<p><strong>ನವದೆಹಲಿ:</strong> ಭಾರತ ಮತ್ತು ಚೀನಾದ ಗಡಿ ಭದ್ರತಾ ಪಡೆಗಳ ಸಿಬ್ಬಂದಿಯು ಕಳೆದ ಒಂದು ವರ್ಷದಲ್ಲಿ 1,100ಕ್ಕೂ ಅಧಿಕ ಸಲ ಪರಸ್ಪರ ಮಾತುಕತೆ ನಡೆಸಿದ್ದಾರೆ ಎಂದು ಸೇನಾ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ ಸೋಮವಾರ ಹೇಳಿದ್ದಾರೆ.</p>.<p>‘ಎರಡೂ ಕಡೆಯವರು ಪ್ರತಿದಿನ ಸರಾಸರಿ ಮೂರು ಸಲ ಮಾತುಕತೆ ನಡೆಸಿದ್ದಾರೆ. ತಾವು ಪಹರೆ ನಡೆಸುತ್ತಿರುವ ಪ್ರದೇಶಗಳಲ್ಲಿ ಗಡಿಗೆ ಸಂಬಂಧಿಸಿದಂತೆ ಇರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಮಾತುಕತೆ ನಡೆದಿದೆ. 2024ರ ಅಕ್ಟೋಬರ್ ಬಳಿಕ ಗಡಿ ಭಾಗದಲ್ಲಿನ ಪರಿಸ್ಥಿತಿಯಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದೆ’ ಎಂದಿದ್ದಾರೆ.</p>.<p>‘ಆರಂಭದಲ್ಲಿ ಮಾತುಕತೆಗಳು ಹಿರಿಯ ಕಮಾಂಡರ್ಗಳ ಮಟ್ಟಕ್ಕೆ ಸೀಮಿತವಾಗಿತ್ತು. ಆ ಬಳಿಕ ತಳಮಟ್ಟದಿಂದಲೇ ಸಮಸ್ಯೆಗಳನ್ನು ಪರಿಹರಿಸಲು ಬೆಟಾಲಿಯನ್ ಮತ್ತು ತುಕಡಿಗಳ ಕಮಾಂಡರ್ಗಳ ಹಂತಕ್ಕೆ ಮಾತುಕತೆಯನ್ನು ವಿಸ್ತರಿಸಲಾಯಿತು’ ಎಂದು ತಿಳಿಸಿದ್ದಾರೆ.</p>.<p>‘ಕಳೆದ ಅಕ್ಟೋಬರ್ನಲ್ಲಿ ಉಭಯ ರಾಷ್ಟ್ರಗಳ ನಾಯಕರ ನಡುವಿನ ಸಂವಾದದ ನಂತರ ನಮ್ಮ ಸಂಬಂಧದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ರಾಜಕೀಯವಾಗಿ ನೀಡುವ ನಿರ್ದೇಶನಗಳು ಸ್ಪಷ್ಟವಾಗಿದ್ದರೆ, ಅದು ಎಲ್ಲರಿಗೂ ಪ್ರಯೋಜನ ನೀಡುತ್ತದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಮತ್ತು ಚೀನಾದ ಗಡಿ ಭದ್ರತಾ ಪಡೆಗಳ ಸಿಬ್ಬಂದಿಯು ಕಳೆದ ಒಂದು ವರ್ಷದಲ್ಲಿ 1,100ಕ್ಕೂ ಅಧಿಕ ಸಲ ಪರಸ್ಪರ ಮಾತುಕತೆ ನಡೆಸಿದ್ದಾರೆ ಎಂದು ಸೇನಾ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ ಸೋಮವಾರ ಹೇಳಿದ್ದಾರೆ.</p>.<p>‘ಎರಡೂ ಕಡೆಯವರು ಪ್ರತಿದಿನ ಸರಾಸರಿ ಮೂರು ಸಲ ಮಾತುಕತೆ ನಡೆಸಿದ್ದಾರೆ. ತಾವು ಪಹರೆ ನಡೆಸುತ್ತಿರುವ ಪ್ರದೇಶಗಳಲ್ಲಿ ಗಡಿಗೆ ಸಂಬಂಧಿಸಿದಂತೆ ಇರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಮಾತುಕತೆ ನಡೆದಿದೆ. 2024ರ ಅಕ್ಟೋಬರ್ ಬಳಿಕ ಗಡಿ ಭಾಗದಲ್ಲಿನ ಪರಿಸ್ಥಿತಿಯಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದೆ’ ಎಂದಿದ್ದಾರೆ.</p>.<p>‘ಆರಂಭದಲ್ಲಿ ಮಾತುಕತೆಗಳು ಹಿರಿಯ ಕಮಾಂಡರ್ಗಳ ಮಟ್ಟಕ್ಕೆ ಸೀಮಿತವಾಗಿತ್ತು. ಆ ಬಳಿಕ ತಳಮಟ್ಟದಿಂದಲೇ ಸಮಸ್ಯೆಗಳನ್ನು ಪರಿಹರಿಸಲು ಬೆಟಾಲಿಯನ್ ಮತ್ತು ತುಕಡಿಗಳ ಕಮಾಂಡರ್ಗಳ ಹಂತಕ್ಕೆ ಮಾತುಕತೆಯನ್ನು ವಿಸ್ತರಿಸಲಾಯಿತು’ ಎಂದು ತಿಳಿಸಿದ್ದಾರೆ.</p>.<p>‘ಕಳೆದ ಅಕ್ಟೋಬರ್ನಲ್ಲಿ ಉಭಯ ರಾಷ್ಟ್ರಗಳ ನಾಯಕರ ನಡುವಿನ ಸಂವಾದದ ನಂತರ ನಮ್ಮ ಸಂಬಂಧದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ರಾಜಕೀಯವಾಗಿ ನೀಡುವ ನಿರ್ದೇಶನಗಳು ಸ್ಪಷ್ಟವಾಗಿದ್ದರೆ, ಅದು ಎಲ್ಲರಿಗೂ ಪ್ರಯೋಜನ ನೀಡುತ್ತದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>