ರಾಮಪುರಹಟ್ (ಪಶ್ಚಿಮ ಬಂಗಾಳ): ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಕೇವಲ 2024ರ ಲೋಕಸಭೆಗೆ ಮಾತ್ರ ಸೀಮಿತ. ಯಾವುದೇ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈ ಮೈತ್ರಿ ಅನ್ವಯವಾಗುವುದಿಲ್ಲ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಎನ್ಸಿಪಿ ಹಾಗೂ ಶಿವಸೇನಾದ ಮೈತ್ರಿಕೂಟ ಒಟ್ಟಾಗಿ ಸ್ಪರ್ಧಿಸಲಿದೆ. ಬೇರೆ ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳೊಂದಿಗೆ ಮೈತ್ರಿ ಇಲ್ಲ’ ಎಂದು ಹೇಳಿದ್ದಾರೆ.