ರಾಯ್ಬರೇಲಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಗೆ ಚುನಾವಣೆ ಸೋಲಿನ ಭಯ ಎದುರಾಗಿದೆ. ಈಗ ಐಟಿ ದಾಳಿ ಮಾಡಿಸುತ್ತಿದ್ದಾರೆ. ಬಳಿಕ ಜಾರಿ ನಿರ್ದೇಶನಾಲಯ (ಇ.ಡಿ), ಸಿಬಿಐ ದಾಳಿ ನಡೆಸಬಹುದು. ಇದಕ್ಕೂ ಮುನ್ನ ಯಾಕೆ ಈ ದಾಳಿಗಳು ನಡೆದಿಲ್ಲ? ಚುನಾವಣೆ ಸಮೀಪಿಸಿದಾಗಲೇ ಯಾಕೆ? ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೆಣಸಲು ಐಟಿ ಇಲಾಖೆಯೂ ಮುಂದಾಗಿದೆ. ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಲಿದೆ’ ಎಂದು ಹೇಳಿದ್ದಾರೆ.