ಜೈಪುರ : ‘ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳ ಕುರಿತು ಉನ್ನತಮಟ್ಟದ ತನಿಖೆ ನಡೆಸಲು ಒತ್ತಾಯಿಸುವ ಮೂಲಕ ನಗೆಪಾಟಲಿಗೆ ಗುರಿಯಾಗಬೇಡಿ’ ಎಂದು ಸ್ವತಂತ್ರ ಶಾಸಕ ಸಂಯಮ್ ಲೋಧಾ ಅವರು ಕಾಂಗ್ರೆಸ್ನ ಭಿನ್ನಮತೀಯ ನಾಯಕ ಸಚಿನ್ ಪೈಲಟ್ ಅವರಿಗೆ ಸಲಹೆ ನೀಡಿದ್ದಾರೆ.