<p><strong>ನವದೆಹಲಿ</strong>: ತಮ್ಮ ಪ್ರದೇಶಗಳಲ್ಲಿ ಪರಸ್ಪರ ದೇಶಗಳ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಭಾರತ ಮತ್ತು ಬಾಂಗ್ಲಾದೇಶ ಪ್ರಕಟಿಸಿವೆ.</p>.<p>ಆನ್ಲೈನ್ ಮೂಲಕ ಶನಿವಾರ ನಡೆದ 19ನೇ ಗೃಹ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ನಿರ್ಧಾರಕೈಗೊಳ್ಳಲಾಯಿತು.</p>.<p>ಭಾರತದ ನಕಲಿ ನೋಟುಗಳನ್ನು ಅಕ್ರಮವಾಗಿ ಸಾಗಿಸುವ ಚಟುವಟಿಕೆಗಳನ್ನು ತಡೆಗಟ್ಟಲು ಉಭಯ ದೇಶಗಳ ಭದ್ರತಾ ಪಡೆಗಳು ಪರಸ್ಪರ ಸಹಕಾರ ನೀಡುವುದು ಅಗತ್ಯವಿದೆ. ಈ ನಿಟ್ಟಿನಲ್ಲಿಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗೃಹ ಕಾರ್ಯದರ್ಶಿಗಳು ಚರ್ಚೆ ನಡೆಸಿದರು.</p>.<p>ಭದ್ರತೆ ಮತ್ತು ಗಡಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸಿ ಬಲಪಡಿಸಲು ಉಭಯ ದೇಶಗಳು ಈ ಸಂದರ್ಭದಲ್ಲಿ ಒಪ್ಪಿಗೆ ನೀಡಲಾಯಿತು. ಜತೆಗೆ, ಭಾರತ ಮತ್ತು ಬಾಂಗ್ಲಾದೇಶ ಗಡಿಯಲ್ಲಿ ಬಾಕಿ ಉಳಿದಿರುವ ಬೇಲಿ ಹಾಕುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.</p>.<p>ಕಾನೂನುಬಾಹಿರವಾಗಿ ಗಡಿಯಲ್ಲಿ ನುಸುಳುವುದನ್ನು ತಡೆಗಟ್ಟಲು ಸಮಗ್ರವಾದ ಗಡಿ ನಿರ್ವಹಣೆ ಯೋಜನೆ ಕೈಗೊಳ್ಳುವ ಬಗ್ಗೆ ಉಭಯ ದೇಶಗಳ ಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಚರ್ಚಿಸಿದರು ಎಂದು ಪ್ರಕಟಣೆ ತಿಳಿಸಿದೆ</p>.<p>ಭಾರತದ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಮತ್ತು ಬಾಂಗ್ಲಾದೇಶದ ಗೃಹ ಸಚಿವಾಲಯದ ಹಿರಿಯ ಕಾರ್ಯದರ್ಶಿ ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತಮ್ಮ ಪ್ರದೇಶಗಳಲ್ಲಿ ಪರಸ್ಪರ ದೇಶಗಳ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಭಾರತ ಮತ್ತು ಬಾಂಗ್ಲಾದೇಶ ಪ್ರಕಟಿಸಿವೆ.</p>.<p>ಆನ್ಲೈನ್ ಮೂಲಕ ಶನಿವಾರ ನಡೆದ 19ನೇ ಗೃಹ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ನಿರ್ಧಾರಕೈಗೊಳ್ಳಲಾಯಿತು.</p>.<p>ಭಾರತದ ನಕಲಿ ನೋಟುಗಳನ್ನು ಅಕ್ರಮವಾಗಿ ಸಾಗಿಸುವ ಚಟುವಟಿಕೆಗಳನ್ನು ತಡೆಗಟ್ಟಲು ಉಭಯ ದೇಶಗಳ ಭದ್ರತಾ ಪಡೆಗಳು ಪರಸ್ಪರ ಸಹಕಾರ ನೀಡುವುದು ಅಗತ್ಯವಿದೆ. ಈ ನಿಟ್ಟಿನಲ್ಲಿಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗೃಹ ಕಾರ್ಯದರ್ಶಿಗಳು ಚರ್ಚೆ ನಡೆಸಿದರು.</p>.<p>ಭದ್ರತೆ ಮತ್ತು ಗಡಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸಿ ಬಲಪಡಿಸಲು ಉಭಯ ದೇಶಗಳು ಈ ಸಂದರ್ಭದಲ್ಲಿ ಒಪ್ಪಿಗೆ ನೀಡಲಾಯಿತು. ಜತೆಗೆ, ಭಾರತ ಮತ್ತು ಬಾಂಗ್ಲಾದೇಶ ಗಡಿಯಲ್ಲಿ ಬಾಕಿ ಉಳಿದಿರುವ ಬೇಲಿ ಹಾಕುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.</p>.<p>ಕಾನೂನುಬಾಹಿರವಾಗಿ ಗಡಿಯಲ್ಲಿ ನುಸುಳುವುದನ್ನು ತಡೆಗಟ್ಟಲು ಸಮಗ್ರವಾದ ಗಡಿ ನಿರ್ವಹಣೆ ಯೋಜನೆ ಕೈಗೊಳ್ಳುವ ಬಗ್ಗೆ ಉಭಯ ದೇಶಗಳ ಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಚರ್ಚಿಸಿದರು ಎಂದು ಪ್ರಕಟಣೆ ತಿಳಿಸಿದೆ</p>.<p>ಭಾರತದ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಮತ್ತು ಬಾಂಗ್ಲಾದೇಶದ ಗೃಹ ಸಚಿವಾಲಯದ ಹಿರಿಯ ಕಾರ್ಯದರ್ಶಿ ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>