<p><strong>ನವದೆಹಲಿ:</strong> ಪೂರ್ವ ಲಡಾಕ್ನ ವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಇರುವ ಪರಿಸ್ಥಿತಿಯ ಕುರಿತು ಭಾರತ ಮತ್ತು ಚೀನಾ ಬುಧವಾರ ಮಾತುಕತೆ ನಡೆಸಿವೆ.</p>.<p>ಗಡಿಯಲ್ಲಿ ಶಾಂತಿ ವಾತಾವರಣವನ್ನು ಕಾಪಾಡಿಕೊಳ್ಳುವ ಹಾಗೂ ಒಟ್ಟಾರೆ ಸಂಬಂಧವನ್ನು ಸುಧಾರಿಸುವ ಚರ್ಚೆಗಳು ನಡೆದವು ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.</p>.<p>ಬೀಜಿಂಗ್ನಲ್ಲಿ ಬುಧವಾರ ನಡೆದ ‘ಸಮಾಲೋಚನೆ ಮತ್ತು ಸಮನ್ವಯತೆಗಾಗಿ ಕಾರ್ಯನೀತಿ (ಡಬ್ಲ್ಯುಎಂಸಿಸಿ)’ಯ ಸಭೆಯಲ್ಲಿ ಎರಡೂ ದೇಶಗಳ ಪ್ರತಿನಿಧಿಗಳು ಚರ್ಚಿಸಿದರು ಎಂದು ಇಲಾಖೆ ತಿಳಿಸಿದೆ.</p>.<p>ಭಾರತದ ವಿದೇಶಾಂಗ ಇಲಾಖೆ ಜಂಟಿ ಕಾರ್ಯದರ್ಶಿ (ಪೂರ್ವ ಏಷ್ಯಾ) ಸುಜಿತ್ ಘೋಷ್, ಚೀನಾದ ಗಡಿ ಮತ್ತು ಸಾಗರ ವ್ಯವಹಾರಗಳ ಮಹಾ ನಿರ್ದೇಶಕ ಹೋಯು ಯಾಂಕಿ ಮಾತುಕತೆಯ ನೇತೃತ್ವ ವಹಿಸಿದ್ದರು.</p>.<p>‘2020ರಲ್ಲಿ ನಡೆದ ಗಾಲ್ವಾನ್ ಕಣಿವೆಯ ಸಂಘರ್ಷದ ನಂತರ ಎರಡೂ ದೇಶಗಳ ನಡುವೆ ಉಂಟಾಗಿದ್ದ ಸಂದಿಗ್ದ ಸ್ಥಿತಿ ಸುಧಾರಣೆಗೆ ಒಂದು ವರ್ಷದಿಂದ ಸರಣಿ ಪ್ರಯತ್ನಗಳು ನಡೆದಿವೆ. ಗಡಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಆಗಿರುವ ಪ್ರಗತಿಗೆ ಚೀನಾ ತೃಪ್ತಿ ವ್ಯಕ್ತಪಡಿಸಿದೆ’ ಎಂದು ಇಲಾಖೆ ತಿಳಿಸಿದೆ.</p>.<p>ಚೀನಾದಲ್ಲಿ ನಡೆಯಲಿರುವ ವಿಶೇಷ ಪ್ರತಿನಿಧಿಗಳ ಸಭೆಯ (ಎಸ್ಆರ್) ತಯಾರಿಯನ್ನು ಜಂಟಿಯಾಗಿ ನಡೆಸಲು ಎರಡೂ ರಾಷ್ಟ್ರಗಳು ಒಪ್ಪಿದವು. ರಾಜತಾಂತ್ರಿಕ ಮತ್ತು ಸೇನಾ ಮಟ್ಟದ ನಿಯಂತ್ರಿತ ಕಾರ್ಯತಂತ್ರ ವಿನಿಮಯಕ್ಕೂ ನಿರ್ಧರಿಸಲಾಯಿತು’ ಎಂದು ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೂರ್ವ ಲಡಾಕ್ನ ವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಇರುವ ಪರಿಸ್ಥಿತಿಯ ಕುರಿತು ಭಾರತ ಮತ್ತು ಚೀನಾ ಬುಧವಾರ ಮಾತುಕತೆ ನಡೆಸಿವೆ.</p>.<p>ಗಡಿಯಲ್ಲಿ ಶಾಂತಿ ವಾತಾವರಣವನ್ನು ಕಾಪಾಡಿಕೊಳ್ಳುವ ಹಾಗೂ ಒಟ್ಟಾರೆ ಸಂಬಂಧವನ್ನು ಸುಧಾರಿಸುವ ಚರ್ಚೆಗಳು ನಡೆದವು ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.</p>.<p>ಬೀಜಿಂಗ್ನಲ್ಲಿ ಬುಧವಾರ ನಡೆದ ‘ಸಮಾಲೋಚನೆ ಮತ್ತು ಸಮನ್ವಯತೆಗಾಗಿ ಕಾರ್ಯನೀತಿ (ಡಬ್ಲ್ಯುಎಂಸಿಸಿ)’ಯ ಸಭೆಯಲ್ಲಿ ಎರಡೂ ದೇಶಗಳ ಪ್ರತಿನಿಧಿಗಳು ಚರ್ಚಿಸಿದರು ಎಂದು ಇಲಾಖೆ ತಿಳಿಸಿದೆ.</p>.<p>ಭಾರತದ ವಿದೇಶಾಂಗ ಇಲಾಖೆ ಜಂಟಿ ಕಾರ್ಯದರ್ಶಿ (ಪೂರ್ವ ಏಷ್ಯಾ) ಸುಜಿತ್ ಘೋಷ್, ಚೀನಾದ ಗಡಿ ಮತ್ತು ಸಾಗರ ವ್ಯವಹಾರಗಳ ಮಹಾ ನಿರ್ದೇಶಕ ಹೋಯು ಯಾಂಕಿ ಮಾತುಕತೆಯ ನೇತೃತ್ವ ವಹಿಸಿದ್ದರು.</p>.<p>‘2020ರಲ್ಲಿ ನಡೆದ ಗಾಲ್ವಾನ್ ಕಣಿವೆಯ ಸಂಘರ್ಷದ ನಂತರ ಎರಡೂ ದೇಶಗಳ ನಡುವೆ ಉಂಟಾಗಿದ್ದ ಸಂದಿಗ್ದ ಸ್ಥಿತಿ ಸುಧಾರಣೆಗೆ ಒಂದು ವರ್ಷದಿಂದ ಸರಣಿ ಪ್ರಯತ್ನಗಳು ನಡೆದಿವೆ. ಗಡಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಆಗಿರುವ ಪ್ರಗತಿಗೆ ಚೀನಾ ತೃಪ್ತಿ ವ್ಯಕ್ತಪಡಿಸಿದೆ’ ಎಂದು ಇಲಾಖೆ ತಿಳಿಸಿದೆ.</p>.<p>ಚೀನಾದಲ್ಲಿ ನಡೆಯಲಿರುವ ವಿಶೇಷ ಪ್ರತಿನಿಧಿಗಳ ಸಭೆಯ (ಎಸ್ಆರ್) ತಯಾರಿಯನ್ನು ಜಂಟಿಯಾಗಿ ನಡೆಸಲು ಎರಡೂ ರಾಷ್ಟ್ರಗಳು ಒಪ್ಪಿದವು. ರಾಜತಾಂತ್ರಿಕ ಮತ್ತು ಸೇನಾ ಮಟ್ಟದ ನಿಯಂತ್ರಿತ ಕಾರ್ಯತಂತ್ರ ವಿನಿಮಯಕ್ಕೂ ನಿರ್ಧರಿಸಲಾಯಿತು’ ಎಂದು ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>