<p><strong>ನವದೆಹಲಿ</strong>: ಹವಾಮಾನ ಬದಲಾವಣೆ ಪರಿಣಾಮ ನಿಭಾಯಿಸಲು ಭಾರತ ಬದ್ಧವಾಗಿದೆ ಮತ್ತು ಅಗತ್ಯ ತಾಂತ್ರಿಕ ನೆರವಿನ ಮೂಲಕ ಅಭಿವೃದ್ಧಿಶೀಲ ರಾಷ್ಟ್ರಗಳು ತಮ್ಮ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಪ್ರಯತ್ನಗಳನ್ನು ಬೆಂಬಲಿಸುತ್ತದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಗುರುವಾರ ಹೇಳಿದ್ದಾರೆ.</p>.<p>ಎರಡು ದಿನಗಳ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಈಗಾಗಲೇ ಹವಾಮಾನ ಸಂಪನ್ಮೂಲಗಳಲ್ಲಿ ತನ್ನ ಪಾಲು ಬಳಸಿವೆ ಮತ್ತು ಅವರು ಹಿಂದಿನ ಕ್ರಮಗಳ ಜವಾಬ್ದಾರಿ ಸ್ವೀಕರಿಸುವ ಸಮಯ ಬಂದಿದೆ ಎಂದು ಹೇಳಿದರು.</p>.<p>ಒಂದು ದೇಶದ ಅಭಿವೃದ್ಧಿ ಮತ್ತು ಅದರ ಜೀವವೈವಿಧ್ಯ ಹಾಗೂ ಪರಿಸರ ವ್ಯವಸ್ಥೆಗಳ ಸಂರಕ್ಷಣೆ ಎರಡು ಪ್ರಮುಖ ಅಂಶಗಳಾಗಿವೆ. ಇವೆರಡನ್ನೂ ನಿರ್ಲಕ್ಷಿಸಲಾಗುವುದಿಲ್ಲ. ಆದ್ದರಿಂದ ಅಸಮಾನತೆ ಕಡಿಮೆ ಮಾಡಲು ಮತ್ತು ಜನರ ಜೀವನದ ಗುಣಮಟ್ಟದ ಸಬಲೀಕರಣ ಹಾಗೂ ಸುಧಾರಣೆ ಅಗತ್ಯವಿದೆ ಎಂದು ಸಚಿವರು ಹೇಳಿದರು. </p>.<p>ಅಭಿವೃದ್ಧಿಶೀಲ ರಾಷ್ಟ್ರಗಳ ದುರ್ಬಲತೆಯನ್ನು ಭಾರತ ಅರ್ಥ ಮಾಡಿಕೊಂಡಿದೆ ಎಂದು ಪ್ರತಿಪಾದಿಸಿದ ಯಾದವ್, ತುರ್ತು ಜಾಗತಿಕ ಹವಾಮಾನ ಕ್ರಮವು ನಿಜವಾಗಿಯೂ ಸಮಯದ ಅಗತ್ಯವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹವಾಮಾನ ಬದಲಾವಣೆ ಪರಿಣಾಮ ನಿಭಾಯಿಸಲು ಭಾರತ ಬದ್ಧವಾಗಿದೆ ಮತ್ತು ಅಗತ್ಯ ತಾಂತ್ರಿಕ ನೆರವಿನ ಮೂಲಕ ಅಭಿವೃದ್ಧಿಶೀಲ ರಾಷ್ಟ್ರಗಳು ತಮ್ಮ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಪ್ರಯತ್ನಗಳನ್ನು ಬೆಂಬಲಿಸುತ್ತದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಗುರುವಾರ ಹೇಳಿದ್ದಾರೆ.</p>.<p>ಎರಡು ದಿನಗಳ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಈಗಾಗಲೇ ಹವಾಮಾನ ಸಂಪನ್ಮೂಲಗಳಲ್ಲಿ ತನ್ನ ಪಾಲು ಬಳಸಿವೆ ಮತ್ತು ಅವರು ಹಿಂದಿನ ಕ್ರಮಗಳ ಜವಾಬ್ದಾರಿ ಸ್ವೀಕರಿಸುವ ಸಮಯ ಬಂದಿದೆ ಎಂದು ಹೇಳಿದರು.</p>.<p>ಒಂದು ದೇಶದ ಅಭಿವೃದ್ಧಿ ಮತ್ತು ಅದರ ಜೀವವೈವಿಧ್ಯ ಹಾಗೂ ಪರಿಸರ ವ್ಯವಸ್ಥೆಗಳ ಸಂರಕ್ಷಣೆ ಎರಡು ಪ್ರಮುಖ ಅಂಶಗಳಾಗಿವೆ. ಇವೆರಡನ್ನೂ ನಿರ್ಲಕ್ಷಿಸಲಾಗುವುದಿಲ್ಲ. ಆದ್ದರಿಂದ ಅಸಮಾನತೆ ಕಡಿಮೆ ಮಾಡಲು ಮತ್ತು ಜನರ ಜೀವನದ ಗುಣಮಟ್ಟದ ಸಬಲೀಕರಣ ಹಾಗೂ ಸುಧಾರಣೆ ಅಗತ್ಯವಿದೆ ಎಂದು ಸಚಿವರು ಹೇಳಿದರು. </p>.<p>ಅಭಿವೃದ್ಧಿಶೀಲ ರಾಷ್ಟ್ರಗಳ ದುರ್ಬಲತೆಯನ್ನು ಭಾರತ ಅರ್ಥ ಮಾಡಿಕೊಂಡಿದೆ ಎಂದು ಪ್ರತಿಪಾದಿಸಿದ ಯಾದವ್, ತುರ್ತು ಜಾಗತಿಕ ಹವಾಮಾನ ಕ್ರಮವು ನಿಜವಾಗಿಯೂ ಸಮಯದ ಅಗತ್ಯವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>