ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರೋಧಿ ಶಕ್ತಿಗಳ ಪ್ರತಿರೋಧದ ನಡುವೆಯೂ ಭಾರತ ಶಕ್ತಿಶಾಲಿ ರಾಷ್ಟ್ರವಾಗಿದೆ: ಹೊಸಬಾಳೆ

Published 11 ಜೂನ್ 2023, 11:26 IST
Last Updated 11 ಜೂನ್ 2023, 11:26 IST
ಅಕ್ಷರ ಗಾತ್ರ

ಸುಲ್ತಾನ್‌ಪುರ (ಉತ್ತರ ಪ್ರದೇಶ): ‘ವಿರೋಧಿ ಶಕ್ತಿಗಳ ತೀವ್ರ ಪ್ರತಿರೋಧದ ನಡುವೆಯೂ ಭಾರತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್ಎಸ್‌) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶನಿವಾರ ಇಲ್ಲಿ ತಿಳಿಸಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ಯುವ ಸಮೂಹಕ್ಕೆ ದೇಶದ ಇತಿಹಾಸ, ಸಂಸ್ಕೃತಿ, ಪರಂಪರೆಯನ್ನು ತಿಳಿಸಬೇಕಿದೆ. ಇದರಿಂದ ಸ್ಫೂರ್ತಿ ಪಡೆದು ಅವರು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಬೇಕು’ ಎಂದರು.

‘ದೇಶವೊಂದು ಎಷ್ಟೇ ಸಂಪದ್ಭರಿತ ನೈಸರ್ಗಿಕ ಸಂಪನ್ಮೂಲ, ಐತಿಹಾಸಿಕ ಚರಿತ್ರೆ ಹೊಂದಿದ್ದರೂ; ಅಲ್ಲಿ ವಾಸಿಸುವ ಜನರು ಸಮಾಜಕ್ಕೆ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸದಿದ್ದರೆ, ಎಂದಿಗೂ ಆ ರಾಷ್ಟ್ರ ಪ್ರಗತಿ ಹೊಂದಲು ಸಾಧ್ಯವಿಲ್ಲ’ ಎಂದು ಹೊಸಬಾಳೆ ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT