<p><strong>ನವದೆಹಲಿ: ‘</strong>ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವು ಯಾವಾಗಲೂ ಸಾಂಪ್ರದಾಯಿಕ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿದೆ ಹಾಗೂ ಪಾಕಿಸ್ತಾನದಿಂದ ಅಣ್ವಸ್ತ್ರ ಕುರಿತು ಯಾವುದೇ ಸಂಕೇತ ಬಂದಿಲ್ಲ’ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸೋಮವಾರ ಸಂಸದೀಯ ಸಮಿತಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.</p>.<p>ವಿದೇಶಾಂಗ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸಂಸದ ಶಶಿ ತರೂರ್ ಅಧ್ಯಕ್ಷತೆಯಲ್ಲಿ ನಡೆದ ಸಂಸತ್ತಿನ ಸ್ಥಾಯಿ ಸಮಿತಿ ಸಭೆಗೆ ಅವರು ವಿವರಣೆ ನೀಡಿದರು.</p>.<p>ಉಭಯ ದೇಶಗಳ ನಡುವಿನ ಸೇನಾ ಸಂಘರ್ಷವನ್ನು ನಿಲ್ಲಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿರ್ವಹಿಸಿದ ಪಾತ್ರದ ಕುರಿತ ಕೆಲ ಸಂಸದರು ಕೇಳಿದ ಪ್ರಶ್ನೆಗೆ, ‘ಎರಡೂ ದೇಶಗಳ ಸೇನಾ ಸಂಘರ್ಷವನ್ನು ನಿಲ್ಲಿಸುವ ನಿರ್ಧಾರವನ್ನು ದ್ಪಿಪಕ್ಷೀಯ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ’ ಎಂದು ಉತ್ತರಿಸಿದರು. ಈ ಮೂಲಕ ಅವರು ಸರ್ಕಾರದ ನಿಲುವನ್ನು ಪುನರುಚ್ಚರಿಸಿದರು. </p>.<p>ಸೇನಾ ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರಂಪ್ ಮಾಡಿದ ಪ್ರತಿಪಾದನೆಗಳ ಕುರಿತು ವಿರೋಧ ಪಕ್ಷಗಳ ಸದಸ್ಯರು ಕೇಳಿದಾಗ, ‘ಅಮೆರಿಕದ ಅಧ್ಯಕ್ಷರು ಹಾಗೆ ಮಾಡಲು ನನ್ನ ಅನುಮತಿ ಪಡೆಯಲಿಲ್ಲ’ ಎಂದು ವ್ಯಂಗ್ಯವಾಗಿ ಹೇಳಿದರು. </p>.<p>ಸಂಘರ್ಷದ ವೇಳೆ ಪಾಕಿಸ್ತಾನವು ಚೀನಾ ವೇದಿಕೆಗಳನ್ನು ಬಳಸಿಕೊಂಡಿದೆಯೇ ಎಂದು ಕೆಲ ಸಂಸದರು ಪ್ರಶ್ನಿಸಿದರು. ಭಾರತವು ಪಾಕ್ನ ವಾಯುನೆಲೆಗಳ ಮೇಲೆ ದಾಳಿ ಮಾಡಿದ್ದರಿಂದ ಅದು ಅಪ್ರಸ್ತುತ ಎಂದು ಮಿಸ್ರಿ ಪ್ರತಿಕ್ರಿಯಿಸಿದರು ಎಂದು ಮೂಲಗಳು ಹೇಳಿವೆ. </p>.<p>ಟರ್ಕಿಯೇ ದೇಶವು ಭಾರತ ವಿರೋಧಿ ನಿಲುವು ವ್ಯಕ್ತಪಡಿಸಿದ್ದ ಕುರಿತ ಪ್ರಶ್ನೆಗೆ, ‘ಆ ದೇಶವು ಸಾಂಪ್ರದಾಯಿಕವಾಗಿ ಭಾರತವನ್ನು ಬೆಂಬಲಿಸುತ್ತಿರಲಿಲ್ಲ’ ಎಂದರು. </p>.<h2>ಸಮಿತಿ ಖಂಡನೆ: </h2>.<p>ಸೇನಾ ಕಾರ್ಯಾಚರಣೆ ನಿಲ್ಲಿಸಿದ ಕುರಿತ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ ಮಿಸ್ರಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡಿದ್ದನ್ನು ಸಮಿತಿಯ ಸದಸ್ಯರು ಸರ್ವಾನುಮತದಿಂದ ಖಂಡಿಸಿದರು. ಮಿಸ್ರಿ ಅವರ ವೃತ್ತಿಪರ ನಡವಳಿಕೆಯನ್ನು ಸದಸ್ಯರು ಶ್ಲಾಘಿಸಿದರು ಎಂದು ಮೂಲಗಳು ಹೇಳಿವೆ. </p>.<p>ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸಮಿತಿ ಸದಸ್ಯರಾದ ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಕಾಂಗ್ರೆಸ್ನ ರಾಜೀವ್ ಶುಕ್ಲಾ, ದೀಪೇಂದರ್ ಹೂಡಾ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಬಿಜೆಪಿಯ ಅಪರಾಜಿತ ಸಾರಂಗಿ, ಅರುಣ್ ಗೋವಿಲ್ ಸೇರಿದಂತೆ 24 ಸದಸ್ಯರು ಭಾಗವಹಿಸಿದ್ದರು.</p>.<p>ಪಹಲ್ಗಾಮ್ ದಾಳಿ ಬಳಿಕ ಪ್ರತೀಕಾರ ತೆಗೆದುಕೊಳ್ಳಲು ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ಮತ್ತು ಆ ನಂತರ ಎರಡೂ ದೇಶಗಳ ನಡುವಿನ ಸೇನಾ ಸಂಘರ್ಷ ನಡೆದ ಹಿನ್ನೆಲೆಯಲ್ಲಿ ಈ ಸಭೆ ನಡೆಯಿತು. ಉಭಯ ದೇಶಗಳು ಮೇ 10ರಂದು ಸೇನಾ ಕಾರ್ಯಾಚರಣೆ ನಿಲ್ಲಿಸುವ ಒಪ್ಪಂದ ಮಾಡಿಕೊಂಡವು. </p>.<div><blockquote>ಮಿಸ್ರಿ ವಿರುದ್ಧದ ಟ್ರೋಲ್ ಅನ್ನು ಸರ್ವಾನುಮತದಿಂದ ಖಂಡಿಸಲಾಯಿತು. ಈ ಸಂಬಂಧ ನಿರ್ಣಯ ಅಂಗೀಕರಿಸಲು ಸಭೆ ಬಯಸಿತ್ತು. ಆದರೆ ಹಾಗೆ ಮಾಡದಂತೆ ಮಿಸ್ರಿ ಕೋರಿದರು </blockquote><span class="attribution">ಶಶಿ ತರೂರ್ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವು ಯಾವಾಗಲೂ ಸಾಂಪ್ರದಾಯಿಕ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿದೆ ಹಾಗೂ ಪಾಕಿಸ್ತಾನದಿಂದ ಅಣ್ವಸ್ತ್ರ ಕುರಿತು ಯಾವುದೇ ಸಂಕೇತ ಬಂದಿಲ್ಲ’ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸೋಮವಾರ ಸಂಸದೀಯ ಸಮಿತಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.</p>.<p>ವಿದೇಶಾಂಗ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸಂಸದ ಶಶಿ ತರೂರ್ ಅಧ್ಯಕ್ಷತೆಯಲ್ಲಿ ನಡೆದ ಸಂಸತ್ತಿನ ಸ್ಥಾಯಿ ಸಮಿತಿ ಸಭೆಗೆ ಅವರು ವಿವರಣೆ ನೀಡಿದರು.</p>.<p>ಉಭಯ ದೇಶಗಳ ನಡುವಿನ ಸೇನಾ ಸಂಘರ್ಷವನ್ನು ನಿಲ್ಲಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿರ್ವಹಿಸಿದ ಪಾತ್ರದ ಕುರಿತ ಕೆಲ ಸಂಸದರು ಕೇಳಿದ ಪ್ರಶ್ನೆಗೆ, ‘ಎರಡೂ ದೇಶಗಳ ಸೇನಾ ಸಂಘರ್ಷವನ್ನು ನಿಲ್ಲಿಸುವ ನಿರ್ಧಾರವನ್ನು ದ್ಪಿಪಕ್ಷೀಯ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ’ ಎಂದು ಉತ್ತರಿಸಿದರು. ಈ ಮೂಲಕ ಅವರು ಸರ್ಕಾರದ ನಿಲುವನ್ನು ಪುನರುಚ್ಚರಿಸಿದರು. </p>.<p>ಸೇನಾ ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರಂಪ್ ಮಾಡಿದ ಪ್ರತಿಪಾದನೆಗಳ ಕುರಿತು ವಿರೋಧ ಪಕ್ಷಗಳ ಸದಸ್ಯರು ಕೇಳಿದಾಗ, ‘ಅಮೆರಿಕದ ಅಧ್ಯಕ್ಷರು ಹಾಗೆ ಮಾಡಲು ನನ್ನ ಅನುಮತಿ ಪಡೆಯಲಿಲ್ಲ’ ಎಂದು ವ್ಯಂಗ್ಯವಾಗಿ ಹೇಳಿದರು. </p>.<p>ಸಂಘರ್ಷದ ವೇಳೆ ಪಾಕಿಸ್ತಾನವು ಚೀನಾ ವೇದಿಕೆಗಳನ್ನು ಬಳಸಿಕೊಂಡಿದೆಯೇ ಎಂದು ಕೆಲ ಸಂಸದರು ಪ್ರಶ್ನಿಸಿದರು. ಭಾರತವು ಪಾಕ್ನ ವಾಯುನೆಲೆಗಳ ಮೇಲೆ ದಾಳಿ ಮಾಡಿದ್ದರಿಂದ ಅದು ಅಪ್ರಸ್ತುತ ಎಂದು ಮಿಸ್ರಿ ಪ್ರತಿಕ್ರಿಯಿಸಿದರು ಎಂದು ಮೂಲಗಳು ಹೇಳಿವೆ. </p>.<p>ಟರ್ಕಿಯೇ ದೇಶವು ಭಾರತ ವಿರೋಧಿ ನಿಲುವು ವ್ಯಕ್ತಪಡಿಸಿದ್ದ ಕುರಿತ ಪ್ರಶ್ನೆಗೆ, ‘ಆ ದೇಶವು ಸಾಂಪ್ರದಾಯಿಕವಾಗಿ ಭಾರತವನ್ನು ಬೆಂಬಲಿಸುತ್ತಿರಲಿಲ್ಲ’ ಎಂದರು. </p>.<h2>ಸಮಿತಿ ಖಂಡನೆ: </h2>.<p>ಸೇನಾ ಕಾರ್ಯಾಚರಣೆ ನಿಲ್ಲಿಸಿದ ಕುರಿತ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ ಮಿಸ್ರಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡಿದ್ದನ್ನು ಸಮಿತಿಯ ಸದಸ್ಯರು ಸರ್ವಾನುಮತದಿಂದ ಖಂಡಿಸಿದರು. ಮಿಸ್ರಿ ಅವರ ವೃತ್ತಿಪರ ನಡವಳಿಕೆಯನ್ನು ಸದಸ್ಯರು ಶ್ಲಾಘಿಸಿದರು ಎಂದು ಮೂಲಗಳು ಹೇಳಿವೆ. </p>.<p>ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸಮಿತಿ ಸದಸ್ಯರಾದ ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಕಾಂಗ್ರೆಸ್ನ ರಾಜೀವ್ ಶುಕ್ಲಾ, ದೀಪೇಂದರ್ ಹೂಡಾ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಬಿಜೆಪಿಯ ಅಪರಾಜಿತ ಸಾರಂಗಿ, ಅರುಣ್ ಗೋವಿಲ್ ಸೇರಿದಂತೆ 24 ಸದಸ್ಯರು ಭಾಗವಹಿಸಿದ್ದರು.</p>.<p>ಪಹಲ್ಗಾಮ್ ದಾಳಿ ಬಳಿಕ ಪ್ರತೀಕಾರ ತೆಗೆದುಕೊಳ್ಳಲು ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ಮತ್ತು ಆ ನಂತರ ಎರಡೂ ದೇಶಗಳ ನಡುವಿನ ಸೇನಾ ಸಂಘರ್ಷ ನಡೆದ ಹಿನ್ನೆಲೆಯಲ್ಲಿ ಈ ಸಭೆ ನಡೆಯಿತು. ಉಭಯ ದೇಶಗಳು ಮೇ 10ರಂದು ಸೇನಾ ಕಾರ್ಯಾಚರಣೆ ನಿಲ್ಲಿಸುವ ಒಪ್ಪಂದ ಮಾಡಿಕೊಂಡವು. </p>.<div><blockquote>ಮಿಸ್ರಿ ವಿರುದ್ಧದ ಟ್ರೋಲ್ ಅನ್ನು ಸರ್ವಾನುಮತದಿಂದ ಖಂಡಿಸಲಾಯಿತು. ಈ ಸಂಬಂಧ ನಿರ್ಣಯ ಅಂಗೀಕರಿಸಲು ಸಭೆ ಬಯಸಿತ್ತು. ಆದರೆ ಹಾಗೆ ಮಾಡದಂತೆ ಮಿಸ್ರಿ ಕೋರಿದರು </blockquote><span class="attribution">ಶಶಿ ತರೂರ್ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>