<p><strong>ನವದೆಹಲಿ</strong>: ಆರ್ಥಿಕತೆ ಮತ್ತು ಭದ್ರತಾ ಕ್ಷೇತ್ರಗಳಲ್ಲಿ ಪಾಲುದಾರಿಕೆ ಬಲಪಡಿಸಲು ಭಾರತ –ಆಸ್ಟ್ರೇಲಿಯಾ ನಿರ್ಧರಿಸಿವೆ. ಮುಕ್ತ, ಸೇರ್ಪಡೆಯುಕ್ತ ಮತ್ತು ನಿಯಮ ಆಧಾರಿತ ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶ ವಲಯಕ್ಕೆ ಬದ್ಧತೆಯನ್ನು ಪ್ರಕಟಿಸಿವೆ.</p>.<p>ಭಾರತ ಮತ್ತು ಆಸ್ಟ್ರೇಲಿಯಾ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಎಸ್.ಜೈಶಂಕರ್, ‘ಮುಂದಿನ ವರ್ಷ ಕ್ವಾಡ್ ಸದಸ್ಯ ರಾಷ್ಟ್ರಗಳ ಸಭೆಗೆ ಭಾರತ ಸಿದ್ಧತೆಯನ್ನು ನಡೆಸಿದೆ’ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವೊಂಗ್ ಅವರು ಇದ್ದರು. ಆಸ್ಟ್ರೇಲಿಯಾ, ಭಾರತವಲ್ಲದೆ, ಜಪಾನ್ಮತ್ತು ಅಮೆರಿಕ ಕ್ವಾಡ್ ಸಮೂಹದ ಸದಸ್ಯ ರಾಷ್ಟ್ರಗಳಾಗಿವೆ.</p>.<p>ಸಮಗ್ರ ಆರ್ಥಿಕ ಸಹಕಾರ ಒಪ್ಪಂದದ (ಸಿಇಸಿಎ) ಚರ್ಚೆಗಳನ್ನು ಮುಂದುವರಿಸುವ ಮಹತ್ವ ಕುರಿತು ಚರ್ಚಿಸಲಾಯಿತು. ಅಲ್ಲದೆ, ವಿದ್ಯಾರ್ಥಿಗಳು ಮತ್ತು ವೃತ್ತಿಪರರ ವಿನಿಮಯ ಕಾರ್ಯಕ್ರಮ ಕರಿತು ಚರ್ಚೆ ನಡೆಯಿತು ಎಂದು ಜೈಶಂಕರ್ ತಿಳಿಸಿದರು.</p>.<p>ಪಶ್ಚಿಮ ಏಷ್ಯಾ ಭಾಗದಲ್ಲಿನ ಪರಿಸ್ಥಿತಿ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಅವರು ತಿಳಿಸಿದರು. ಇಸ್ರೇಲ್ ಮತ್ತು ಹಮಾಸ್ ಬಿಕ್ಕಟ್ಟು ಕುರಿತ ಪ್ರಶ್ನೆಗೆ, ‘ಇದು ಸಂಕೀರ್ಣ ಮತ್ತು ಸವಾಲಿನ ಪರಿಸ್ಥಿತಿ. ಭಿನ್ನ ಆಯಾಮಗಳಿವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆರ್ಥಿಕತೆ ಮತ್ತು ಭದ್ರತಾ ಕ್ಷೇತ್ರಗಳಲ್ಲಿ ಪಾಲುದಾರಿಕೆ ಬಲಪಡಿಸಲು ಭಾರತ –ಆಸ್ಟ್ರೇಲಿಯಾ ನಿರ್ಧರಿಸಿವೆ. ಮುಕ್ತ, ಸೇರ್ಪಡೆಯುಕ್ತ ಮತ್ತು ನಿಯಮ ಆಧಾರಿತ ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶ ವಲಯಕ್ಕೆ ಬದ್ಧತೆಯನ್ನು ಪ್ರಕಟಿಸಿವೆ.</p>.<p>ಭಾರತ ಮತ್ತು ಆಸ್ಟ್ರೇಲಿಯಾ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಎಸ್.ಜೈಶಂಕರ್, ‘ಮುಂದಿನ ವರ್ಷ ಕ್ವಾಡ್ ಸದಸ್ಯ ರಾಷ್ಟ್ರಗಳ ಸಭೆಗೆ ಭಾರತ ಸಿದ್ಧತೆಯನ್ನು ನಡೆಸಿದೆ’ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವೊಂಗ್ ಅವರು ಇದ್ದರು. ಆಸ್ಟ್ರೇಲಿಯಾ, ಭಾರತವಲ್ಲದೆ, ಜಪಾನ್ಮತ್ತು ಅಮೆರಿಕ ಕ್ವಾಡ್ ಸಮೂಹದ ಸದಸ್ಯ ರಾಷ್ಟ್ರಗಳಾಗಿವೆ.</p>.<p>ಸಮಗ್ರ ಆರ್ಥಿಕ ಸಹಕಾರ ಒಪ್ಪಂದದ (ಸಿಇಸಿಎ) ಚರ್ಚೆಗಳನ್ನು ಮುಂದುವರಿಸುವ ಮಹತ್ವ ಕುರಿತು ಚರ್ಚಿಸಲಾಯಿತು. ಅಲ್ಲದೆ, ವಿದ್ಯಾರ್ಥಿಗಳು ಮತ್ತು ವೃತ್ತಿಪರರ ವಿನಿಮಯ ಕಾರ್ಯಕ್ರಮ ಕರಿತು ಚರ್ಚೆ ನಡೆಯಿತು ಎಂದು ಜೈಶಂಕರ್ ತಿಳಿಸಿದರು.</p>.<p>ಪಶ್ಚಿಮ ಏಷ್ಯಾ ಭಾಗದಲ್ಲಿನ ಪರಿಸ್ಥಿತಿ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಅವರು ತಿಳಿಸಿದರು. ಇಸ್ರೇಲ್ ಮತ್ತು ಹಮಾಸ್ ಬಿಕ್ಕಟ್ಟು ಕುರಿತ ಪ್ರಶ್ನೆಗೆ, ‘ಇದು ಸಂಕೀರ್ಣ ಮತ್ತು ಸವಾಲಿನ ಪರಿಸ್ಥಿತಿ. ಭಿನ್ನ ಆಯಾಮಗಳಿವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>