<p><strong>ನವದೆಹಲಿ</strong>: ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ತನ್ನ ಉಪರಾಷ್ಟ್ರಪತಿ ಸ್ಥಾನದ ಅಭ್ಯರ್ಥಿಯನ್ನು ಮಂಗಳವಾರ ಮಧ್ಯಾಹ್ನ ಘೋಷಿಸುವ ಸಾಧ್ಯತೆಯಿದೆ. ಚಂದ್ರಯಾನ–1 ಯೋಜನೆ ಮುನ್ನಡೆಸಿದ್ದ ಇಸ್ರೊದ ಮಾಜಿ ವಿಜ್ಞಾನಿ ಮೈಲಸ್ವಾಮಿ ಅಣ್ಣಾದೊರೈ ಸೇರಿದಂತೆ ಹಲವು ಹೆಸರುಗಳ ಬಗ್ಗೆ ಚರ್ಚೆ ನಡೆದಿದೆ.</p>.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಧ್ಯಾಹ್ನ 12.30ಕ್ಕೆ ವಿರೋಧ ಪಕ್ಷಗಳ ನಾಯಕರ ಸಭೆ ಕರೆಯಲಾಗಿದ್ದು, ಆ ಬಳಿಕ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಸಭೆಯ ಕುರಿತು ಮಾಡಿರುವ ಟ್ವೀಟ್ನಲ್ಲಿ ‘ಇಂಡಿಯಾ’ ಮೈತ್ರಿಕೂಟ ಎಂಬುದರ ಬದಲು ‘ವಿರೋಧ ಪಕ್ಷಗಳು’ ಎಂದು ಉಲ್ಲೇಖಿಸಿದ್ದಾರೆ. ಎಎಪಿಯಂತಹ ಪಕ್ಷಗಳೂ ಸಭೆಯಲ್ಲಿ ಪಾಲ್ಗೊಳ್ಳಲಿ ಎಂಬುದು ಇದರ ಹಿಂದಿನ ಉದ್ದೇಶ ಎಂದು ವಿಶ್ಲೇಷಿಸಲಾಗಿದೆ.</p>.<p>ಖರ್ಗೆ ನಿವಾಸದಲ್ಲಿ ಸೋಮವಾರ ‘ಇಂಡಿಯಾ’ ಮೈತ್ರಿಕೂಟದ ನಾಯಕರ ಸಭೆ ನಡೆದಿದ್ದು, ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ. </p>.<p>‘ಅಣ್ಣಾದೊರೈ ಸೇರಿದಂತೆ ಕೆಲವು ಹೆಸರುಗಳು ಸಭೆಯಲ್ಲಿ ಚರ್ಚೆಗೆ ಬಂದವು. ಖರ್ಗೆ ಅವರು ವಿರೋಧ ಪಕ್ಷಗಳ ಎಲ್ಲ ನಾಯಕರ ಜತೆ ಮಾತನಾಡಿದ ಬಳಿಕ ಒಮ್ಮತದಿಂದ ಅಭ್ಯರ್ಥಿಯ ಆಯ್ಕೆ ನಡೆಯಲಿದೆ’ ಎಂದು ಮೂಲಗಳು ಹೇಳಿವೆ.</p>.<p>ತಮಿಳುನಾಡಿನ ಬಿಜೆಪಿ ನಾಯಕ ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಭಾನುವಾರ ಆಯ್ಕೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ತನ್ನ ಉಪರಾಷ್ಟ್ರಪತಿ ಸ್ಥಾನದ ಅಭ್ಯರ್ಥಿಯನ್ನು ಮಂಗಳವಾರ ಮಧ್ಯಾಹ್ನ ಘೋಷಿಸುವ ಸಾಧ್ಯತೆಯಿದೆ. ಚಂದ್ರಯಾನ–1 ಯೋಜನೆ ಮುನ್ನಡೆಸಿದ್ದ ಇಸ್ರೊದ ಮಾಜಿ ವಿಜ್ಞಾನಿ ಮೈಲಸ್ವಾಮಿ ಅಣ್ಣಾದೊರೈ ಸೇರಿದಂತೆ ಹಲವು ಹೆಸರುಗಳ ಬಗ್ಗೆ ಚರ್ಚೆ ನಡೆದಿದೆ.</p>.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಧ್ಯಾಹ್ನ 12.30ಕ್ಕೆ ವಿರೋಧ ಪಕ್ಷಗಳ ನಾಯಕರ ಸಭೆ ಕರೆಯಲಾಗಿದ್ದು, ಆ ಬಳಿಕ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಸಭೆಯ ಕುರಿತು ಮಾಡಿರುವ ಟ್ವೀಟ್ನಲ್ಲಿ ‘ಇಂಡಿಯಾ’ ಮೈತ್ರಿಕೂಟ ಎಂಬುದರ ಬದಲು ‘ವಿರೋಧ ಪಕ್ಷಗಳು’ ಎಂದು ಉಲ್ಲೇಖಿಸಿದ್ದಾರೆ. ಎಎಪಿಯಂತಹ ಪಕ್ಷಗಳೂ ಸಭೆಯಲ್ಲಿ ಪಾಲ್ಗೊಳ್ಳಲಿ ಎಂಬುದು ಇದರ ಹಿಂದಿನ ಉದ್ದೇಶ ಎಂದು ವಿಶ್ಲೇಷಿಸಲಾಗಿದೆ.</p>.<p>ಖರ್ಗೆ ನಿವಾಸದಲ್ಲಿ ಸೋಮವಾರ ‘ಇಂಡಿಯಾ’ ಮೈತ್ರಿಕೂಟದ ನಾಯಕರ ಸಭೆ ನಡೆದಿದ್ದು, ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ. </p>.<p>‘ಅಣ್ಣಾದೊರೈ ಸೇರಿದಂತೆ ಕೆಲವು ಹೆಸರುಗಳು ಸಭೆಯಲ್ಲಿ ಚರ್ಚೆಗೆ ಬಂದವು. ಖರ್ಗೆ ಅವರು ವಿರೋಧ ಪಕ್ಷಗಳ ಎಲ್ಲ ನಾಯಕರ ಜತೆ ಮಾತನಾಡಿದ ಬಳಿಕ ಒಮ್ಮತದಿಂದ ಅಭ್ಯರ್ಥಿಯ ಆಯ್ಕೆ ನಡೆಯಲಿದೆ’ ಎಂದು ಮೂಲಗಳು ಹೇಳಿವೆ.</p>.<p>ತಮಿಳುನಾಡಿನ ಬಿಜೆಪಿ ನಾಯಕ ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಭಾನುವಾರ ಆಯ್ಕೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>