<p><strong>ನವದೆಹಲಿ:</strong> ಭಾರತೀಯ ಸೇನೆಯಿಂದ ಅಚಾತುರ್ಯವಾಗಿ ಪಾಕಿಸ್ತಾನದಲ್ಲಿ ಕ್ಷಿಪಣಿ ಉಡಾವಣೆ ಆಗಿತ್ತು ಎಂದು ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಅಲ್ಲದೆ ಈ ಘಟನೆ ಬಗ್ಗೆ ರಕ್ಷಣಾ ಇಲಾಖೆ ತೀವ್ರ ವಿಷಾದ ವ್ಯಕ್ತಪಡಿಸಿದೆ.</p>.<p>ಭಾರತ ಕ್ಷಿಪಣಿಯೊಂದನ್ನು ತನ್ನ ದೇಶದತ್ತ ಉಡಾಯಿಸುವ ಮೂಲಕ ವಾಯುಗಡಿ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಪಾಕಿಸ್ತಾನ ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ, ಭಾರತ ಸರ್ಕಾರದ ಈ ಹೇಳಿಕೆ ಹೊರಬಿದ್ದಿದೆ.</p>.<p>ಈ ಸಂಬಂಧ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿರುವ ರಕ್ಷಣಾ ಇಲಾಖೆ, 'ಸಾಮಾನ್ಯ ನಿರ್ವಹಣೆ ಹಂತದಲ್ಲಿ ಆಗಿರುವ ತಾಂತ್ರಿಕ ದೋಷದಿಂದಾಗಿ ಬುಧವಾರ ಪಾಕಿಸ್ತಾನದ ಭೂ ಪ್ರದೇಶಕ್ಕೆ ಕ್ಷಿಪಣಿ ಚಿಮ್ಮಿದೆ. ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ' ಎಂದು ಹೇಳಿದೆ.</p>.<p><strong>ಪಾಕಿಸ್ತಾನದ ಆತಂಕ:</strong></p>.<p>ಇದಕ್ಕೂ ಮುನ್ನ ಈ ಘಟನೆಗೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಭಾರತದ ರಾಜತಾಂತ್ರಿಕ ಅಧಿಕಾರಿಯನ್ನು ಕರೆಸಿಕೊಂಡಿದ್ದ ಪಾಕಿಸ್ತಾನ, ಈ ಘಟನೆ ಬಗ್ಗೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿತ್ತು.ಅಲ್ಲದೆ ಈ ಬಗ್ಗೆ ಪಾರದರ್ಶಕ ಮತ್ತು ವಸ್ತುನಿಷ್ಠ ತನಿಖೆಯಾಗಬೇಕು ಎಂದು ಒತ್ತಾಯಿಸಿತ್ತು.</p>.<p>ಈ ಘಟನೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗಿದೆ. ಅಲ್ಲದೆ ಇಂಥ ಘಟನೆಗಳಿಂದ ಮನುಷ್ಯರಿಗೆ ಅಪಾಯ ಇದ್ದೇ ಇದೆ. ಜತೆಗೆ ಪಾಕಿಸ್ತಾನದ ವಾಯುಗಡಿ ವ್ಯಾಪ್ತಿಯಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳಿಗೂ ಅಪಾಯ ತಪ್ಪಿದ್ದಲ್ಲ. ಇದು ಗಂಭೀರ ಸ್ವರೂಪದ ವಿಮಾನಯಾನ ಅಪಘಾತಕ್ಕೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತೀಯ ಸೇನೆಯಿಂದ ಅಚಾತುರ್ಯವಾಗಿ ಪಾಕಿಸ್ತಾನದಲ್ಲಿ ಕ್ಷಿಪಣಿ ಉಡಾವಣೆ ಆಗಿತ್ತು ಎಂದು ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಅಲ್ಲದೆ ಈ ಘಟನೆ ಬಗ್ಗೆ ರಕ್ಷಣಾ ಇಲಾಖೆ ತೀವ್ರ ವಿಷಾದ ವ್ಯಕ್ತಪಡಿಸಿದೆ.</p>.<p>ಭಾರತ ಕ್ಷಿಪಣಿಯೊಂದನ್ನು ತನ್ನ ದೇಶದತ್ತ ಉಡಾಯಿಸುವ ಮೂಲಕ ವಾಯುಗಡಿ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಪಾಕಿಸ್ತಾನ ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ, ಭಾರತ ಸರ್ಕಾರದ ಈ ಹೇಳಿಕೆ ಹೊರಬಿದ್ದಿದೆ.</p>.<p>ಈ ಸಂಬಂಧ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿರುವ ರಕ್ಷಣಾ ಇಲಾಖೆ, 'ಸಾಮಾನ್ಯ ನಿರ್ವಹಣೆ ಹಂತದಲ್ಲಿ ಆಗಿರುವ ತಾಂತ್ರಿಕ ದೋಷದಿಂದಾಗಿ ಬುಧವಾರ ಪಾಕಿಸ್ತಾನದ ಭೂ ಪ್ರದೇಶಕ್ಕೆ ಕ್ಷಿಪಣಿ ಚಿಮ್ಮಿದೆ. ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ' ಎಂದು ಹೇಳಿದೆ.</p>.<p><strong>ಪಾಕಿಸ್ತಾನದ ಆತಂಕ:</strong></p>.<p>ಇದಕ್ಕೂ ಮುನ್ನ ಈ ಘಟನೆಗೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಭಾರತದ ರಾಜತಾಂತ್ರಿಕ ಅಧಿಕಾರಿಯನ್ನು ಕರೆಸಿಕೊಂಡಿದ್ದ ಪಾಕಿಸ್ತಾನ, ಈ ಘಟನೆ ಬಗ್ಗೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿತ್ತು.ಅಲ್ಲದೆ ಈ ಬಗ್ಗೆ ಪಾರದರ್ಶಕ ಮತ್ತು ವಸ್ತುನಿಷ್ಠ ತನಿಖೆಯಾಗಬೇಕು ಎಂದು ಒತ್ತಾಯಿಸಿತ್ತು.</p>.<p>ಈ ಘಟನೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗಿದೆ. ಅಲ್ಲದೆ ಇಂಥ ಘಟನೆಗಳಿಂದ ಮನುಷ್ಯರಿಗೆ ಅಪಾಯ ಇದ್ದೇ ಇದೆ. ಜತೆಗೆ ಪಾಕಿಸ್ತಾನದ ವಾಯುಗಡಿ ವ್ಯಾಪ್ತಿಯಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳಿಗೂ ಅಪಾಯ ತಪ್ಪಿದ್ದಲ್ಲ. ಇದು ಗಂಭೀರ ಸ್ವರೂಪದ ವಿಮಾನಯಾನ ಅಪಘಾತಕ್ಕೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>