<p><strong>ನವದೆಹಲಿ</strong>: ‘ವ್ಯಾಪಾರ, ಹೂಡಿಕೆ, ಗಣಿ, ಇಂಧನ ಸೇರಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವಿನ ಒಪ್ಪಂದಗಳನ್ನು ಬಲಪಡಿಸಲು ಉಭಯ ರಾಷ್ಟ್ರಗಳು ಮಹತ್ವಾಕಾಂಕ್ಷೆಯ ರೂಪುರೇಷೆಗಳನ್ನು ಸಿದ್ಧಪಡಿಸಿವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಸೋಮವಾರ ಹೇಳಿದ್ದಾರೆ.</p>.<p>ಭಾರತ ಪ್ರವಾಸ ಕೈಗೊಂಡಿರುವ ಕೆನಡಾ ವಿದೇಶಾಂಗ ಸಚಿವೆ ಅನಿತಾ ಆನಂದ್ ಅವರ ಜತೆಗಿನ ಮಾತುಕತೆ ಬಳಿಕ ಆ ಬಗ್ಗೆ ಮಾಧ್ಯಮಗಳಿಗೆ ಜೈಶಂಕರ್ ಮಾಹಿತಿ ನೀಡಿದ್ದಾರೆ.</p>.<p>‘ಕಳೆದ ಕೆಲವು ತಿಂಗಳಲ್ಲಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧವು ವೃದ್ಧಿಸುತ್ತಿದ್ದು, ಈ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವುದಕ್ಕೆ ಅಗತ್ಯವಾಗಿರುವ ಕಾರ್ಯವಿಧಾನಗಳನ್ನು ಮರು ರೂಪಿಸಲು ನಾವು ಕೆಲಸ ಮಾಡುತ್ತಿದ್ದೇವೆ’ ಎಂದು ತಿಳಿಸಿದರು. </p>.<p>ಅಲ್ಲದೇ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲೂ ಸಹಕಾರ ಹೆಚ್ಚಿಸುವ ನಿಟ್ಟಿನಲ್ಲಿ ಮಾತುಕತೆ ನಡೆದಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. </p>.<p><strong>ಮೋದಿ ಜತೆಗೆ ಮಾತುಕತೆ</strong></p><p>ಮೂರು ದೇಶಗಳ ಪ್ರವಾಸದ ನಿಮಿತ್ತ ಭಾರತಕ್ಕೆ ಭೇಟಿ ನೀಡಿರುವ ಕೆನಡಾ ವಿದೇಶಾಂಗ ಸಚಿವೆ ಅನಿತಾ ಆನಂದ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗಿದ್ದಾರೆ.</p><p>ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ವೃದ್ಧಿಗೊಳಿಸಲು ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಪ್ರಧಾನಿ ಜತೆಗೆ ಚರ್ಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಜಿ–7 ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಪ್ರಧಾನಿ ಮೋದಿ ಅವರು ಜೂನ್ನಲ್ಲಿ ಕೆನಡಾಗೆ ಭೇಟಿ ನೀಡಿದ್ದರು. ಆ ಸಂದರ್ಭವನ್ನು ಅನಿತಾ ಅವರ ಜತೆಗಿನ ಮಾತುಕತೆಯ ವೇಳೆ ಮೋದಿ ಸ್ಮರಿಸಿದ್ದಾರೆ ಎಂದೂ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವ್ಯಾಪಾರ, ಹೂಡಿಕೆ, ಗಣಿ, ಇಂಧನ ಸೇರಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವಿನ ಒಪ್ಪಂದಗಳನ್ನು ಬಲಪಡಿಸಲು ಉಭಯ ರಾಷ್ಟ್ರಗಳು ಮಹತ್ವಾಕಾಂಕ್ಷೆಯ ರೂಪುರೇಷೆಗಳನ್ನು ಸಿದ್ಧಪಡಿಸಿವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಸೋಮವಾರ ಹೇಳಿದ್ದಾರೆ.</p>.<p>ಭಾರತ ಪ್ರವಾಸ ಕೈಗೊಂಡಿರುವ ಕೆನಡಾ ವಿದೇಶಾಂಗ ಸಚಿವೆ ಅನಿತಾ ಆನಂದ್ ಅವರ ಜತೆಗಿನ ಮಾತುಕತೆ ಬಳಿಕ ಆ ಬಗ್ಗೆ ಮಾಧ್ಯಮಗಳಿಗೆ ಜೈಶಂಕರ್ ಮಾಹಿತಿ ನೀಡಿದ್ದಾರೆ.</p>.<p>‘ಕಳೆದ ಕೆಲವು ತಿಂಗಳಲ್ಲಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧವು ವೃದ್ಧಿಸುತ್ತಿದ್ದು, ಈ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವುದಕ್ಕೆ ಅಗತ್ಯವಾಗಿರುವ ಕಾರ್ಯವಿಧಾನಗಳನ್ನು ಮರು ರೂಪಿಸಲು ನಾವು ಕೆಲಸ ಮಾಡುತ್ತಿದ್ದೇವೆ’ ಎಂದು ತಿಳಿಸಿದರು. </p>.<p>ಅಲ್ಲದೇ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲೂ ಸಹಕಾರ ಹೆಚ್ಚಿಸುವ ನಿಟ್ಟಿನಲ್ಲಿ ಮಾತುಕತೆ ನಡೆದಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. </p>.<p><strong>ಮೋದಿ ಜತೆಗೆ ಮಾತುಕತೆ</strong></p><p>ಮೂರು ದೇಶಗಳ ಪ್ರವಾಸದ ನಿಮಿತ್ತ ಭಾರತಕ್ಕೆ ಭೇಟಿ ನೀಡಿರುವ ಕೆನಡಾ ವಿದೇಶಾಂಗ ಸಚಿವೆ ಅನಿತಾ ಆನಂದ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗಿದ್ದಾರೆ.</p><p>ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ವೃದ್ಧಿಗೊಳಿಸಲು ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಪ್ರಧಾನಿ ಜತೆಗೆ ಚರ್ಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಜಿ–7 ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಪ್ರಧಾನಿ ಮೋದಿ ಅವರು ಜೂನ್ನಲ್ಲಿ ಕೆನಡಾಗೆ ಭೇಟಿ ನೀಡಿದ್ದರು. ಆ ಸಂದರ್ಭವನ್ನು ಅನಿತಾ ಅವರ ಜತೆಗಿನ ಮಾತುಕತೆಯ ವೇಳೆ ಮೋದಿ ಸ್ಮರಿಸಿದ್ದಾರೆ ಎಂದೂ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>