<p><strong>ನವದೆಹಲಿ:</strong> ಭಾರತ ಮತ್ತು ಪಾಕಿಸ್ತಾನದ ನಡುವೆ ಈಚೆಗೆ ನಡೆದ ಸಂಘರ್ಷವು ‘ಕಾಶ್ಮೀರದಲ್ಲಿನ ಸಂಘರ್ಷ’ ಆಗಿರಲಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.</p>.<p>ಈ ರೀತಿಯ ವಿವರಣೆಗಳಿಂದ ಪಹಲ್ಗಾಮ್ ದಾಳಿಯ ಸೂತ್ರಧಾರ ಹಾಗೂ ದಾಳಿಯ ಸಂತ್ರಸ್ತರನ್ನು ಒಂದೇ ತಕ್ಕಡಿಯಲ್ಲಿ ಇರಿಸಿದಂತೆ ಆಗುತ್ತದೆ ಎಂದು ಅವರು ಹೇಳಿದ್ದಾರೆ.</p>.<p class="bodytext">ಪಹಲ್ಗಾಮ್ನಲ್ಲಿ ನಡೆದ ಭಯಾನಕ ದಾಳಿಯು ತೀವ್ರ ಸ್ವರೂಪದ ಭೀತಿಯನ್ನು ಸೃಷ್ಟಿಸಿ, ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ ವಲಯವನ್ನು ಹಾಳುಮಾಡುವ ಹಾಗೂ ಧಾರ್ಮಿಕ ವೈಷಮ್ಯ ಸೃಷ್ಟಿಸುವ ಉದ್ದೇಶ ಹೊಂದಿತ್ತು ಎಂದು ಅವರು ವಿವರಿಸಿದ್ದಾರೆ.</p>.<p class="bodytext">ವಿದೇಶ ಸಂಬಂಧಗಳ ಕುರಿತ ಜರ್ಮನ್ ಪರಿಷತ್ತಿನ ಜೊತೆ ಬರ್ಲಿನ್ನಲ್ಲಿ ನಡೆಸಿದ ಸಂವಾದದಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ. ‘ಕಾಶ್ಮೀರದಲ್ಲಿನ ಸಂಘರ್ಷದ ಅಂತರರಾಷ್ಟ್ರೀಯ ಪರಿಣಾಮಗಳ’ ಬಗ್ಗೆ ಪ್ರಶ್ನಿಸಿದಾಗ ಜೈಶಂಕರ್ ಅವರು, ‘ಇದು ಕಾಶ್ಮೀರದಲ್ಲಿನ ಸಂಘರ್ಷ ಅಲ್ಲ, ಇದೊಂದು ಭಯೋತ್ಪಾದಕ ದಾಳಿ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.</p>.<p class="bodytext">‘ಈ ಮಾದರಿಯ ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರವನ್ನು ಮಾತ್ರವೇ ಅಲ್ಲದೆ, ದೇಶದ ಇತರ ಭಾಗಗಳನ್ನೂ ಗುರಿಯಾಗಿಸಿಕೊಂಡು ನಡೆದಿವೆ’ ಎಂದು ಜೈಶಂಕರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಮತ್ತು ಪಾಕಿಸ್ತಾನದ ನಡುವೆ ಈಚೆಗೆ ನಡೆದ ಸಂಘರ್ಷವು ‘ಕಾಶ್ಮೀರದಲ್ಲಿನ ಸಂಘರ್ಷ’ ಆಗಿರಲಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.</p>.<p>ಈ ರೀತಿಯ ವಿವರಣೆಗಳಿಂದ ಪಹಲ್ಗಾಮ್ ದಾಳಿಯ ಸೂತ್ರಧಾರ ಹಾಗೂ ದಾಳಿಯ ಸಂತ್ರಸ್ತರನ್ನು ಒಂದೇ ತಕ್ಕಡಿಯಲ್ಲಿ ಇರಿಸಿದಂತೆ ಆಗುತ್ತದೆ ಎಂದು ಅವರು ಹೇಳಿದ್ದಾರೆ.</p>.<p class="bodytext">ಪಹಲ್ಗಾಮ್ನಲ್ಲಿ ನಡೆದ ಭಯಾನಕ ದಾಳಿಯು ತೀವ್ರ ಸ್ವರೂಪದ ಭೀತಿಯನ್ನು ಸೃಷ್ಟಿಸಿ, ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ ವಲಯವನ್ನು ಹಾಳುಮಾಡುವ ಹಾಗೂ ಧಾರ್ಮಿಕ ವೈಷಮ್ಯ ಸೃಷ್ಟಿಸುವ ಉದ್ದೇಶ ಹೊಂದಿತ್ತು ಎಂದು ಅವರು ವಿವರಿಸಿದ್ದಾರೆ.</p>.<p class="bodytext">ವಿದೇಶ ಸಂಬಂಧಗಳ ಕುರಿತ ಜರ್ಮನ್ ಪರಿಷತ್ತಿನ ಜೊತೆ ಬರ್ಲಿನ್ನಲ್ಲಿ ನಡೆಸಿದ ಸಂವಾದದಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ. ‘ಕಾಶ್ಮೀರದಲ್ಲಿನ ಸಂಘರ್ಷದ ಅಂತರರಾಷ್ಟ್ರೀಯ ಪರಿಣಾಮಗಳ’ ಬಗ್ಗೆ ಪ್ರಶ್ನಿಸಿದಾಗ ಜೈಶಂಕರ್ ಅವರು, ‘ಇದು ಕಾಶ್ಮೀರದಲ್ಲಿನ ಸಂಘರ್ಷ ಅಲ್ಲ, ಇದೊಂದು ಭಯೋತ್ಪಾದಕ ದಾಳಿ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.</p>.<p class="bodytext">‘ಈ ಮಾದರಿಯ ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರವನ್ನು ಮಾತ್ರವೇ ಅಲ್ಲದೆ, ದೇಶದ ಇತರ ಭಾಗಗಳನ್ನೂ ಗುರಿಯಾಗಿಸಿಕೊಂಡು ನಡೆದಿವೆ’ ಎಂದು ಜೈಶಂಕರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>