<p><strong>ನವದೆಹಲಿ</strong>: ಪೂರ್ವ ಲಡಾಖ್ನಲ್ಲಿ ಮೂರೂವರೆ ವರ್ಷಗಳಿಂದ ಉದ್ಭವಿಸಿರುವ ಗಡಿ ವಿವಾದ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ಉನ್ನತ ಮಟ್ಟದಲ್ಲಿ ಮಾತುಕತೆಗಳು ನಡೆದಿವೆ. ಎರಡೂ ದೇಶಗಳ ಸೇನಾ ಅಧಿಕಾರಿಗಳು ಶಾಂತಿ ಕಾಪಾಡಲು ಒಪ್ಪಿದ್ದಾರೆ. ಆದರೆ, ಗಡಿ ವಿವಾದಕ್ಕೆ ಸಂಬಂಧಿಸಿದ ಈ ಮಾತುಕತೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾದ ಸೂಚನೆ ಕಂಡುಬಂದಿಲ್ಲ.</p>.<p>ಚುಶುಲ್-ಮೊಲ್ಡೊ ಗಡಿಯಲ್ಲಿ ಸಂಧಿಸುವ ಸ್ಥಳದಲ್ಲಿ 21ನೇ ಸುತ್ತಿನ ಭಾರತ-ಚೀನಾ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯು ಫೆ. 19 ರಂದು ನಡೆಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.</p>.<p>‘ಸ್ನೇಹ ಮತ್ತು ಸೌಹಾರ್ದದ ವಾತಾವರಣದಲ್ಲಿ ನಡೆದ ಮಾತುಕತೆಯಲ್ಲಿ ಎರಡೂ ಕಡೆಯವರು ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡಿದ್ದಾರೆ. ಸೇನಾ ಮತ್ತು ರಾಜತಾಂತ್ರಿಕ ಕಾರ್ಯವಿಧಾನಗಳ ಮೂಲಕ ಮಾತುಕತೆ ಮುಂದುವರಿಸಿಕೊಂಡು ಹೋಗಲು, ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿ ಕಾಪಾಡಲು ಉಭಯತ್ರರು ಬದ್ಧರಾಗಿದ್ದಾರೆ’ ಎಂದು ಸಚಿವಾಲಯ ಹೇಳಿದೆ. </p>.<p>‘ಭಾರತ-ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸೌಹಾರ್ದ ಮರುಸ್ಥಾಪನೆಗೆ ಅಗತ್ಯವಾದ ಪೂರ್ವ ಲಡಾಖ್ನ ಎಲ್ಎಸಿ (ವಾಸ್ತವ ನಿಯಂತ್ರಣ ರೇಖೆ) ಉದ್ದಕ್ಕೂ ಉಳಿದಿರುವ ಪ್ರದೇಶಗಳಲ್ಲಿ ಸೇನೆ ಸಂಪೂರ್ಣ ಹಿಂತೆಗೆದುಕೊಳ್ಳಬೇಕೆಂಬ ಬೇಡಿಕೆ ಬಗ್ಗೆಯೇ ಈ ಹಿಂದಿನ ಮಾತುಕತೆಗಳಲ್ಲೂ ಚರ್ಚೆ ನಡೆಸಲಾಗಿದೆ’ ಎಂದು ಅದು ಹೇಳಿದೆ.</p>.<p>ಡೆಪ್ಸಾಂಗ್ ಮತ್ತು ಡೆಮ್ಚೋಕ್ನಲ್ಲಿ ಉದ್ಭವಿಸಿರುವ ವಿವಾದಗಳನ್ನು ಬಗೆಹರಿಸುವಂತೆ ಭಾರತ ಬಲವಾಗಿ ಒತ್ತಾಯಿಸಿತು. ಈ ಮಾತುಕತೆಯಲ್ಲಿ ಯಾವುದೇ ಸ್ಪಷ್ಟ ಪ್ರಗತಿ ಕಾಣಿಸಲಿಲ್ಲ ಎಂದು ಮೂಲಗಳು ಹೇಳಿವೆ.</p>.<p>ಕಳೆದ ಅಕ್ಟೋಬರ್ 9 ಮತ್ತು 10 ರಂದು 20ನೇ ಸುತ್ತಿನ ಉಭಯ ದೇಶಗಳ ನಡುವೆ ಸೇನಾ ಮಾತುಕತೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೂರ್ವ ಲಡಾಖ್ನಲ್ಲಿ ಮೂರೂವರೆ ವರ್ಷಗಳಿಂದ ಉದ್ಭವಿಸಿರುವ ಗಡಿ ವಿವಾದ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ಉನ್ನತ ಮಟ್ಟದಲ್ಲಿ ಮಾತುಕತೆಗಳು ನಡೆದಿವೆ. ಎರಡೂ ದೇಶಗಳ ಸೇನಾ ಅಧಿಕಾರಿಗಳು ಶಾಂತಿ ಕಾಪಾಡಲು ಒಪ್ಪಿದ್ದಾರೆ. ಆದರೆ, ಗಡಿ ವಿವಾದಕ್ಕೆ ಸಂಬಂಧಿಸಿದ ಈ ಮಾತುಕತೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾದ ಸೂಚನೆ ಕಂಡುಬಂದಿಲ್ಲ.</p>.<p>ಚುಶುಲ್-ಮೊಲ್ಡೊ ಗಡಿಯಲ್ಲಿ ಸಂಧಿಸುವ ಸ್ಥಳದಲ್ಲಿ 21ನೇ ಸುತ್ತಿನ ಭಾರತ-ಚೀನಾ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯು ಫೆ. 19 ರಂದು ನಡೆಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.</p>.<p>‘ಸ್ನೇಹ ಮತ್ತು ಸೌಹಾರ್ದದ ವಾತಾವರಣದಲ್ಲಿ ನಡೆದ ಮಾತುಕತೆಯಲ್ಲಿ ಎರಡೂ ಕಡೆಯವರು ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡಿದ್ದಾರೆ. ಸೇನಾ ಮತ್ತು ರಾಜತಾಂತ್ರಿಕ ಕಾರ್ಯವಿಧಾನಗಳ ಮೂಲಕ ಮಾತುಕತೆ ಮುಂದುವರಿಸಿಕೊಂಡು ಹೋಗಲು, ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿ ಕಾಪಾಡಲು ಉಭಯತ್ರರು ಬದ್ಧರಾಗಿದ್ದಾರೆ’ ಎಂದು ಸಚಿವಾಲಯ ಹೇಳಿದೆ. </p>.<p>‘ಭಾರತ-ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸೌಹಾರ್ದ ಮರುಸ್ಥಾಪನೆಗೆ ಅಗತ್ಯವಾದ ಪೂರ್ವ ಲಡಾಖ್ನ ಎಲ್ಎಸಿ (ವಾಸ್ತವ ನಿಯಂತ್ರಣ ರೇಖೆ) ಉದ್ದಕ್ಕೂ ಉಳಿದಿರುವ ಪ್ರದೇಶಗಳಲ್ಲಿ ಸೇನೆ ಸಂಪೂರ್ಣ ಹಿಂತೆಗೆದುಕೊಳ್ಳಬೇಕೆಂಬ ಬೇಡಿಕೆ ಬಗ್ಗೆಯೇ ಈ ಹಿಂದಿನ ಮಾತುಕತೆಗಳಲ್ಲೂ ಚರ್ಚೆ ನಡೆಸಲಾಗಿದೆ’ ಎಂದು ಅದು ಹೇಳಿದೆ.</p>.<p>ಡೆಪ್ಸಾಂಗ್ ಮತ್ತು ಡೆಮ್ಚೋಕ್ನಲ್ಲಿ ಉದ್ಭವಿಸಿರುವ ವಿವಾದಗಳನ್ನು ಬಗೆಹರಿಸುವಂತೆ ಭಾರತ ಬಲವಾಗಿ ಒತ್ತಾಯಿಸಿತು. ಈ ಮಾತುಕತೆಯಲ್ಲಿ ಯಾವುದೇ ಸ್ಪಷ್ಟ ಪ್ರಗತಿ ಕಾಣಿಸಲಿಲ್ಲ ಎಂದು ಮೂಲಗಳು ಹೇಳಿವೆ.</p>.<p>ಕಳೆದ ಅಕ್ಟೋಬರ್ 9 ಮತ್ತು 10 ರಂದು 20ನೇ ಸುತ್ತಿನ ಉಭಯ ದೇಶಗಳ ನಡುವೆ ಸೇನಾ ಮಾತುಕತೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>