<p><strong>ನವದೆಹಲಿ</strong>: ಪಾಕಿಸ್ತಾನ ಸಶಸ್ತ್ರ ಪಡೆಗಳು ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಲು ಯತ್ನಿಸುತ್ತಿವೆ. ಗಡಿಯಲ್ಲಿ ಡ್ರೋನ್, ಕ್ಷಿಪಣಿ ದಾಳಿಯನ್ನು ಮುಂದುವರಿಸಿದ್ದು, ಶ್ರೀನಗರದ, ಅವಂತಿಪುರ ಹಾಗೂ ಉಧಮ್ಪುರದಲ್ಲಿ ವೈದ್ಯಕೀಯ ಸೌಕರ್ಯಗಳು, ಶಾಲೆಗಳ ಮೇಲೆ ದಾಳಿ ನಡೆಸುತ್ತಿವೆ.</p><p>ವಿದೇಶಾಂಗ ಸಚಿವಾಲಯ (ಎಂಇಎ) ಹಾಗೂ ಭದ್ರತಾ ಪಡೆ ಅಧಿಕಾರಿಗಳು ಇಂದು (ಶನಿವಾರ, ಮೇ 10) ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.</p><p>ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಅವರು ಹೇಳಿದ ಪ್ರಮುಖಾಂಶಗಳು ಇಲ್ಲಿವೆ.</p>.<p><strong>ವಿಕ್ರಮ್ ಮಿಶ್ರಿ</strong></p><ul><li><p>ಪಾಕಿಸ್ತಾನ ನಡೆಸುತ್ತಿರುವ ಕೃತ್ಯಗಳು ಪ್ರಚೋದನಾಕಾರಿಯಾಗಿದ್ದು, ಉದ್ವಿಗ್ನತೆಗೆ ಕಾರಣವಾಗಿವೆ</p></li><li><p>ಪಾಕಿಸ್ತಾನದ ದಾಳಿಗೆ ತಕ್ಕಂತೆ ಭಾರತ ಪ್ರತಿಕ್ರಿಯಿಸಿದೆ</p></li><li><p>ಧಾರ್ಮಿಕ ಸ್ಥಳಗಳ ಮೇಲೆ ಭಾರತ ಕ್ಷಿಪಣಿ ದಾಳಿ ಮಾಡಿದೆ ಎಂಬ ಪಾಕ್ ಹೇಳಿಕೆ ಹಾಸ್ಯಾಸ್ಪದ</p></li><li><p>ಪಾಕ್ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಒಬ್ಬ ಅಧಿಕಾರಿ ಹುತಾತ್ಮರಾಗಿದ್ದಾರೆ</p></li></ul>.Fact Check | ಭಾರತೀಯ ಸೈನಿಕರು ಶಿಬಿರ ತೊರೆಯುತ್ತಿದ್ದಾರೆ ಎಂಬುದು ಸುಳ್ಳು.ಭಾರತದತ್ತ ಪಾಕಿಸ್ತಾನ ಹಾರಿಸಿದ 300–400 ಡ್ರೋನ್ಗಳನ್ನು ಹೊಡೆದುರುಳಿಸಿದ ಸೇನೆ.<p><strong>ಕರ್ನಲ್ ಸೋಫಿಯಾ ಖುರೇಷಿ</strong></p><ul><li><p>ಪಾಕ್ ಕ್ರಮಕ್ಕೆ ಸೂಕ್ತ ಪ್ರತ್ಯುತ್ತರ ನೀಡಲಾಗಿದೆ</p></li><li><p>ಶ್ರೀನಗರ, ಅವಂತಿಪುರ ಮತ್ತು ಉಧಮ್ಪುರಗಳಲ್ಲಿನ ವೈದ್ಯಕೀಯ ಸೌಲಭ್ಯಗಳ ಮೇಲೆ ಪಾಕ್ ಪಡೆಗಳು ದಾಳಿ ನಡೆಸಿವೆ</p></li><li><p>ಪಂಜಾಬ್ನಲ್ಲಿರುವ ವಾಯುನೆಲೆ ಮೇಲೆ ದಾಳಿ ಮಾಡುವ ಸಲುವಾಗಿ ಪಾಕಿಸ್ತಾನ ಸೇನೆಯು ಇಂದು ಬೆಳಗಿನ ಜಾವ 1.40 ಸುಮಾರಿಗೆ ಹೈಸ್ಪೀಡ್ ಕ್ಷಿಪಣಿಗಳನ್ನು ಉಡಾಯಿಸಿದೆ</p></li><li><p>ಪಾಕ್ ಸೇನೆ ಗಡಿ ಪ್ರದೇಶಗಳಲ್ಲಿ ತನ್ನ ಸೈನಿಕರ ಜಮಾವಣೆ ಹೆಚ್ಚಿಸುತ್ತಿದೆ</p></li><li><p>ಪಶ್ಚಿಮ ಪ್ರದೇಶದಲ್ಲಿರುವ ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಡ್ರೋನ್ಗಳು, ದೀರ್ಘ ಶ್ರೇಣಿಯ ಶಸ್ತ್ರಾಸ್ತ್ರಗಳು ಮತ್ತು ಇತರ ಯುದ್ಧ ಸಾಮಗ್ರಿಗಳು, ಜೆಟ್ಗಳನ್ನು ಬಳಸಿದ ಪಾಕ್</p></li><li><p>ಭಾರತದಲ್ಲಿ ವಾಯುನೆಲೆಗಳು ಹಾಗೂ ಸೇನಾ ನೆಲೆಗಳನ್ನು ನಾಶಮಾಡಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿತ್ತು. ಆದರೆ, ಅದನ್ನು ಅಲ್ಲಗಳೆದ ಖುರೇಷಿ, ವಾಸ್ತವ ಚಿತ್ರಗಳು ಮತ್ತು ಸಂಬಂಧಿತ ದಾಖಲೆಗಳನ್ನು ಪ್ರದರ್ಶಿಸಿದ್ದಾರೆ.</p></li><li><p>ಸೇನಾ ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ ಎಂಬ ಪಾಕ್ ಹೇಳಿಕೆ 'ಸಂಪೂರ್ಣ ಸುಳ್ಳು' ಎಂದು ಪ್ರತಿಪಾದಿಸಿದ್ದಾರೆ.</p></li></ul>.ಪಾಕಿಸ್ತಾನದ ಮಿಲಿಟರಿ ಪೋಸ್ಟ್, ಡ್ರೋನ್ ಲಾಂಚ್ಪ್ಯಾಡ್ ಧ್ವಂಸಗೊಳಿಸಿದ ಭಾರತ.ಜಮ್ಮು ಗಡಿಯಲ್ಲಿ ಮುಂದುವರಿದ ಸ್ಥಳಾಂತರ ಕಾರ್ಯ: ಪರಿಹಾರ ಕೇಂದ್ರಗಳಿಗೆ ಸಿಎಂ ಭೇಟಿ.<p><strong>ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್</strong></p><ul><li><p>ಪಾಕಿಸ್ತಾನ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು, ನಿರ್ದಿಷ್ಟ ಮಿಲಿಟರಿ ಗುರಿಗಳ ಮೇಲಷ್ಟೇ ನಿಖರ ದಾಳಿ ಮಾಡಿವೆ</p></li><li><p>ಸೂರತ್ನಲ್ಲಿ ನಮ್ಮ ಅತ್ಯಾಧುನಿಕ ಎಸ್–400 ಟ್ರಯಂಫ್ ಕ್ಷಿಪಣಿ ವ್ಯವಸ್ಥೆ ಹಾಗೂ ವಾಯುನೆಲೆಗಳನ್ನು ನಾಶಪಡಿಸಿರುವುದಾಗಿ ದುರುದ್ದೇಶದಿಂದ ಸುಳ್ಳು ಮಾಹಿತಿ ಹರಡುತ್ತಿರುವ ಪಾಕಿಸ್ತಾನ</p></li><li><p>ಭಾರತೀಯ ಸಶಸ್ತ್ರ ಪಡೆಗಳು ಕಾರ್ಯಾಚರಣೆಗೆ ಸನ್ನದ್ಧವಾಗಿವೆ. ಈವರೆಗಿನ ಎಲ್ಲ ದಾಳಿಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ</p></li><li><p>ಪಾಕಿಸ್ತಾನದ ರಹೀಮ್ ಯಾರ್ ಖಾನ್ನಲ್ಲಿರುವ ಸೇನೆಯ ಆಸ್ತಿಗಳ ಮೇಲೆ ಭಾರತ ಗುರಿ ಇಟ್ಟಿದೆ</p></li><li><p>ಉದ್ವಿಗ್ನತೆ ಉಲ್ಬಣಗೊಳಿಸದಿರಲು ಬದ್ಧವಾಗಿರುವ ಭಾರತೀಯ ಸಶಸ್ತ್ರ ಪಡೆಗಳು ಪಾಕ್ ಪಡೆಗಳಿಗೆ ಪ್ರತ್ಯುತ್ತರ ನೀಡಿವೆ</p></li></ul>.ಭಯೋತ್ಪಾದನೆ ವಿರುದ್ಧ ಜಗತ್ತು ಸ್ವಲ್ಪವೂ ಸಹಿಷ್ಣು ಆಗಬೇಕಿಲ್ಲ: ಎಸ್.ಜೈಶಂಕರ್.Ind - Pak Tensions: ಮೇ 15ರವರೆಗೆ 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಾಕಿಸ್ತಾನ ಸಶಸ್ತ್ರ ಪಡೆಗಳು ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಲು ಯತ್ನಿಸುತ್ತಿವೆ. ಗಡಿಯಲ್ಲಿ ಡ್ರೋನ್, ಕ್ಷಿಪಣಿ ದಾಳಿಯನ್ನು ಮುಂದುವರಿಸಿದ್ದು, ಶ್ರೀನಗರದ, ಅವಂತಿಪುರ ಹಾಗೂ ಉಧಮ್ಪುರದಲ್ಲಿ ವೈದ್ಯಕೀಯ ಸೌಕರ್ಯಗಳು, ಶಾಲೆಗಳ ಮೇಲೆ ದಾಳಿ ನಡೆಸುತ್ತಿವೆ.</p><p>ವಿದೇಶಾಂಗ ಸಚಿವಾಲಯ (ಎಂಇಎ) ಹಾಗೂ ಭದ್ರತಾ ಪಡೆ ಅಧಿಕಾರಿಗಳು ಇಂದು (ಶನಿವಾರ, ಮೇ 10) ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.</p><p>ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಅವರು ಹೇಳಿದ ಪ್ರಮುಖಾಂಶಗಳು ಇಲ್ಲಿವೆ.</p>.<p><strong>ವಿಕ್ರಮ್ ಮಿಶ್ರಿ</strong></p><ul><li><p>ಪಾಕಿಸ್ತಾನ ನಡೆಸುತ್ತಿರುವ ಕೃತ್ಯಗಳು ಪ್ರಚೋದನಾಕಾರಿಯಾಗಿದ್ದು, ಉದ್ವಿಗ್ನತೆಗೆ ಕಾರಣವಾಗಿವೆ</p></li><li><p>ಪಾಕಿಸ್ತಾನದ ದಾಳಿಗೆ ತಕ್ಕಂತೆ ಭಾರತ ಪ್ರತಿಕ್ರಿಯಿಸಿದೆ</p></li><li><p>ಧಾರ್ಮಿಕ ಸ್ಥಳಗಳ ಮೇಲೆ ಭಾರತ ಕ್ಷಿಪಣಿ ದಾಳಿ ಮಾಡಿದೆ ಎಂಬ ಪಾಕ್ ಹೇಳಿಕೆ ಹಾಸ್ಯಾಸ್ಪದ</p></li><li><p>ಪಾಕ್ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಒಬ್ಬ ಅಧಿಕಾರಿ ಹುತಾತ್ಮರಾಗಿದ್ದಾರೆ</p></li></ul>.Fact Check | ಭಾರತೀಯ ಸೈನಿಕರು ಶಿಬಿರ ತೊರೆಯುತ್ತಿದ್ದಾರೆ ಎಂಬುದು ಸುಳ್ಳು.ಭಾರತದತ್ತ ಪಾಕಿಸ್ತಾನ ಹಾರಿಸಿದ 300–400 ಡ್ರೋನ್ಗಳನ್ನು ಹೊಡೆದುರುಳಿಸಿದ ಸೇನೆ.<p><strong>ಕರ್ನಲ್ ಸೋಫಿಯಾ ಖುರೇಷಿ</strong></p><ul><li><p>ಪಾಕ್ ಕ್ರಮಕ್ಕೆ ಸೂಕ್ತ ಪ್ರತ್ಯುತ್ತರ ನೀಡಲಾಗಿದೆ</p></li><li><p>ಶ್ರೀನಗರ, ಅವಂತಿಪುರ ಮತ್ತು ಉಧಮ್ಪುರಗಳಲ್ಲಿನ ವೈದ್ಯಕೀಯ ಸೌಲಭ್ಯಗಳ ಮೇಲೆ ಪಾಕ್ ಪಡೆಗಳು ದಾಳಿ ನಡೆಸಿವೆ</p></li><li><p>ಪಂಜಾಬ್ನಲ್ಲಿರುವ ವಾಯುನೆಲೆ ಮೇಲೆ ದಾಳಿ ಮಾಡುವ ಸಲುವಾಗಿ ಪಾಕಿಸ್ತಾನ ಸೇನೆಯು ಇಂದು ಬೆಳಗಿನ ಜಾವ 1.40 ಸುಮಾರಿಗೆ ಹೈಸ್ಪೀಡ್ ಕ್ಷಿಪಣಿಗಳನ್ನು ಉಡಾಯಿಸಿದೆ</p></li><li><p>ಪಾಕ್ ಸೇನೆ ಗಡಿ ಪ್ರದೇಶಗಳಲ್ಲಿ ತನ್ನ ಸೈನಿಕರ ಜಮಾವಣೆ ಹೆಚ್ಚಿಸುತ್ತಿದೆ</p></li><li><p>ಪಶ್ಚಿಮ ಪ್ರದೇಶದಲ್ಲಿರುವ ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಡ್ರೋನ್ಗಳು, ದೀರ್ಘ ಶ್ರೇಣಿಯ ಶಸ್ತ್ರಾಸ್ತ್ರಗಳು ಮತ್ತು ಇತರ ಯುದ್ಧ ಸಾಮಗ್ರಿಗಳು, ಜೆಟ್ಗಳನ್ನು ಬಳಸಿದ ಪಾಕ್</p></li><li><p>ಭಾರತದಲ್ಲಿ ವಾಯುನೆಲೆಗಳು ಹಾಗೂ ಸೇನಾ ನೆಲೆಗಳನ್ನು ನಾಶಮಾಡಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿತ್ತು. ಆದರೆ, ಅದನ್ನು ಅಲ್ಲಗಳೆದ ಖುರೇಷಿ, ವಾಸ್ತವ ಚಿತ್ರಗಳು ಮತ್ತು ಸಂಬಂಧಿತ ದಾಖಲೆಗಳನ್ನು ಪ್ರದರ್ಶಿಸಿದ್ದಾರೆ.</p></li><li><p>ಸೇನಾ ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ ಎಂಬ ಪಾಕ್ ಹೇಳಿಕೆ 'ಸಂಪೂರ್ಣ ಸುಳ್ಳು' ಎಂದು ಪ್ರತಿಪಾದಿಸಿದ್ದಾರೆ.</p></li></ul>.ಪಾಕಿಸ್ತಾನದ ಮಿಲಿಟರಿ ಪೋಸ್ಟ್, ಡ್ರೋನ್ ಲಾಂಚ್ಪ್ಯಾಡ್ ಧ್ವಂಸಗೊಳಿಸಿದ ಭಾರತ.ಜಮ್ಮು ಗಡಿಯಲ್ಲಿ ಮುಂದುವರಿದ ಸ್ಥಳಾಂತರ ಕಾರ್ಯ: ಪರಿಹಾರ ಕೇಂದ್ರಗಳಿಗೆ ಸಿಎಂ ಭೇಟಿ.<p><strong>ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್</strong></p><ul><li><p>ಪಾಕಿಸ್ತಾನ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು, ನಿರ್ದಿಷ್ಟ ಮಿಲಿಟರಿ ಗುರಿಗಳ ಮೇಲಷ್ಟೇ ನಿಖರ ದಾಳಿ ಮಾಡಿವೆ</p></li><li><p>ಸೂರತ್ನಲ್ಲಿ ನಮ್ಮ ಅತ್ಯಾಧುನಿಕ ಎಸ್–400 ಟ್ರಯಂಫ್ ಕ್ಷಿಪಣಿ ವ್ಯವಸ್ಥೆ ಹಾಗೂ ವಾಯುನೆಲೆಗಳನ್ನು ನಾಶಪಡಿಸಿರುವುದಾಗಿ ದುರುದ್ದೇಶದಿಂದ ಸುಳ್ಳು ಮಾಹಿತಿ ಹರಡುತ್ತಿರುವ ಪಾಕಿಸ್ತಾನ</p></li><li><p>ಭಾರತೀಯ ಸಶಸ್ತ್ರ ಪಡೆಗಳು ಕಾರ್ಯಾಚರಣೆಗೆ ಸನ್ನದ್ಧವಾಗಿವೆ. ಈವರೆಗಿನ ಎಲ್ಲ ದಾಳಿಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ</p></li><li><p>ಪಾಕಿಸ್ತಾನದ ರಹೀಮ್ ಯಾರ್ ಖಾನ್ನಲ್ಲಿರುವ ಸೇನೆಯ ಆಸ್ತಿಗಳ ಮೇಲೆ ಭಾರತ ಗುರಿ ಇಟ್ಟಿದೆ</p></li><li><p>ಉದ್ವಿಗ್ನತೆ ಉಲ್ಬಣಗೊಳಿಸದಿರಲು ಬದ್ಧವಾಗಿರುವ ಭಾರತೀಯ ಸಶಸ್ತ್ರ ಪಡೆಗಳು ಪಾಕ್ ಪಡೆಗಳಿಗೆ ಪ್ರತ್ಯುತ್ತರ ನೀಡಿವೆ</p></li></ul>.ಭಯೋತ್ಪಾದನೆ ವಿರುದ್ಧ ಜಗತ್ತು ಸ್ವಲ್ಪವೂ ಸಹಿಷ್ಣು ಆಗಬೇಕಿಲ್ಲ: ಎಸ್.ಜೈಶಂಕರ್.Ind - Pak Tensions: ಮೇ 15ರವರೆಗೆ 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>