ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಊಟಿ ಬಳಿ ಕಾಡಾನೆ ದಾಳಿ: ಕಾರ್ಮಿಕ ಸಾವು

Published 25 ನವೆಂಬರ್ 2023, 13:55 IST
Last Updated 25 ನವೆಂಬರ್ 2023, 13:55 IST
ಅಕ್ಷರ ಗಾತ್ರ

ಉದಕಮಂಡಲ (ತಮಿಳುನಾಡು): ತೋಟದಿಂದ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಕಾರ್ಮಿಕನೊಬ್ಬ ಕಾಡಾನೆ ದಾಳಿಯಿಂದ ಮೃತಪಟ್ಟಿರುವ ಘಟನೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗುಡಲೂರು ಬಳಿ ನಡೆದಿದೆ.

ಇದೇ ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದು ಆತನನ್ನು ಗುಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವ್ಯಕ್ತಿಯನ್ನು ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಫ್ರಾನ್ಸಿನ್ ಅವರನ್ನು ಊಟಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಶನಿವಾರ ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT