<p><strong>ನವದೆಹಲಿ</strong>: ‘ವಾಸ್ತವ ನಿಯಂತ್ರಣ ರೇಖೆ(ಎಲ್ಎಸಿ) ಉದ್ದಕ್ಕೂ ಕಳೆದ ಒಂಬತ್ತು ತಿಂಗಳಿಂದ ಶಾಂತಿ ನೆಲಸಿದೆ. ಈ ಕಾರಣಕ್ಕೆ ಚೀನಾ ಮತ್ತು ಭಾರತ ನಡುವಿನ ಸಂಬಂಧದಲ್ಲಿ ‘ಏರುಗತಿ’ ಕಾಣಬಹುದಾಗಿದೆ’ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮಂಗಳವಾರ ಹೇಳಿದರು.</p>.<p>ಗಡಿ ಸಮಸ್ಯೆ ಕುರಿತಂತೆ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಶಾಂಘೈ ಸಹಕಾರ ಸಂಘಟನೆ(ಎಸ್ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಡೊಭಾಲ್ ಅವರ ಈ ಹೇಳಿಕೆಗೆ ಮಹತ್ವ ಬಂದಿದೆ.</p>.<p>‘ವಿಶೇಷ ಪ್ರತಿನಿಧಿಗಳ’ ಕಾರ್ಯವಿಧಾನ ಚೌಕಟ್ಟಿನಡಿ ಆಯೋಜಿಸಿದ್ದ ಮಾತುಕತೆಯಲ್ಲಿ, ಜೈಶಂಕರ್ ಹಾಗೂ ವಾಂಗ್ ಯಿ ಅವರು ಗಡಿಗೆ ಸಂಬಂಧಿಸಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದರು.</p>.<p>ವಿಶೇಷ ಪ್ರತಿನಿಧಿಗಳ’ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಕಳೆದ ಡಿಸೆಂಬರ್ನಲ್ಲಿ ಬೀಜಿಂಗ್ಗೆ ಭೇಟಿ ನೀಡಿದ್ದನ್ನು ಪ್ರಸ್ತಾಪಿಸಿದ ಡೊಭಾಲ್,‘ಈ ಭೇಟಿ ವೇಳೆ ನಡೆದ ಮಾತುಕತೆ ನಂತರ, ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ’ ಎಂದರು.</p>.<p>‘ಗಡಿಗಳಲ್ಲಿ ಶಾಂತಿ ನೆಲಸಿದೆ. ಹೀಗಾಗಿ, ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತಂತೆ ಉಭಯ ದೇಶಗಳ ನಡುವೆ ಗಮನಾರ್ಹ ಮಾತುಕತೆಗಳು ನಡೆಯುತ್ತಿವೆ’ ಎಂದು ಹೇಳಿದರು.</p>.<p>ವಾಂಗ್ ಸಂತಸ: ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಮಾತನಾಡಿ, ‘ಸಂವಹನ ಹಾಗೂ ಸಹಕಾರದದ ಮೂಲಕ ಎರಡೂ ದೇಶಗಳು ವಿಶ್ವಾಸ ವೃದ್ಧಿಗೆ ಒತ್ತು ನೀಡಬೇಕು. ಜೊತೆಗೆ, ಉಭಯ ದೇಶಗಳ ನಡುವಿನ ನಿರ್ದಿಷ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಸಂಬಂಧಗಳ ಸುಧಾರಣೆ ಮತ್ತು ಪ್ರಗತಿ ಕುರಿತಂತೆ ನಮ್ಮ ದ್ವಿಪಕ್ಷೀಯ ಬಾಂಧವ್ಯ ಸವಾಲು ಎದುರಿಸುತ್ತಿದೆ. ಈ ಕಾರಣಕ್ಕೆ, ಎಸ್ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಪ್ರಧಾನಿ ಮೋದಿ ಅವರು ಚೀನಾಕ್ಕೆ ಭೇಟಿ ನೀಡುತ್ತಿರುವುದಕ್ಕೆ ಬಹಳ ಮಹತ್ವ ಇದೆ’ ಎಂದು ಯಿ ಹೇಳಿದರು.</p>.<div><blockquote>ಗಡಿಗಳಲ್ಲಿ ಶಾಂತಿ ನೆಲಸಿರುವುದು ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಗಟ್ಟಿಗೊಂಡ ಕಾರಣ ನಿರ್ಮಾಣವಾಗಿರುವ ಹೊಸ ಪರಿಸ್ಥಿತಿಯಿಂದಾಗಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿ ಉಭಯ ದೇಶಗಳ ನಡುವೆ ನಡೆಯುತ್ತಿರುವ ಮಾತುಕತೆಗಳಿಗೆ ಮತ್ತಷ್ಟು ಬಲಬಂದಿದೆ </blockquote><span class="attribution">ಅಜಿರ್ ಡೊಭಾಲ್ ರಾಷ್ಟ್ರೀಯ ಭದ್ರತಾ ಸಲಹೆಗಾರ</span></div>.<p><strong>‘ಶೃಂಗಸಭೆಯಲ್ಲಿ ಮೋದಿ ಭಾಗಿ’ </strong></p><p>ಚೀನಾದ ತಿಯಾನ್ಜಿನ್ ನಗರದಲ್ಲಿ ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1ರಂದು ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಶೃಂಗಸಭೆ ನಡೆಯಲಿದ್ದು ಪ್ರಧಾನಿ ಪಾಲ್ಗೊಳ್ಳುವರು ಎಂದು ಡೊಭಾಲ್ ಇದೇ ವೇಳೆ ಘೋಷಿಸಿದರು. ‘ಮೋದಿ ಅವರ ಚೀನಾ ಭೇಟಿ ಹಿನ್ನೆಲೆಯಲ್ಲಿ ಈ ವಿಶೇಷ ಪ್ರತಿನಿಧಿಗಳ ಮಾತುಕತೆ ಹೆಚ್ಚು ಮಹತ್ವ ಇದೆ. ರಷ್ಯಾದ ಕಜನ್ ನಗರದಲ್ಲಿ ಕಳೆದ ಅಕ್ಟೋಬರ್ನಲ್ಲಿ ನಡೆದ ಶೃಂಗಸಭೆ ಸಂದರ್ಭದಲ್ಲಿ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಮಾತುಕತೆ ನಡೆಸಿದ್ದರು. ಉಭಯ ನಾಯಕರ ಈ ಭೇಟಿಯಿಂದ ಎರಡೂ ದೇಶಗಳಿಗೆ ಪ್ರಯೋಜನವಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವಾಸ್ತವ ನಿಯಂತ್ರಣ ರೇಖೆ(ಎಲ್ಎಸಿ) ಉದ್ದಕ್ಕೂ ಕಳೆದ ಒಂಬತ್ತು ತಿಂಗಳಿಂದ ಶಾಂತಿ ನೆಲಸಿದೆ. ಈ ಕಾರಣಕ್ಕೆ ಚೀನಾ ಮತ್ತು ಭಾರತ ನಡುವಿನ ಸಂಬಂಧದಲ್ಲಿ ‘ಏರುಗತಿ’ ಕಾಣಬಹುದಾಗಿದೆ’ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮಂಗಳವಾರ ಹೇಳಿದರು.</p>.<p>ಗಡಿ ಸಮಸ್ಯೆ ಕುರಿತಂತೆ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಶಾಂಘೈ ಸಹಕಾರ ಸಂಘಟನೆ(ಎಸ್ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಡೊಭಾಲ್ ಅವರ ಈ ಹೇಳಿಕೆಗೆ ಮಹತ್ವ ಬಂದಿದೆ.</p>.<p>‘ವಿಶೇಷ ಪ್ರತಿನಿಧಿಗಳ’ ಕಾರ್ಯವಿಧಾನ ಚೌಕಟ್ಟಿನಡಿ ಆಯೋಜಿಸಿದ್ದ ಮಾತುಕತೆಯಲ್ಲಿ, ಜೈಶಂಕರ್ ಹಾಗೂ ವಾಂಗ್ ಯಿ ಅವರು ಗಡಿಗೆ ಸಂಬಂಧಿಸಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದರು.</p>.<p>ವಿಶೇಷ ಪ್ರತಿನಿಧಿಗಳ’ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಕಳೆದ ಡಿಸೆಂಬರ್ನಲ್ಲಿ ಬೀಜಿಂಗ್ಗೆ ಭೇಟಿ ನೀಡಿದ್ದನ್ನು ಪ್ರಸ್ತಾಪಿಸಿದ ಡೊಭಾಲ್,‘ಈ ಭೇಟಿ ವೇಳೆ ನಡೆದ ಮಾತುಕತೆ ನಂತರ, ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ’ ಎಂದರು.</p>.<p>‘ಗಡಿಗಳಲ್ಲಿ ಶಾಂತಿ ನೆಲಸಿದೆ. ಹೀಗಾಗಿ, ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತಂತೆ ಉಭಯ ದೇಶಗಳ ನಡುವೆ ಗಮನಾರ್ಹ ಮಾತುಕತೆಗಳು ನಡೆಯುತ್ತಿವೆ’ ಎಂದು ಹೇಳಿದರು.</p>.<p>ವಾಂಗ್ ಸಂತಸ: ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಮಾತನಾಡಿ, ‘ಸಂವಹನ ಹಾಗೂ ಸಹಕಾರದದ ಮೂಲಕ ಎರಡೂ ದೇಶಗಳು ವಿಶ್ವಾಸ ವೃದ್ಧಿಗೆ ಒತ್ತು ನೀಡಬೇಕು. ಜೊತೆಗೆ, ಉಭಯ ದೇಶಗಳ ನಡುವಿನ ನಿರ್ದಿಷ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಸಂಬಂಧಗಳ ಸುಧಾರಣೆ ಮತ್ತು ಪ್ರಗತಿ ಕುರಿತಂತೆ ನಮ್ಮ ದ್ವಿಪಕ್ಷೀಯ ಬಾಂಧವ್ಯ ಸವಾಲು ಎದುರಿಸುತ್ತಿದೆ. ಈ ಕಾರಣಕ್ಕೆ, ಎಸ್ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಪ್ರಧಾನಿ ಮೋದಿ ಅವರು ಚೀನಾಕ್ಕೆ ಭೇಟಿ ನೀಡುತ್ತಿರುವುದಕ್ಕೆ ಬಹಳ ಮಹತ್ವ ಇದೆ’ ಎಂದು ಯಿ ಹೇಳಿದರು.</p>.<div><blockquote>ಗಡಿಗಳಲ್ಲಿ ಶಾಂತಿ ನೆಲಸಿರುವುದು ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಗಟ್ಟಿಗೊಂಡ ಕಾರಣ ನಿರ್ಮಾಣವಾಗಿರುವ ಹೊಸ ಪರಿಸ್ಥಿತಿಯಿಂದಾಗಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿ ಉಭಯ ದೇಶಗಳ ನಡುವೆ ನಡೆಯುತ್ತಿರುವ ಮಾತುಕತೆಗಳಿಗೆ ಮತ್ತಷ್ಟು ಬಲಬಂದಿದೆ </blockquote><span class="attribution">ಅಜಿರ್ ಡೊಭಾಲ್ ರಾಷ್ಟ್ರೀಯ ಭದ್ರತಾ ಸಲಹೆಗಾರ</span></div>.<p><strong>‘ಶೃಂಗಸಭೆಯಲ್ಲಿ ಮೋದಿ ಭಾಗಿ’ </strong></p><p>ಚೀನಾದ ತಿಯಾನ್ಜಿನ್ ನಗರದಲ್ಲಿ ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1ರಂದು ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಶೃಂಗಸಭೆ ನಡೆಯಲಿದ್ದು ಪ್ರಧಾನಿ ಪಾಲ್ಗೊಳ್ಳುವರು ಎಂದು ಡೊಭಾಲ್ ಇದೇ ವೇಳೆ ಘೋಷಿಸಿದರು. ‘ಮೋದಿ ಅವರ ಚೀನಾ ಭೇಟಿ ಹಿನ್ನೆಲೆಯಲ್ಲಿ ಈ ವಿಶೇಷ ಪ್ರತಿನಿಧಿಗಳ ಮಾತುಕತೆ ಹೆಚ್ಚು ಮಹತ್ವ ಇದೆ. ರಷ್ಯಾದ ಕಜನ್ ನಗರದಲ್ಲಿ ಕಳೆದ ಅಕ್ಟೋಬರ್ನಲ್ಲಿ ನಡೆದ ಶೃಂಗಸಭೆ ಸಂದರ್ಭದಲ್ಲಿ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಮಾತುಕತೆ ನಡೆಸಿದ್ದರು. ಉಭಯ ನಾಯಕರ ಈ ಭೇಟಿಯಿಂದ ಎರಡೂ ದೇಶಗಳಿಗೆ ಪ್ರಯೋಜನವಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>