<p><strong>ಅಹಮದಾಬಾದ್: </strong>ಬಿಜೆಪಿ ಸಂಸದ ಮತ್ತು ಕೇಂದ್ರದ ಮಾಜಿ ಸಚಿವ ಮನಸುಖ್ ಭಾಯಿ ವಸಾವಾ ಅವರು ಪಕ್ಷಕ್ಕೆ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.</p>.<p>ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ವಸಾವಾ,‘ ಸಂಸದನಾಗಿ ಮುಂದುವರಿದರೆ ಮಾತ್ರ ಬೆನ್ನು ನೋವು ಮತ್ತು ಕುತ್ತಿಗೆ ನೋವಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯ. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಆ ಸೌಲಭ್ಯ ನನಗೆ ಸಿಗುವುದಿಲ್ಲ . ಹಾಗಾಗಿ ಸ್ವಲ್ಪ ಸಮಯ ವಿಶ್ರಾಂತಿ ತೆಗೆದುಕೊಂಡು ಮತ್ತೆ ಕೆಲಸಗಳಲ್ಲಿ ಭಾಗಿಯಾಗುವಂತೆ ಹಿರಿಯ ನಾಯಕರು ನನಗೆ ಸಲಹೆ ನೀಡಿದರು’ ಎಂದರು.</p>.<p>‘ಈ ಬಗ್ಗೆ ಮುಖ್ಯ ಜೊತೆ ಚರ್ಚೆ ನಡೆಸಿದ್ದೇನೆ. ಬಿಜೆಪಿಯ ಹಿರಿಯ ನಾಯಕರು ಸಮಾಧಾನಪಡಿಸಿದರು. ಹಾಗಾಗಿ ರಾಜೀನಾಮೆ ಹಿಂಪಡೆದು, ಪಕ್ಷದಲ್ಲಿ ಮುಂದುವರಿಯಲಿದ್ದೇನೆ. ಅಲ್ಲದೆ ಸಂಸದನಾಗಿ ಸೇವೆ ಸಲ್ಲಿಸಲು ನಿರ್ಧರಿಸಿದ್ದೇನೆ’ ಎಂದು ತಿಳಿಸಿದರು.</p>.<p>ವಸಾವಾ ಅವರು ಬಿಜೆಪಿ ತೊರೆಯುವುದಾಗಿ ಮಂಗಳವಾರ ಅಷ್ಟೇ ಘೋಷಿಸಿದ್ದರು.</p>.<p>ನರ್ಮದಾ ಜಿಲ್ಲೆಯ ಬುಡಕಟ್ಟು ಜನಾಂಗಕ್ಕೆ ಸಂಬಂಧಿಸಿದ ವಿಷಯ ಮತ್ತು 121 ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯದಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ವಸಾವಾ ಅವರಿಗೆ ಸರ್ಕಾರದ ಮೇಲೆ ಅಸಮಾಧಾನವಿತ್ತು. ಅದಕ್ಕಾಗಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ವಸಾವಾ ಅವರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್: </strong>ಬಿಜೆಪಿ ಸಂಸದ ಮತ್ತು ಕೇಂದ್ರದ ಮಾಜಿ ಸಚಿವ ಮನಸುಖ್ ಭಾಯಿ ವಸಾವಾ ಅವರು ಪಕ್ಷಕ್ಕೆ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.</p>.<p>ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ವಸಾವಾ,‘ ಸಂಸದನಾಗಿ ಮುಂದುವರಿದರೆ ಮಾತ್ರ ಬೆನ್ನು ನೋವು ಮತ್ತು ಕುತ್ತಿಗೆ ನೋವಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯ. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಆ ಸೌಲಭ್ಯ ನನಗೆ ಸಿಗುವುದಿಲ್ಲ . ಹಾಗಾಗಿ ಸ್ವಲ್ಪ ಸಮಯ ವಿಶ್ರಾಂತಿ ತೆಗೆದುಕೊಂಡು ಮತ್ತೆ ಕೆಲಸಗಳಲ್ಲಿ ಭಾಗಿಯಾಗುವಂತೆ ಹಿರಿಯ ನಾಯಕರು ನನಗೆ ಸಲಹೆ ನೀಡಿದರು’ ಎಂದರು.</p>.<p>‘ಈ ಬಗ್ಗೆ ಮುಖ್ಯ ಜೊತೆ ಚರ್ಚೆ ನಡೆಸಿದ್ದೇನೆ. ಬಿಜೆಪಿಯ ಹಿರಿಯ ನಾಯಕರು ಸಮಾಧಾನಪಡಿಸಿದರು. ಹಾಗಾಗಿ ರಾಜೀನಾಮೆ ಹಿಂಪಡೆದು, ಪಕ್ಷದಲ್ಲಿ ಮುಂದುವರಿಯಲಿದ್ದೇನೆ. ಅಲ್ಲದೆ ಸಂಸದನಾಗಿ ಸೇವೆ ಸಲ್ಲಿಸಲು ನಿರ್ಧರಿಸಿದ್ದೇನೆ’ ಎಂದು ತಿಳಿಸಿದರು.</p>.<p>ವಸಾವಾ ಅವರು ಬಿಜೆಪಿ ತೊರೆಯುವುದಾಗಿ ಮಂಗಳವಾರ ಅಷ್ಟೇ ಘೋಷಿಸಿದ್ದರು.</p>.<p>ನರ್ಮದಾ ಜಿಲ್ಲೆಯ ಬುಡಕಟ್ಟು ಜನಾಂಗಕ್ಕೆ ಸಂಬಂಧಿಸಿದ ವಿಷಯ ಮತ್ತು 121 ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯದಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ವಸಾವಾ ಅವರಿಗೆ ಸರ್ಕಾರದ ಮೇಲೆ ಅಸಮಾಧಾನವಿತ್ತು. ಅದಕ್ಕಾಗಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ವಸಾವಾ ಅವರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>