<p><strong>ನವದೆಹಲಿ:</strong> ಬಲೂಚಿಸ್ತಾನದಲ್ಲಿ ಶಾಂತಿ ಕದಡಲು ಭಾರತವು ಯತ್ನಿಸುತ್ತಿದೆ ಎಂಬ ಪಾಕಿಸ್ತಾನದ ಆರೋಪವನ್ನು ಭಾರತವು ಸ್ಪಷ್ಟವಾಗಿ ನಿರಾಕರಿಸಿದೆ.</p>.<p>‘ತನ್ನ ಆಂತರಿಕ ವೈಫಲ್ಯವನ್ನು ಬೇರೆಡೆಗೆ ತಿರುಗಿಸಲು ಪಾಕಿಸ್ತಾನವು ಮೊದಲಿನಿಂದಲೂ ಇಂತಹ ತಂತ್ರಗಳನ್ನು ಅನುಸರಿಸುತ್ತಿದೆ’ ಎಂದು ತಿರುಗೇಟು ನೀಡಿದೆ. </p>.<p>‘ಪಾಕಿಸ್ತಾನದ ಆರೋಪವು ನಿರಾಧಾರವಾಗಿದೆ. ಪಾಕಿಸ್ತಾನವು ದಮನ, ಕ್ರೌರ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯ ದಾಖಲೆಗಳನ್ನೇ ಹೊಂದಿದೆ’ ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಣ್ಧೀರ್ ಜೈಸ್ವಾಲ್ ತಿಳಿಸಿದ್ದಾರೆ.</p>.<p class="title">‘ಪಾಕಿಸ್ತಾನದ ಆಧಾರರಹಿತ ಆರೋಪಗಳನ್ನು ಸ್ಪಷ್ಟವಾಗಿ ತಿರಸ್ಕರಿಸುತ್ತಿದ್ದೇವೆ. ತನ್ನ ಆಂತರಿಕ ವೈಫಲ್ಯಗಳನ್ನು ಮರೆಮಾಚಲು ಭಾರತವನ್ನು ದೂರುವುದು ಮೊದಲಿನಿಂದಲೂ ಅನುಸರಿಸಿಕೊಂಡು ಬಂದ ತಂತ್ರವಾಗಿದೆ’ ಎಂದು ಹೇಳಿದ್ದಾರೆ. </p>.<p class="title">ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸೇನೆ ಹಾಗೂ ಉಗ್ರರ ನಡುವಿನ ಸಂಘರ್ಷದಲ್ಲಿ 15 ಮಂದಿ ಪಾಕಿಸ್ತಾನ ಯೋಧರು ಮೃತಪಟ್ಟಿದ್ದು, 92 ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಲೂಚಿಸ್ತಾನದಲ್ಲಿ ಶಾಂತಿ ಕದಡಲು ಭಾರತವು ಯತ್ನಿಸುತ್ತಿದೆ ಎಂಬ ಪಾಕಿಸ್ತಾನದ ಆರೋಪವನ್ನು ಭಾರತವು ಸ್ಪಷ್ಟವಾಗಿ ನಿರಾಕರಿಸಿದೆ.</p>.<p>‘ತನ್ನ ಆಂತರಿಕ ವೈಫಲ್ಯವನ್ನು ಬೇರೆಡೆಗೆ ತಿರುಗಿಸಲು ಪಾಕಿಸ್ತಾನವು ಮೊದಲಿನಿಂದಲೂ ಇಂತಹ ತಂತ್ರಗಳನ್ನು ಅನುಸರಿಸುತ್ತಿದೆ’ ಎಂದು ತಿರುಗೇಟು ನೀಡಿದೆ. </p>.<p>‘ಪಾಕಿಸ್ತಾನದ ಆರೋಪವು ನಿರಾಧಾರವಾಗಿದೆ. ಪಾಕಿಸ್ತಾನವು ದಮನ, ಕ್ರೌರ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯ ದಾಖಲೆಗಳನ್ನೇ ಹೊಂದಿದೆ’ ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಣ್ಧೀರ್ ಜೈಸ್ವಾಲ್ ತಿಳಿಸಿದ್ದಾರೆ.</p>.<p class="title">‘ಪಾಕಿಸ್ತಾನದ ಆಧಾರರಹಿತ ಆರೋಪಗಳನ್ನು ಸ್ಪಷ್ಟವಾಗಿ ತಿರಸ್ಕರಿಸುತ್ತಿದ್ದೇವೆ. ತನ್ನ ಆಂತರಿಕ ವೈಫಲ್ಯಗಳನ್ನು ಮರೆಮಾಚಲು ಭಾರತವನ್ನು ದೂರುವುದು ಮೊದಲಿನಿಂದಲೂ ಅನುಸರಿಸಿಕೊಂಡು ಬಂದ ತಂತ್ರವಾಗಿದೆ’ ಎಂದು ಹೇಳಿದ್ದಾರೆ. </p>.<p class="title">ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸೇನೆ ಹಾಗೂ ಉಗ್ರರ ನಡುವಿನ ಸಂಘರ್ಷದಲ್ಲಿ 15 ಮಂದಿ ಪಾಕಿಸ್ತಾನ ಯೋಧರು ಮೃತಪಟ್ಟಿದ್ದು, 92 ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>