕ್ಕೆ ಬರಮಾಡಿಕೊಳ್ಳುವುದಿಲ್ಲ’ ಎಂದು ಮಮತಾ ಸ್ಪಷ್ಟಪಡಿಸಿದ್ದಾರೆ.</p>.<p>ಈ ಕುರಿತು ಟಿಎಂಸಿ ಮುಖಂಡ ಪಾರ್ಥ ಚಟ್ಟೋಪಾಧ್ಯಾಯ ಮಾತನಾಡಿ, ರಾಯ್ ಮರಳಿ ಪಕ್ಷಕ್ಕೆ ಸೇರುತ್ತಿರುವ ಬಗ್ಗೆ ಫೋಷಿಸಿದ್ದಾರೆ.<br />ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ ಅವರು ಮುಕುಲ್ ರಾಯ್, ಸುಭ್ರಾಘ್ಷು ರಾಯ್ ಅವರನ್ನು ಸ್ವಾಗತಿಸಿದ್ದಾರೆ.</p>.<p>ಮುಕುಲ್ ರಾಯ್ ಮಮತಾ ಬ್ಯಾನರ್ಜಿ ಅವರ ಆಪ್ತ ಬಳಗದಲ್ಲಿದ್ದ ಗುರುತಿಸಿಕೊಂಡಿದ್ದ ಮುಖಂಡ. 2017ರಲ್ಲಿ ಅವರು ಬಿಜೆಪಿ ಸೇರ್ಪಡೆಗೊಂಡಿದ್ದರು.</p>.<p><a href="https://www.prajavani.net/india-news/yogi-adityanath-calls-on-prime-minister-narendra-modi-837918.html" itemprop="url">ಪ್ರಧಾನಿ ಮೋದಿಯವರನ್ನು ಭೇಟಿಯಾದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ </a></p>.<p>ಮುಕುಲ್ ರಾಯ್ ಅವರು ಬಿಜೆಪಿಯ ಪ್ರಮುಖ ಸಭೆಗೆ ಗೈರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೋವಿಡ್ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಕುಲ್ ರಾಯ್ ಅವರ ಪತ್ನಿಯನ್ನು ಭೇಟಿಯಾಗಿದ್ದ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆರೋಗ್ಯ ವಿಚಾರಿಸಿದ್ದರು.</p>.<p><a href="https://www.prajavani.net/india-news/doctors-are-gods-envoy-on-earth-ramdev-somersaults-says-will-take-covid-19-vaccine-837892.html" itemprop="url">ವೈದ್ಯರು ದೇವದೂತರು, ಶೀಘ್ರದಲ್ಲೇ ಲಸಿಕೆ ಪಡೆಯುವೆ: ಬಾಬಾ ರಾಮದೇವ್ </a></p>.<p>ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಮುಕುಲ್ ರಾಯ್ ಅವರು ಪಶ್ಚಿಮ ಬಂಗಾಳದ ಕೃಷ್ಣ ನಗರದ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ.</p>.<p><a href="https://www.prajavani.net/india-news/pilot-loyalists-want-resolution-of-issues-raised-by-him-in-rajasthan-837898.html" itemprop="url">ರಾಜಸ್ಥಾನ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಅಸಮಾಧಾನ: ಪೈಲಟ್ ಬೆಂಬಲಿಗರ ಸಭೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>