<p><strong>ಮುಂಬೈ:</strong> ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ತೆಲುಗು ದೇಶಂ ಪಕ್ಷ (ಟಿಡಿಪಿ), ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ 'ಇಂಡಿಯಾ' ಮೈತಿಕೂಟದ ಎಲ್ಲ ಪಕ್ಷಗಳ ಬೆಂಬಲ ಖಚಿತಪಡಿಸಲು ಪ್ರಯತ್ನಿಸಲಿದ್ದೇವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, 'ಲೋಕಸಭಾ ಸ್ಪೀಕರ್ ಆಯ್ಕೆಯು ಅತ್ಯಂತ ನಿರ್ಣಾಯಕವಾಗಿದೆ. ಒಂದು ವೇಳೆ ಬಿಜೆಪಿಗೆ ಸ್ಪೀಕರ್ ಸ್ಥಾನ ಸಿಕ್ಕರೆ, ಟಿಡಿಪಿ, ಜೆಡಿಯು, ಚಿರಾಗ್ ಪಾಸ್ವಾನ್ ಹಾಗೂ ಚಯಂತ್ ಚೌಧರಿ ಪಕ್ಷಗಳನ್ನು ಒಡೆಯಲಿದೆ' ಎಂದು ಹೇಳಿದ್ದಾರೆ. </p><p>'ಕೇಂದ್ರದಲ್ಲಿ ಸ್ಥಿರ ಸರ್ಕಾರ ಇರುವುದಿಲ್ಲ. ತನ್ನನ್ನು ಬೆಂಬಲಿಸುವ ಪಕ್ಷಗಳಿಗೆ ಬಿಜೆಪಿ ದ್ರೋಹ ಬಗೆದಿರುವ ಅನುಭವ ನಮಗಿದೆ' ಎಂದು ಅವರು ಹೇಳಿದ್ದಾರೆ. </p><p>'ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಟಿಡಿಪಿ ಬಯಸುತ್ತಿದೆ ಎಂಬ ವಿಷಯ ನನಗೆ ತಿಳಿದು ಬಂದಿದೆ. ಹಾಗಾದರೆ 'ಇಂಡಿಯಾ' ಮೈತ್ರಿಕೂಟವು ಈ ಕುರಿತು ಚರ್ಚಿಸಿ ಎಲ್ಲ ಮೈತ್ರಿ ಪಕ್ಷಗಳು ಟಿಡಿಪಿಗೆ ಬೆಂಬಲವನ್ನು ಖಚಿತಪಡಿಸಲು ಪ್ರಯತ್ನಿಸಲಿದ್ದೇವೆ' ಎಂದು ಹೇಳಿದ್ದಾರೆ. </p><p>ಟಿಡಿಪಿ, ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದ ಭಾಗವಾಗಿದೆ. </p>.Andhra Pradesh Elections Results: 133 ಸ್ಥಾನಗಳಲ್ಲಿ ಗೆದ್ದ ಟಿಡಿಪಿ.ಸರ್ವಾಧಿಕಾರಿಗಳ ಜೊತೆ ಮೈತ್ರಿ ಬಗ್ಗೆ ನಾಯ್ಡು,ನಿತೀಶ್ ನಿರ್ಧರಿಸಲಿ: ಸಂಜಯ್ ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ತೆಲುಗು ದೇಶಂ ಪಕ್ಷ (ಟಿಡಿಪಿ), ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ 'ಇಂಡಿಯಾ' ಮೈತಿಕೂಟದ ಎಲ್ಲ ಪಕ್ಷಗಳ ಬೆಂಬಲ ಖಚಿತಪಡಿಸಲು ಪ್ರಯತ್ನಿಸಲಿದ್ದೇವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, 'ಲೋಕಸಭಾ ಸ್ಪೀಕರ್ ಆಯ್ಕೆಯು ಅತ್ಯಂತ ನಿರ್ಣಾಯಕವಾಗಿದೆ. ಒಂದು ವೇಳೆ ಬಿಜೆಪಿಗೆ ಸ್ಪೀಕರ್ ಸ್ಥಾನ ಸಿಕ್ಕರೆ, ಟಿಡಿಪಿ, ಜೆಡಿಯು, ಚಿರಾಗ್ ಪಾಸ್ವಾನ್ ಹಾಗೂ ಚಯಂತ್ ಚೌಧರಿ ಪಕ್ಷಗಳನ್ನು ಒಡೆಯಲಿದೆ' ಎಂದು ಹೇಳಿದ್ದಾರೆ. </p><p>'ಕೇಂದ್ರದಲ್ಲಿ ಸ್ಥಿರ ಸರ್ಕಾರ ಇರುವುದಿಲ್ಲ. ತನ್ನನ್ನು ಬೆಂಬಲಿಸುವ ಪಕ್ಷಗಳಿಗೆ ಬಿಜೆಪಿ ದ್ರೋಹ ಬಗೆದಿರುವ ಅನುಭವ ನಮಗಿದೆ' ಎಂದು ಅವರು ಹೇಳಿದ್ದಾರೆ. </p><p>'ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಟಿಡಿಪಿ ಬಯಸುತ್ತಿದೆ ಎಂಬ ವಿಷಯ ನನಗೆ ತಿಳಿದು ಬಂದಿದೆ. ಹಾಗಾದರೆ 'ಇಂಡಿಯಾ' ಮೈತ್ರಿಕೂಟವು ಈ ಕುರಿತು ಚರ್ಚಿಸಿ ಎಲ್ಲ ಮೈತ್ರಿ ಪಕ್ಷಗಳು ಟಿಡಿಪಿಗೆ ಬೆಂಬಲವನ್ನು ಖಚಿತಪಡಿಸಲು ಪ್ರಯತ್ನಿಸಲಿದ್ದೇವೆ' ಎಂದು ಹೇಳಿದ್ದಾರೆ. </p><p>ಟಿಡಿಪಿ, ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದ ಭಾಗವಾಗಿದೆ. </p>.Andhra Pradesh Elections Results: 133 ಸ್ಥಾನಗಳಲ್ಲಿ ಗೆದ್ದ ಟಿಡಿಪಿ.ಸರ್ವಾಧಿಕಾರಿಗಳ ಜೊತೆ ಮೈತ್ರಿ ಬಗ್ಗೆ ನಾಯ್ಡು,ನಿತೀಶ್ ನಿರ್ಧರಿಸಲಿ: ಸಂಜಯ್ ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>