‘ಗಾಂಧೀಜಿ ನಾಯಕತ್ವದಲ್ಲಿ ನಡೆದ ಈ ಚಳವಳಿ ಭಾರತವನ್ನು ವಸಾಹತುಶಾಹಿ ಆಡಳಿತದಿಂದ ಮುಕ್ತಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ಇದರಲ್ಲಿ ಭಾಗಿಯಾದ ಎಲ್ಲರಿಗೂ ಗೌರವಪೂರ್ವಕ ನಮನಗಳು’ ಎಂದು ಟ್ವೀಟ್ ಮಾಡಿರುವ ಅವರು, ‘ಇಂದಿನ ಭಾರತ ‘ಭ್ರಷ್ಟಾಚಾರ ಭಾರತ ಬಿಟ್ಟು ತೊಲಗಲಿ, ವಂಶಾಡಳಿತ ಭಾರತ ಬಿಟ್ಟು ತೊಲಗಲಿ, ಓಲೈಸುವಿಕೆಯು ಭಾರತ ಬಿಟ್ಟು ತೊಲಗಲಿ’ ಎಂದು ಒಕ್ಕೊರಲಿನಿಂದ ಹೇಳುತ್ತಿದೆ’ ಎಂದೂ ಉಲ್ಲೇಖಿಸಿದ್ದಾರೆ.