<p><strong>ನವದೆಹಲಿ:</strong> ಉದ್ಯಮಿ ಗೌತಮ್ ಅದಾನಿ ವಿರುದ್ಧದ ದೋಷಾರೋಪಣೆ ವಿಷಯಕ್ಕೆ ಸಂಬಂಧಿಸಿದಂತೆ 'ಇಂಡಿಯಾ' ಮೈತ್ರಿಕೂಟದ ಪಕ್ಷಗಳ ನಾಯಕರು ಇಂದು (ಬುಧವಾರ) ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. </p><p>ಅದಾನಿ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. </p><p>'ಮೋದಿ-ಅದಾನಿ ಒಂದೇ' ಎಂಬ ಬ್ಯಾನರ್ ಹಿಡಿದುಕೊಂಡು ವಿಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದರು. </p><p>ಕಾಂಗ್ರೆಸ್, ಎಎಪಿ, ಆರ್ಜೆಡಿ, ಶಿವಸೇನಾ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗಿದರು. ಆದರೆ ವಿಪಕ್ಷಗಳ ಪ್ರತಿಭಟನೆಯಿಂದ ಟಿಎಂಸಿ ದೂರ ಉಳಿದುಕೊಂಡಿತು. </p><p>ಕಾಂಗ್ರೆಸ್ ನಿಯೋಗದೊಂದಿಗೆ ಸಂಭಲ್ಗೆ ತೆರಳಿರುವ ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ. </p><p>ಸುರಕ್ಷತೆ ಹಾಗೂ ಭದ್ರತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸಂಸತ್ತಿನ ಗೇಟ್ಗಳ ಮುಂದೆ ಪ್ರತಿಭಟನೆ ನಡೆಸಬಾರದು ಎಂದು ಸಂಸದರಿಗೆ ಲೋಕಸಭೆ ಕಾರ್ಯಾಲಯ ಮಂಗಳವಾರ ಸಲಹೆ ನೀಡಿತ್ತು. ಇದೇ ಜಾಗದಲ್ಲಿ ಮಂಗಳವಾರವೂ ವಿಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದ್ದರು. </p>.Sambhal: ಗಾಜಿಪುರ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ತಡೆ ಹಿಡಿದ ಪೊಲೀಸರು.ಮೋದಿಗೆ ಅದಾನಿ ಮೇಲಿರುವ ಕಾಳಜಿ ವಯನಾಡ್ ಸಂತ್ರಸ್ತರ ಮೇಲಿಲ್ಲ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉದ್ಯಮಿ ಗೌತಮ್ ಅದಾನಿ ವಿರುದ್ಧದ ದೋಷಾರೋಪಣೆ ವಿಷಯಕ್ಕೆ ಸಂಬಂಧಿಸಿದಂತೆ 'ಇಂಡಿಯಾ' ಮೈತ್ರಿಕೂಟದ ಪಕ್ಷಗಳ ನಾಯಕರು ಇಂದು (ಬುಧವಾರ) ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. </p><p>ಅದಾನಿ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. </p><p>'ಮೋದಿ-ಅದಾನಿ ಒಂದೇ' ಎಂಬ ಬ್ಯಾನರ್ ಹಿಡಿದುಕೊಂಡು ವಿಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದರು. </p><p>ಕಾಂಗ್ರೆಸ್, ಎಎಪಿ, ಆರ್ಜೆಡಿ, ಶಿವಸೇನಾ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗಿದರು. ಆದರೆ ವಿಪಕ್ಷಗಳ ಪ್ರತಿಭಟನೆಯಿಂದ ಟಿಎಂಸಿ ದೂರ ಉಳಿದುಕೊಂಡಿತು. </p><p>ಕಾಂಗ್ರೆಸ್ ನಿಯೋಗದೊಂದಿಗೆ ಸಂಭಲ್ಗೆ ತೆರಳಿರುವ ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ. </p><p>ಸುರಕ್ಷತೆ ಹಾಗೂ ಭದ್ರತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸಂಸತ್ತಿನ ಗೇಟ್ಗಳ ಮುಂದೆ ಪ್ರತಿಭಟನೆ ನಡೆಸಬಾರದು ಎಂದು ಸಂಸದರಿಗೆ ಲೋಕಸಭೆ ಕಾರ್ಯಾಲಯ ಮಂಗಳವಾರ ಸಲಹೆ ನೀಡಿತ್ತು. ಇದೇ ಜಾಗದಲ್ಲಿ ಮಂಗಳವಾರವೂ ವಿಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದ್ದರು. </p>.Sambhal: ಗಾಜಿಪುರ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ತಡೆ ಹಿಡಿದ ಪೊಲೀಸರು.ಮೋದಿಗೆ ಅದಾನಿ ಮೇಲಿರುವ ಕಾಳಜಿ ವಯನಾಡ್ ಸಂತ್ರಸ್ತರ ಮೇಲಿಲ್ಲ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>