‘1991ರಲ್ಲಿ ಹಣಕಾಸು ಸಚಿವರಾಗುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಜಿ ಗವರ್ನರ್ ಐ.ಜಿ. ಪಟೇಲ್ ಅವರಿಗೆ ಮೊದಲು ಆಹ್ವಾನ ನೀಡಲಾಗಿತ್ತು. ಅವರು ನಿರಾಕರಿಸಿದ ನಂತರ ಆ ಹುದ್ದೆ ನನ್ನ ಪಾಲಾಯಿತು’ ಎಂದು ಸಿಂಗ್ ನಸುನಕ್ಕರು. ಆರು ಸಂಪುಟಗಳಲ್ಲಿ ಪ್ರಕಟವಾಗಿರುವ ತಮ್ಮ ‘ಚೇಂಜಿಂಗ್ ಇಂಡಿಯಾ’ ಪುಸ್ತಕ ಸರಣಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ತಾವು ಪ್ರಧಾನಿಯಾಗಿದ್ದ ಅವಧಿಯಲ್ಲಿ ನಡೆದ ಐತಿಹಾಸಿಕ ಘಟನಾವಳಿಗಳ ನೆನಪುಗಳನ್ನು ಮೆಲುಕು ಹಾಕುವ ಜತೆಗೆ ವಿರೋಧಿಗಳ ಟೀಕೆಗಳಿಗೆ ಉತ್ತರಿಸಲು ವೇದಿಕೆಯನ್ನು ಬಳಸಿಕೊಂಡರು.