<p><strong>ನವದೆಹಲಿ:</strong> ಅಫ್ಗಾನಿಸ್ತಾನಕ್ಕೆ ಸಂಬಂಧಿಸಿದ ವಿದ್ಯಮಾನಗಳ ಕುರಿತು ಕಾರ್ಯಕ್ರಮ ರೂಪಿಸಿ, ಜಾರಿಗೊಳಿಸುವುದಕ್ಕಾಗಿ ಉನ್ನತ ಅಧಿಕಾರಿಗಳ ಮಟ್ಟದ ಜಂಟಿ ಕಾರ್ಯಪಡೆಯೊಂದನ್ನು ಸ್ಥಾಪಿಸಲು ಭಾರತ ಹಾಗೂ ಮಧ್ಯ ಏಷ್ಯಾದ ಐದು ರಾಷ್ಟ್ರಗಳು ಗುರುವಾರ ನಿರ್ಧರಿಸಿದವು.</p>.<p>ಮಧ್ಯ ಏಷ್ಯಾದ ಐದು ರಾಷ್ಟ್ರಗಳ ಅಧ್ಯಕ್ಷರೊಂದಿಗೆ ನಡೆದ ಮೊದಲ ವರ್ಚುವಲ್ ಶೃಂಗಸಭೆಯಲ್ಲಿಈ ನಿರ್ಣಯ ಕೈಗೊಳ್ಳಲಾಯಿತು ಎಂದು ವಿದೇಶಾಂಗ ಸಚಿವಾಲಯ ಕಾರ್ಯದರ್ಶಿ (ಪಶ್ಚಿಮ) ರೀನತ್ ಸಂಧು ಹೇಳಿದ್ದಾರೆ.</p>.<p>‘ಪ್ರತಿ ಎರಡು ವರ್ಷಗಳಿಗೊಮ್ಮೆ ಶೃಂಗಸಭೆಯನ್ನು ಆಯೋಜಿಸಲು ನಾಯಕರು ನಿರ್ಧರಿಸಿದರು. ಮುಂದಿನ ಸಭೆ 2024ರಲ್ಲಿ ನಡೆಯುವ ನಿರೀಕ್ಷೆ ಇದೆ’ ಎಂದೂ ಅವರು ಹೇಳಿದ್ದಾರೆ.</p>.<p>ವರ್ಚುವಲ್ ಆಗಿ ನಡೆದ ಈ ಶೃಂಗಸಭೆಯನ್ನು ಭಾರತ ಆಯೋಜಿಸಿತ್ತು. ಕಜಕಸ್ತಾನ ಅಧ್ಯಕ್ಷ ಕಸ್ಸೀಮ್ ಜೋಮರ್ಟ್ ತೋಕಯೇವ್, ಶವ್ಕತ್ ಮಿರ್ಜಿಯೋಯೇವ್ (ಉಜ್ಬೇಕಿಸ್ತಾನ), ಎಮೊಮಲಿ ರೆಹಮೋನ್ (ತಜಿಕಿಸ್ತಾನ), ಗುರ್ಬಂಗುಲಿ ಬರ್ದಿಮುಹಮೆದೋವ್ ಹಾಗೂ ಕಿರ್ಗಿಸ್ತಾನದ ಅಧ್ಯಕ್ಷ ಸಾದಿರ್ ಜಪಾರೋವ್ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,‘ ಪ್ರಾದೇಶಿಕತ ಸುರಕ್ಷತೆಗಾಗಿ ಭಾರತ ಹಾಗೂ ಮಧ್ಯ ಏಷ್ಯಾ ರಾಷ್ಟ್ರಗಳ ನಡುವೆ ಸಹಕಾರ ಅಗತ್ಯ. ಅದರಲ್ಲೂ, ಅಫ್ಗಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇದಕ್ಕೆ ಈಗ ಮತ್ತಷ್ಟೂ ಮಹತ್ವ ಇದೆ’ ಎಂದರು.</p>.<p>‘ಮಧ್ಯ ಏಷ್ಯಾ ಹಾಗೂ ಭಾರತದ ನಡುವೆ ಮುಂದಿನ 30 ವರ್ಷಗಳ ಅವಧಿಗೆ ಸಹಕಾರ ಹಾಗೂ ಸಂವಹನ–ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುವುದು ಅಗತ್ಯ’ ಎಂದು ಮೋದಿ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಫ್ಗಾನಿಸ್ತಾನಕ್ಕೆ ಸಂಬಂಧಿಸಿದ ವಿದ್ಯಮಾನಗಳ ಕುರಿತು ಕಾರ್ಯಕ್ರಮ ರೂಪಿಸಿ, ಜಾರಿಗೊಳಿಸುವುದಕ್ಕಾಗಿ ಉನ್ನತ ಅಧಿಕಾರಿಗಳ ಮಟ್ಟದ ಜಂಟಿ ಕಾರ್ಯಪಡೆಯೊಂದನ್ನು ಸ್ಥಾಪಿಸಲು ಭಾರತ ಹಾಗೂ ಮಧ್ಯ ಏಷ್ಯಾದ ಐದು ರಾಷ್ಟ್ರಗಳು ಗುರುವಾರ ನಿರ್ಧರಿಸಿದವು.</p>.<p>ಮಧ್ಯ ಏಷ್ಯಾದ ಐದು ರಾಷ್ಟ್ರಗಳ ಅಧ್ಯಕ್ಷರೊಂದಿಗೆ ನಡೆದ ಮೊದಲ ವರ್ಚುವಲ್ ಶೃಂಗಸಭೆಯಲ್ಲಿಈ ನಿರ್ಣಯ ಕೈಗೊಳ್ಳಲಾಯಿತು ಎಂದು ವಿದೇಶಾಂಗ ಸಚಿವಾಲಯ ಕಾರ್ಯದರ್ಶಿ (ಪಶ್ಚಿಮ) ರೀನತ್ ಸಂಧು ಹೇಳಿದ್ದಾರೆ.</p>.<p>‘ಪ್ರತಿ ಎರಡು ವರ್ಷಗಳಿಗೊಮ್ಮೆ ಶೃಂಗಸಭೆಯನ್ನು ಆಯೋಜಿಸಲು ನಾಯಕರು ನಿರ್ಧರಿಸಿದರು. ಮುಂದಿನ ಸಭೆ 2024ರಲ್ಲಿ ನಡೆಯುವ ನಿರೀಕ್ಷೆ ಇದೆ’ ಎಂದೂ ಅವರು ಹೇಳಿದ್ದಾರೆ.</p>.<p>ವರ್ಚುವಲ್ ಆಗಿ ನಡೆದ ಈ ಶೃಂಗಸಭೆಯನ್ನು ಭಾರತ ಆಯೋಜಿಸಿತ್ತು. ಕಜಕಸ್ತಾನ ಅಧ್ಯಕ್ಷ ಕಸ್ಸೀಮ್ ಜೋಮರ್ಟ್ ತೋಕಯೇವ್, ಶವ್ಕತ್ ಮಿರ್ಜಿಯೋಯೇವ್ (ಉಜ್ಬೇಕಿಸ್ತಾನ), ಎಮೊಮಲಿ ರೆಹಮೋನ್ (ತಜಿಕಿಸ್ತಾನ), ಗುರ್ಬಂಗುಲಿ ಬರ್ದಿಮುಹಮೆದೋವ್ ಹಾಗೂ ಕಿರ್ಗಿಸ್ತಾನದ ಅಧ್ಯಕ್ಷ ಸಾದಿರ್ ಜಪಾರೋವ್ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,‘ ಪ್ರಾದೇಶಿಕತ ಸುರಕ್ಷತೆಗಾಗಿ ಭಾರತ ಹಾಗೂ ಮಧ್ಯ ಏಷ್ಯಾ ರಾಷ್ಟ್ರಗಳ ನಡುವೆ ಸಹಕಾರ ಅಗತ್ಯ. ಅದರಲ್ಲೂ, ಅಫ್ಗಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇದಕ್ಕೆ ಈಗ ಮತ್ತಷ್ಟೂ ಮಹತ್ವ ಇದೆ’ ಎಂದರು.</p>.<p>‘ಮಧ್ಯ ಏಷ್ಯಾ ಹಾಗೂ ಭಾರತದ ನಡುವೆ ಮುಂದಿನ 30 ವರ್ಷಗಳ ಅವಧಿಗೆ ಸಹಕಾರ ಹಾಗೂ ಸಂವಹನ–ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುವುದು ಅಗತ್ಯ’ ಎಂದು ಮೋದಿ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>