<p><strong>ನವದೆಹಲಿ</strong>: ರಕ್ಷಣಾ ನಾವೀನ್ಯತೆಯಲ್ಲಿ ಭಾರತವು ಸುವರ್ಣ ಯುಗಕ್ಕೆ ಕಾಲಿಟ್ಟಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.</p>.<p>ಇಲ್ಲಿನ ಮಾಣೆಕ್ ಷಾ ಸೆಂಟರ್ನಲ್ಲಿ ನಡೆದ ‘ಸ್ವಾವಲಂಬನೆ 2025’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವೇಗವಾಗಿ ಬದಲಾಗುತ್ತಿರುವ ಜಗತ್ತು ಹಾಗೂ ಭೌಗೋಳಿಕ ರಾಜಕೀಯ ವಿಕಸನದ ಈ ಸಂದರ್ಭದಲ್ಲಿ ಭಾರತವು ಪ್ರತಿಕ್ರಿಯಾತ್ಮಕ ತಂತ್ರವನ್ನು ಮೀರಿ ಪೂರ್ವಭಾವಿ ಸನ್ನದ್ಧತೆಯ ತಂತ್ರವನ್ನು ಅಳವಡಿಸಿಕೊಳ್ಳಲೇಬೇಕಾದ ಅಗತ್ಯವಿದೆ’ ಎಂದಿದ್ದಾರೆ. </p>.<p>ಅಲ್ಲದೇ, ‘ರಕ್ಷಣಾ ವ್ಯವಸ್ಥೆಯಲ್ಲಿ ನಾವು ವೇಗವಾಗಿ ಬೃಹತ್ ಹಾಗೂ ಸದೃಢ ರೀತಿಯಲ್ಲಿ ಬೆಳೆಯಬೇಕಿದೆ. ರಕ್ಷಣಾ ನಾವೀನ್ಯತೆಯ ಸುವರ್ಣ ಯುಗಕ್ಕೆ ಕಾಲಿರಿಸಿರುವ ಈ ಸಂದರ್ಭದಲ್ಲಿ ಖಾಸಗಿ ಕ್ಷೇತ್ರದ ಪಾಲುದಾರರು ಕೂಡ ಕೈ ಜೋಡಿಸಬೇಕು. ಉದ್ಯಮದಲ್ಲಿ ಲಾಭ ನಿರೀಕ್ಷಿಸುವುದನ್ನೂ ಮೀರಿ ದೇಶಕ್ಕೆ ಕೊಡುಗೆ ನೀಡುವ ಮನೋಭಾವವನ್ನೂ ರೂಢಿಸಿಕೊಳ್ಳಬೇಕು’ ಎಂದು ರಾಜನಾಥ ಸಿಂಗ್ ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಕ್ಷಣಾ ನಾವೀನ್ಯತೆಯಲ್ಲಿ ಭಾರತವು ಸುವರ್ಣ ಯುಗಕ್ಕೆ ಕಾಲಿಟ್ಟಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.</p>.<p>ಇಲ್ಲಿನ ಮಾಣೆಕ್ ಷಾ ಸೆಂಟರ್ನಲ್ಲಿ ನಡೆದ ‘ಸ್ವಾವಲಂಬನೆ 2025’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವೇಗವಾಗಿ ಬದಲಾಗುತ್ತಿರುವ ಜಗತ್ತು ಹಾಗೂ ಭೌಗೋಳಿಕ ರಾಜಕೀಯ ವಿಕಸನದ ಈ ಸಂದರ್ಭದಲ್ಲಿ ಭಾರತವು ಪ್ರತಿಕ್ರಿಯಾತ್ಮಕ ತಂತ್ರವನ್ನು ಮೀರಿ ಪೂರ್ವಭಾವಿ ಸನ್ನದ್ಧತೆಯ ತಂತ್ರವನ್ನು ಅಳವಡಿಸಿಕೊಳ್ಳಲೇಬೇಕಾದ ಅಗತ್ಯವಿದೆ’ ಎಂದಿದ್ದಾರೆ. </p>.<p>ಅಲ್ಲದೇ, ‘ರಕ್ಷಣಾ ವ್ಯವಸ್ಥೆಯಲ್ಲಿ ನಾವು ವೇಗವಾಗಿ ಬೃಹತ್ ಹಾಗೂ ಸದೃಢ ರೀತಿಯಲ್ಲಿ ಬೆಳೆಯಬೇಕಿದೆ. ರಕ್ಷಣಾ ನಾವೀನ್ಯತೆಯ ಸುವರ್ಣ ಯುಗಕ್ಕೆ ಕಾಲಿರಿಸಿರುವ ಈ ಸಂದರ್ಭದಲ್ಲಿ ಖಾಸಗಿ ಕ್ಷೇತ್ರದ ಪಾಲುದಾರರು ಕೂಡ ಕೈ ಜೋಡಿಸಬೇಕು. ಉದ್ಯಮದಲ್ಲಿ ಲಾಭ ನಿರೀಕ್ಷಿಸುವುದನ್ನೂ ಮೀರಿ ದೇಶಕ್ಕೆ ಕೊಡುಗೆ ನೀಡುವ ಮನೋಭಾವವನ್ನೂ ರೂಢಿಸಿಕೊಳ್ಳಬೇಕು’ ಎಂದು ರಾಜನಾಥ ಸಿಂಗ್ ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>