<p><strong>ಇಸ್ಲಾಮಾಬಾದ್:</strong> ಇಸ್ಲಾಮಾಬಾದ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿಂದೆ ಭಾರತದ ಕೈವಾಡ ಇದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಆರೋಪವನ್ನು ಭಾರತ ತಳ್ಳಿ ಹಾಕಿದೆ. </p><p>'ಇದು ತಪ್ಪು ಹಾಗೂ ಆಧಾರರಹಿತ ಆರೋಪವಾಗಿದ್ದು, 'ಭ್ರಮನಿರಸನ' ಹೊಂದಿದ ನಾಯಕತ್ವದ ಸುಳ್ಳು ನಿರೂಪಣೆಯಾಗಿದೆ' ಎಂದು ತಿರುಗೇಟು ನೀಡಿದೆ. </p><p>ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಜಿಲ್ಲಾ ನ್ಯಾಯಾಲಯ ಸಮುಚ್ಚಯದ ಹೊರಗೆ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. </p><p>ಇದಾದ ಕೆಲವೇ ಗಂಟೆಗಳಲ್ಲಿ 'ಭಾರತ ಬೆಂಬಲಿತ ಸಕ್ರಿಯ ಗುಂಪುಗಳು' ದಾಳಿಯಲ್ಲಿ ಭಾಗಿಯಾಗಿವೆ ಎಂದು ಪಾಕ್ ಪ್ರಧಾನಿ ಆರೋಪಿಸಿದ್ದರು. </p><p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, 'ಅಂತರರಾಷ್ಟ್ರೀಯ ಸಮುದಾಯಕ್ಕೆ ನಿಜ ಸ್ಥಿತಿ ಕುರಿತು ಚೆನ್ನಾಗಿ ಗೊತ್ತಿದೆ. ಪಾಕ್ನ ಇಂತಹ 'ಹತಾಶ' ತಂತ್ರಗಾರಿಕೆಯಿಂದ ದಾರಿ ತಪ್ಪುವುದಿಲ್ಲ' ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. </p><p>'ಭಾವೋದ್ರೇಕಕ್ಕೊಳಗಾದ ಪಾಕಿಸ್ತಾನ ನಾಯಕತ್ವದ ತಪ್ಪು ಹಾಗೂ ಆಧಾರರಹಿತ ಆರೋಪಗಳನ್ನು ಭಾರತ ನಿರಾಕರಿಸುತ್ತದೆ' ಎಂದು ಅವರು ಹೇಳಿದ್ದಾರೆ. </p><p>'ಪಾಕಿಸ್ತಾನದಲ್ಲಿ ಆಂತರಿಕವಾಗಿ ನಡೆಯುತ್ತಿರುವ ಮಿಲಿಟರಿ ಪ್ರಚೋದಿತ ಸಾಂವಿಧಾನಿಕ ವಿರೋಧಿ ಕೃತ್ಯ ಹಾಗೂ ಅಧಿಕಾರ ವಿಕೇಂದ್ರೀಕರಣ ವಿರುದ್ಧ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತದ ಮೇಲೆ ಸುಳ್ಳು ಆರೋಪಗಳನ್ನು ಮಾಡಲಾಗಿದೆ' ಎಂದು ಅವರು ತೀವ್ರವಾಗಿ ಖಂಡಿಸಿದ್ದಾರೆ. </p><p>ಪಾಕಿಸ್ತಾನದ ರಕ್ಷಣಾ ಪಡೆಗಳ ಮುಖ್ಯಸ್ಥರ ಹೊಸ ಹುದ್ದೆಯನ್ನು ರಚಿಸಲು ಸಾಂವಿಧಾನಿಕ ತಿದ್ದುಪಡಿಯ ನಂತರ ಶರೀಫ್ ಸರ್ಕಾರವು ಅಲ್ಲಿನ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಒಳಗಾಗಿವೆ. </p>.ಪಾಕಿಸ್ತಾನ | ನ್ಯಾಯಾಲಯದ ಬಳಿ ಆತ್ಮಾಹುತಿ ಬಾಂಬ್ ದಾಳಿ: 12 ಜನ ಸಾವು.'ವೈಟ್ಕಾಲರ್ ಭಯೋತ್ಪಾದನೆ': ಶಿಕ್ಷಿತ ವೃತ್ತಿಪರರ ಬಳಸಿ ಉಗ್ರ ಕೃತ್ಯಕ್ಕೆ ಪಿತೂರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಇಸ್ಲಾಮಾಬಾದ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿಂದೆ ಭಾರತದ ಕೈವಾಡ ಇದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಆರೋಪವನ್ನು ಭಾರತ ತಳ್ಳಿ ಹಾಕಿದೆ. </p><p>'ಇದು ತಪ್ಪು ಹಾಗೂ ಆಧಾರರಹಿತ ಆರೋಪವಾಗಿದ್ದು, 'ಭ್ರಮನಿರಸನ' ಹೊಂದಿದ ನಾಯಕತ್ವದ ಸುಳ್ಳು ನಿರೂಪಣೆಯಾಗಿದೆ' ಎಂದು ತಿರುಗೇಟು ನೀಡಿದೆ. </p><p>ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಜಿಲ್ಲಾ ನ್ಯಾಯಾಲಯ ಸಮುಚ್ಚಯದ ಹೊರಗೆ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. </p><p>ಇದಾದ ಕೆಲವೇ ಗಂಟೆಗಳಲ್ಲಿ 'ಭಾರತ ಬೆಂಬಲಿತ ಸಕ್ರಿಯ ಗುಂಪುಗಳು' ದಾಳಿಯಲ್ಲಿ ಭಾಗಿಯಾಗಿವೆ ಎಂದು ಪಾಕ್ ಪ್ರಧಾನಿ ಆರೋಪಿಸಿದ್ದರು. </p><p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, 'ಅಂತರರಾಷ್ಟ್ರೀಯ ಸಮುದಾಯಕ್ಕೆ ನಿಜ ಸ್ಥಿತಿ ಕುರಿತು ಚೆನ್ನಾಗಿ ಗೊತ್ತಿದೆ. ಪಾಕ್ನ ಇಂತಹ 'ಹತಾಶ' ತಂತ್ರಗಾರಿಕೆಯಿಂದ ದಾರಿ ತಪ್ಪುವುದಿಲ್ಲ' ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. </p><p>'ಭಾವೋದ್ರೇಕಕ್ಕೊಳಗಾದ ಪಾಕಿಸ್ತಾನ ನಾಯಕತ್ವದ ತಪ್ಪು ಹಾಗೂ ಆಧಾರರಹಿತ ಆರೋಪಗಳನ್ನು ಭಾರತ ನಿರಾಕರಿಸುತ್ತದೆ' ಎಂದು ಅವರು ಹೇಳಿದ್ದಾರೆ. </p><p>'ಪಾಕಿಸ್ತಾನದಲ್ಲಿ ಆಂತರಿಕವಾಗಿ ನಡೆಯುತ್ತಿರುವ ಮಿಲಿಟರಿ ಪ್ರಚೋದಿತ ಸಾಂವಿಧಾನಿಕ ವಿರೋಧಿ ಕೃತ್ಯ ಹಾಗೂ ಅಧಿಕಾರ ವಿಕೇಂದ್ರೀಕರಣ ವಿರುದ್ಧ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತದ ಮೇಲೆ ಸುಳ್ಳು ಆರೋಪಗಳನ್ನು ಮಾಡಲಾಗಿದೆ' ಎಂದು ಅವರು ತೀವ್ರವಾಗಿ ಖಂಡಿಸಿದ್ದಾರೆ. </p><p>ಪಾಕಿಸ್ತಾನದ ರಕ್ಷಣಾ ಪಡೆಗಳ ಮುಖ್ಯಸ್ಥರ ಹೊಸ ಹುದ್ದೆಯನ್ನು ರಚಿಸಲು ಸಾಂವಿಧಾನಿಕ ತಿದ್ದುಪಡಿಯ ನಂತರ ಶರೀಫ್ ಸರ್ಕಾರವು ಅಲ್ಲಿನ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಒಳಗಾಗಿವೆ. </p>.ಪಾಕಿಸ್ತಾನ | ನ್ಯಾಯಾಲಯದ ಬಳಿ ಆತ್ಮಾಹುತಿ ಬಾಂಬ್ ದಾಳಿ: 12 ಜನ ಸಾವು.'ವೈಟ್ಕಾಲರ್ ಭಯೋತ್ಪಾದನೆ': ಶಿಕ್ಷಿತ ವೃತ್ತಿಪರರ ಬಳಸಿ ಉಗ್ರ ಕೃತ್ಯಕ್ಕೆ ಪಿತೂರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>