ಭಾನುವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ದೇಶವನ್ನು ಉದ್ದೇಶಿಸಿ ಭಾಷಣ ಮಾಡಲು ಬಾಳಾಸಾಹೇಬ್ ಠಾಕ್ರೆ ಅವರು ಶಿವಾಜಿ ಉದ್ಯಾನವನ್ನು ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ, ಈಗ ಸಾವರ್ಕರ್ ಅವರನ್ನು ಅವಮಾನಿಸುವ ರಾಹುಲ್ ಗಾಂಧಿ ಅವರ ಜೊತೆಗೆ ಉದ್ಧವ್ ಠಾಕ್ರೆ ವೇದಿಕೆ ಹಂಚಿಕೊಂಡಿದ್ದಾರೆ. ಈ ಮೂಲಕ ಶಿವಸೇನಾ ಪಕ್ಷಕ್ಕೆ ಇದು ಕಪ್ಪು ದಿನವಾಗಿದೆ’ ಎಂದು ಹೇಳಿದರು.