ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್ನ ಬೌದ್ಧ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್(ಬಿಡಿಪಿಎಲ್) ಸಂಸ್ಥೆಗೆ ಸೇರಿದ ಸ್ಥಳಗಳ ಮೇಲೆ ಆದಾಯ ತೆರಿಗೆ (ಐ-ಟಿ) ಇಲಾಖೆಯು ದಾಳಿ ನಡೆಸಿದ್ದು, ನಿನ್ನೆಯವರೆಗೆ ಕಂಪನಿಗೆ ಸಂಬಂಧಿಸಿದ ಸ್ಥಳಗಳಿಂದ ಅಪಾರ ಪ್ರಮಾಣದ ನಗದನ್ನು ವಶಪಡಿಸಿಕೊಂಡಿದೆ.
ಅಧಿಕಾರಿಗಳ ಪ್ರಕಾರ, ಒಡಿಶಾದ ಬೋಲಂಗಿರ್ ಮತ್ತು ಸಂಬಲ್ಪುರ ಹಾಗೂ ಜಾರ್ಖಂಡ್ನ ರಾಂಚಿ, ಲೋಹರ್ದಗಾದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ನಿನ್ನೆಯವರೆಗೆ ₹50 ಕೋಟಿ ನೋಟುಗಳ ಎಣಿಕೆ ಪೂರ್ಣಗೊಂಡಿದೆ ಆದರೆ, ಎಣಿಕೆ ಮಾಡಬೇಕಾದ ನೋಟಿನ ಕಂತೆಗಳ ಸಂಖ್ಯೆ ಬಹಳಷ್ಟು ಹೆಚ್ಚಿದ್ದು, ಎಣಿಕೆ ಯಂತ್ರಗಳು ಕೈಕೊಟ್ಟಿದ್ದರಿಂದ ಎಣಿಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಬಿಡಿಪಿಎಲ್ ಸಂಸ್ಥೆಯು ರಾಜ್ಯಸಭಾ ಸದಸ್ಯ ಧೀರಜ್ ಸಾಹು ಜೊತೆ ವ್ಯಾವಹಾರಿಕ ಸಂಬಂಧ ಹೊಂದಿದೆ. ಬುಧವಾರ ಬೆಳಿಗ್ಗೆಯಿಂದ ಈ ದಾಳಿ ನಡೆಯುತ್ತಿದ್ದು, ಒಡಿಶಾದ 4 ಮತ್ತು ಜಾರ್ಖಂಡ್ನ ಎರಡು ಪ್ರದೇಶಗಳಲ್ಲಿ ಶೋಧ ನಡೆಯುತ್ತಿದೆ.