<p><strong>ನವದೆಹಲಿ:</strong> ಆರ್ಥಿಕವಾಗಿ ದುರ್ಬಲ ವರ್ಗ(ಇಡಬ್ಲ್ಯುಎಸ್) ಕೋಟಾ ಅಡಿ ಮೀಸಲಾತಿ ಕೇಳುವ ಅಭ್ಯರ್ಥಿಯು ಕಟ್ಆಫ್ ದಿನ ಅಥವಾ ಅದಕ್ಕೂ ಮುಂಚಿನ ದಿನಾಂಕದೊಳಗಾಗಿ ನಿರ್ದಿಷ್ಟ ಹಣಕಾಸು ವರ್ಷಕ್ಕೆ ಸಂಬಂಧಿಸಿ ನಿಗದಿತ ನಮೂನೆಯಲ್ಲಿ ಆದಾಯ ಮತ್ತು ಸ್ವತ್ತುಗಳ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ನಿರ್ದಿಷ್ಟ ಹಣಕಾಸು ವರ್ಷಕ್ಕೆ ಸಂಬಂಧಿಸಿದ ಪ್ರಮಾಣಪತ್ರ ಸಲ್ಲಿಸಲು ಹೇಳಿದಾಗ, ಬೇರೊಂದು ವಿತ್ತೀಯ ವರ್ಷದ ಪ್ರಮಾಣಪತ್ರ ಸಲ್ಲಿಸಿದಲ್ಲಿ ಅದು ಮೀಸಲಾತಿ ಕೇಳುವ ಅಭ್ಯರ್ಥಿಯ ಅರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಲಿದೆ ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಹಾಗೂ ಪಿ.ಬಿ.ವರಾಳೆ ಅವರು ಇದ್ದ ಪೀಠವು ಈ ಕುರಿತ ಅರ್ಜಿ ವಿಚಾರಣೆ ವೇಳೆ ಈ ಮಾತು ಹೇಳಿದೆ.</p>.<p>ಅಲಹಾಬಾದ್ ಹೈಕೋರ್ಟ್ನ ವಿಭಾಗೀಯ ಪೀಠವು 2023ರ ಜನವರಿ 9ರಂದು ನೀಡಿದ್ದ ಆದೇಶ ಪ್ರಶ್ನಿಸಿ ಪೂನಂ ದ್ವಿವೇದಿ ಹಾಗೂ ಇತರರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಪೀಠವು ವಜಾಗೊಳಿಸಿದೆ.</p>.<p>ಅರ್ಜಿದಾರರನ್ನು ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಪರಿಗಣಿಸುವಂತೆ ಹೈಕೋರ್ಟ್ನ ಏಕಸದಸ್ಯ ಪೀಠವೊಂದು ಉತ್ತರ ಪ್ರದೇಶದ ಅಧೀನ ಸೇವೆಗಳ ನೇಮಕಾತಿ ಆಯೋಗಕ್ಕೆ ನೀಡಿದ್ದ ಆದೇಶವನ್ನು ಕೂಡ ಸುಪ್ರೀಂ ಕೋರ್ಟ್ ರದ್ದು ಮಾಡಿದೆ.</p>.<p>ಈ ಪ್ರಕರಣದಲ್ಲಿ, ಮೇಲ್ಮನವಿದಾರರು ನಿಗದಿತ ನಮೂನೆಯಲ್ಲಿರುವ ಅಗತ್ಯ ಪ್ರಮಾಣಪತ್ರಗಳನ್ನು ಕಟ್ ಆಫ್ ದಿನದಂದು ಹೊಂದಿರಲಿಲ್ಲ. ಹೀಗಾಗಿ ಅವರಿಗೆ ಯಾವುದೇ ಪರಿಹಾರ ನೀಡಲು ಸಾಧ್ಯ ಇಲ್ಲ ಎಂದು ಏಪ್ರಿಲ್ 10ರಂದು ನೀಡಿರುವ ತೀರ್ಪಿನಲ್ಲಿ ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆರ್ಥಿಕವಾಗಿ ದುರ್ಬಲ ವರ್ಗ(ಇಡಬ್ಲ್ಯುಎಸ್) ಕೋಟಾ ಅಡಿ ಮೀಸಲಾತಿ ಕೇಳುವ ಅಭ್ಯರ್ಥಿಯು ಕಟ್ಆಫ್ ದಿನ ಅಥವಾ ಅದಕ್ಕೂ ಮುಂಚಿನ ದಿನಾಂಕದೊಳಗಾಗಿ ನಿರ್ದಿಷ್ಟ ಹಣಕಾಸು ವರ್ಷಕ್ಕೆ ಸಂಬಂಧಿಸಿ ನಿಗದಿತ ನಮೂನೆಯಲ್ಲಿ ಆದಾಯ ಮತ್ತು ಸ್ವತ್ತುಗಳ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ನಿರ್ದಿಷ್ಟ ಹಣಕಾಸು ವರ್ಷಕ್ಕೆ ಸಂಬಂಧಿಸಿದ ಪ್ರಮಾಣಪತ್ರ ಸಲ್ಲಿಸಲು ಹೇಳಿದಾಗ, ಬೇರೊಂದು ವಿತ್ತೀಯ ವರ್ಷದ ಪ್ರಮಾಣಪತ್ರ ಸಲ್ಲಿಸಿದಲ್ಲಿ ಅದು ಮೀಸಲಾತಿ ಕೇಳುವ ಅಭ್ಯರ್ಥಿಯ ಅರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಲಿದೆ ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಹಾಗೂ ಪಿ.ಬಿ.ವರಾಳೆ ಅವರು ಇದ್ದ ಪೀಠವು ಈ ಕುರಿತ ಅರ್ಜಿ ವಿಚಾರಣೆ ವೇಳೆ ಈ ಮಾತು ಹೇಳಿದೆ.</p>.<p>ಅಲಹಾಬಾದ್ ಹೈಕೋರ್ಟ್ನ ವಿಭಾಗೀಯ ಪೀಠವು 2023ರ ಜನವರಿ 9ರಂದು ನೀಡಿದ್ದ ಆದೇಶ ಪ್ರಶ್ನಿಸಿ ಪೂನಂ ದ್ವಿವೇದಿ ಹಾಗೂ ಇತರರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಪೀಠವು ವಜಾಗೊಳಿಸಿದೆ.</p>.<p>ಅರ್ಜಿದಾರರನ್ನು ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಪರಿಗಣಿಸುವಂತೆ ಹೈಕೋರ್ಟ್ನ ಏಕಸದಸ್ಯ ಪೀಠವೊಂದು ಉತ್ತರ ಪ್ರದೇಶದ ಅಧೀನ ಸೇವೆಗಳ ನೇಮಕಾತಿ ಆಯೋಗಕ್ಕೆ ನೀಡಿದ್ದ ಆದೇಶವನ್ನು ಕೂಡ ಸುಪ್ರೀಂ ಕೋರ್ಟ್ ರದ್ದು ಮಾಡಿದೆ.</p>.<p>ಈ ಪ್ರಕರಣದಲ್ಲಿ, ಮೇಲ್ಮನವಿದಾರರು ನಿಗದಿತ ನಮೂನೆಯಲ್ಲಿರುವ ಅಗತ್ಯ ಪ್ರಮಾಣಪತ್ರಗಳನ್ನು ಕಟ್ ಆಫ್ ದಿನದಂದು ಹೊಂದಿರಲಿಲ್ಲ. ಹೀಗಾಗಿ ಅವರಿಗೆ ಯಾವುದೇ ಪರಿಹಾರ ನೀಡಲು ಸಾಧ್ಯ ಇಲ್ಲ ಎಂದು ಏಪ್ರಿಲ್ 10ರಂದು ನೀಡಿರುವ ತೀರ್ಪಿನಲ್ಲಿ ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>