<p><strong>ಮುಂಬೈ</strong>: ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಡುವೆ ದಶಕಗಳಿಂದ ನಡೆಯುತ್ತಿರುವ ಸಂಘರ್ಷ ಶಮನಕ್ಕೆ ‘ದ್ವಿ– ರಾಷ್ಟ್ರ ಪರಿಹಾರ’ವೇ ಸೂಕ್ತ ಎಂಬ ನಿಲುವನ್ನು ಭಾರತ ಹೊಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಂಗಳವಾರ ಹೇಳಿದ್ದಾರೆ.</p>.<p>ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಅವರು ಮಾತನಾಡಿದದರು. ನಾಲ್ಕು ತಿಂಗಳ ಹಿಂದೆ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಮಾರಣಾಂತಿಕ ದಾಳಿಯನ್ನು ಅವರು ಭಯೋತ್ಪಾದಕ ದಾಳಿ ಎಂದು ಬಣ್ಣಿಸಿದರು.</p>.<p>‘ಕಳೆದ ವರ್ಷದ ಅಕ್ಟೋಬರ್ 7ರಂದು ಇಸ್ರೇಲ್ನಲ್ಲಿ ನಡೆದದ್ದು ಭಯೋತ್ಪಾದಕ ದಾಳಿ ಆಗಿದೆ. ಭಯೋತ್ಪಾದನೆ ದಾಳಿಯ ನೋವನ್ನು ಹಲವು ಬಾರಿ ಅನುಭವಿಸಿರುವ ನಾವು, ಅದನ್ನು ಗುರುತಿಸುವುದು ಮುಖ್ಯ. ಹೀಗಾಗಿಯೇ ಭಯೋತ್ಪಾದನೆಯ ಮತ್ತೊಂದು ಬಲಿಪಶು ದೇಶದ (ಇಸ್ರೇಲ್) ಜತೆ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದೇವೆ’ ಎಂದರು.</p>.<p>‘ಯಾವುದೇ ದೇಶವು ಅಂತರರಾಷ್ಟ್ರೀಯ ಕಾನೂನುಗಳನ್ನು ಗಮನದಲ್ಲಿ ಇಟ್ಟುಕೊಂಡು, ನಾಗರಿಕರ ಸಾವು–ನೋವುಗಳನ್ನು ತಪ್ಪಿಸಲು ಆದ್ಯತೆ ನೀಡಬೇಕು’ ಎಂದು ಅವರು ಇಸ್ರೇಲ್ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್–ಹಮಾಸ್ ಯುದ್ಧವು ನಾಗರಿಕರ ಮೇಲೆ ಪರಿಣಾಮ ಬೀರುತ್ತಿರುವ ಕಾರಣ, ಅದನ್ನು ಎದುರಿಸಲು ‘ಸುಸ್ಥಿರ ಮಾನವೀಯ ಕಾರಿಡಾರ್’ನ ಅಗತ್ಯವಿದೆ ಎಂದು ಜೈಶಂಕರ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಡುವೆ ದಶಕಗಳಿಂದ ನಡೆಯುತ್ತಿರುವ ಸಂಘರ್ಷ ಶಮನಕ್ಕೆ ‘ದ್ವಿ– ರಾಷ್ಟ್ರ ಪರಿಹಾರ’ವೇ ಸೂಕ್ತ ಎಂಬ ನಿಲುವನ್ನು ಭಾರತ ಹೊಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಂಗಳವಾರ ಹೇಳಿದ್ದಾರೆ.</p>.<p>ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಅವರು ಮಾತನಾಡಿದದರು. ನಾಲ್ಕು ತಿಂಗಳ ಹಿಂದೆ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಮಾರಣಾಂತಿಕ ದಾಳಿಯನ್ನು ಅವರು ಭಯೋತ್ಪಾದಕ ದಾಳಿ ಎಂದು ಬಣ್ಣಿಸಿದರು.</p>.<p>‘ಕಳೆದ ವರ್ಷದ ಅಕ್ಟೋಬರ್ 7ರಂದು ಇಸ್ರೇಲ್ನಲ್ಲಿ ನಡೆದದ್ದು ಭಯೋತ್ಪಾದಕ ದಾಳಿ ಆಗಿದೆ. ಭಯೋತ್ಪಾದನೆ ದಾಳಿಯ ನೋವನ್ನು ಹಲವು ಬಾರಿ ಅನುಭವಿಸಿರುವ ನಾವು, ಅದನ್ನು ಗುರುತಿಸುವುದು ಮುಖ್ಯ. ಹೀಗಾಗಿಯೇ ಭಯೋತ್ಪಾದನೆಯ ಮತ್ತೊಂದು ಬಲಿಪಶು ದೇಶದ (ಇಸ್ರೇಲ್) ಜತೆ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದೇವೆ’ ಎಂದರು.</p>.<p>‘ಯಾವುದೇ ದೇಶವು ಅಂತರರಾಷ್ಟ್ರೀಯ ಕಾನೂನುಗಳನ್ನು ಗಮನದಲ್ಲಿ ಇಟ್ಟುಕೊಂಡು, ನಾಗರಿಕರ ಸಾವು–ನೋವುಗಳನ್ನು ತಪ್ಪಿಸಲು ಆದ್ಯತೆ ನೀಡಬೇಕು’ ಎಂದು ಅವರು ಇಸ್ರೇಲ್ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್–ಹಮಾಸ್ ಯುದ್ಧವು ನಾಗರಿಕರ ಮೇಲೆ ಪರಿಣಾಮ ಬೀರುತ್ತಿರುವ ಕಾರಣ, ಅದನ್ನು ಎದುರಿಸಲು ‘ಸುಸ್ಥಿರ ಮಾನವೀಯ ಕಾರಿಡಾರ್’ನ ಅಗತ್ಯವಿದೆ ಎಂದು ಜೈಶಂಕರ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>