<p><strong>ಶ್ರೀನಗರ</strong>: ಪಾಕಿಸ್ತಾನ ಸಶಸ್ತ್ರ ಪಡೆಗಳು ಗಡಿ ಪ್ರದೇಶದಲ್ಲಿರುವ ಶಾಲೆಗಳು, ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ.</p><p>ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡುತ್ತದೆ ಎಂಬುದನ್ನು ಚೆನ್ನಾಗಿ ಬಲ್ಲ ಪಾಕಿಸ್ತಾನ ಸೇನೆಯು ತನ್ನ ವಾಯು ಪ್ರದೇಶವನ್ನೇ ಗುರಾಣಿಯನ್ನಾಗಿ ಬಳಸಿಕೊಂಡಿತ್ತು. ನಾಗರಿಕ ವಿಮಾನಗಳಿಗೆ ಅಂತರರಾಷ್ಟ್ರೀಯ ಗಡಿ ಸಮೀಪ ಹಾರಾಟ ನಡೆಸಲು ಅನುಮತಿ ನೀಡುವ ಮೂಲಕ ಬೇಜವಾಬ್ದಾರಿ ವರ್ತನೆ ಪ್ರದರ್ಶಿಸಿತ್ತು.</p><p>ಇದೀಗ, ಶ್ರೀನಗರ, ಅವಂತಿಪುರ ಮತ್ತು ಉಧಂಪುರ ವಾಯುನೆಲೆಗಳಲ್ಲಿ ಇರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ ಎಂದು ಸೇನೆ ಮಾಹಿತಿ ನೀಡಿದೆ.</p><p>ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಉಗ್ರರು ಏಪ್ರಿಲ್ 22 ರಂದು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು.</p><p>ಇದೀಗ ಪಾಕ್ ಸೇನಯು ಗಡಿಯಲ್ಲಿ ನಾಗರಿಕರು ಹಾಗೂ ಸೇನಾ ನೆಲೆಗಳನ್ನು ಗುರಿಯಾಗಿಸಿ ಶೆಲ್ ಹಾಗೂ ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದೆ. ಪಾಕ್ ದಾಳಿಯನ್ನು ಭಾರತೀಯ ಸೇನೆ, ಸಮರ್ಥವಾಗಿ ಹಿಮ್ಮೆಟ್ಟಿಸುತ್ತಿದೆ.</p>.ಭಾರತದತ್ತ ಪಾಕಿಸ್ತಾನ ಹಾರಿಸಿದ 300–400 ಡ್ರೋನ್ಗಳನ್ನು ಹೊಡೆದುರುಳಿಸಿದ ಸೇನೆ.Ind-Pak Tensions | ಪಾಕ್ ಡ್ರೋನ್ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ.ಭಯೋತ್ಪಾದನೆ ವಿರುದ್ಧ ಜಗತ್ತು ಸ್ವಲ್ಪವೂ ಸಹಿಷ್ಣು ಆಗಬೇಕಿಲ್ಲ: ಎಸ್.ಜೈಶಂಕರ್.ಪಾಕಿಸ್ತಾನದ ಮಿಲಿಟರಿ ಪೋಸ್ಟ್, ಡ್ರೋನ್ ಲಾಂಚ್ಪ್ಯಾಡ್ ಧ್ವಂಸಗೊಳಿಸಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಪಾಕಿಸ್ತಾನ ಸಶಸ್ತ್ರ ಪಡೆಗಳು ಗಡಿ ಪ್ರದೇಶದಲ್ಲಿರುವ ಶಾಲೆಗಳು, ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ.</p><p>ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡುತ್ತದೆ ಎಂಬುದನ್ನು ಚೆನ್ನಾಗಿ ಬಲ್ಲ ಪಾಕಿಸ್ತಾನ ಸೇನೆಯು ತನ್ನ ವಾಯು ಪ್ರದೇಶವನ್ನೇ ಗುರಾಣಿಯನ್ನಾಗಿ ಬಳಸಿಕೊಂಡಿತ್ತು. ನಾಗರಿಕ ವಿಮಾನಗಳಿಗೆ ಅಂತರರಾಷ್ಟ್ರೀಯ ಗಡಿ ಸಮೀಪ ಹಾರಾಟ ನಡೆಸಲು ಅನುಮತಿ ನೀಡುವ ಮೂಲಕ ಬೇಜವಾಬ್ದಾರಿ ವರ್ತನೆ ಪ್ರದರ್ಶಿಸಿತ್ತು.</p><p>ಇದೀಗ, ಶ್ರೀನಗರ, ಅವಂತಿಪುರ ಮತ್ತು ಉಧಂಪುರ ವಾಯುನೆಲೆಗಳಲ್ಲಿ ಇರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ ಎಂದು ಸೇನೆ ಮಾಹಿತಿ ನೀಡಿದೆ.</p><p>ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಉಗ್ರರು ಏಪ್ರಿಲ್ 22 ರಂದು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು.</p><p>ಇದೀಗ ಪಾಕ್ ಸೇನಯು ಗಡಿಯಲ್ಲಿ ನಾಗರಿಕರು ಹಾಗೂ ಸೇನಾ ನೆಲೆಗಳನ್ನು ಗುರಿಯಾಗಿಸಿ ಶೆಲ್ ಹಾಗೂ ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದೆ. ಪಾಕ್ ದಾಳಿಯನ್ನು ಭಾರತೀಯ ಸೇನೆ, ಸಮರ್ಥವಾಗಿ ಹಿಮ್ಮೆಟ್ಟಿಸುತ್ತಿದೆ.</p>.ಭಾರತದತ್ತ ಪಾಕಿಸ್ತಾನ ಹಾರಿಸಿದ 300–400 ಡ್ರೋನ್ಗಳನ್ನು ಹೊಡೆದುರುಳಿಸಿದ ಸೇನೆ.Ind-Pak Tensions | ಪಾಕ್ ಡ್ರೋನ್ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ.ಭಯೋತ್ಪಾದನೆ ವಿರುದ್ಧ ಜಗತ್ತು ಸ್ವಲ್ಪವೂ ಸಹಿಷ್ಣು ಆಗಬೇಕಿಲ್ಲ: ಎಸ್.ಜೈಶಂಕರ್.ಪಾಕಿಸ್ತಾನದ ಮಿಲಿಟರಿ ಪೋಸ್ಟ್, ಡ್ರೋನ್ ಲಾಂಚ್ಪ್ಯಾಡ್ ಧ್ವಂಸಗೊಳಿಸಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>