<p><strong>ನವದೆಹಲಿ:</strong> ಕೋವಿಡ್–19 ಪಿಡುಗಿನ ಕಾರಣದಿಂದಾಗಿ ನಾಗರಿಕ ವಿಮಾನಯಾನ ನಿಯಂತ್ರಕರ ಒಪ್ಪಿಗೆ ಪಡೆದು ಕಾರ್ಯಾಚರಣೆ ನಡೆಸುವ ವಿಮಾನಗಳನ್ನು ಹೊರತುಪಡಿಸಿ, ಉಳಿದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಡಿ.31ರವರೆಗೂ ನಿಷೇಧಿಸಲಾಗಿದೆ.</p>.<p>‘2020ರ ಜೂನ್.26ರಂದು ಹೊರಡಿಸಿರುವ ಸುತ್ತೋಲೆಯ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದ್ದು, ಭಾರತದಿಂದ ಹೊರಡುವ ಮತ್ತು ಭಾರತಕ್ಕೆ ಆಗಮಿಸುವ ಅಂತರರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನಸೇವೆಯನ್ನು ಡಿ.31ರ ರಾತ್ರಿ 11.59ರವರೆಗೆ ನಿಷೇಧಿಸಲಾಗಿದೆ’ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯವು (ಡಿಜಿಸಿಎ) ಉಲ್ಲೇಖಿಸಿದೆ.</p>.<p>‘ಈ ನಿರ್ಬಂಧವು ಸರಕು ಸಾಗಣೆ ವಿಮಾನಗಳಿಗೆ ಹಾಗೂ ಡಿಜಿಸಿಎಯಿಂದ ಒಪ್ಪಿಗೆ ಪಡೆದು ಕಾರ್ಯಾಚರಣೆ ನಡೆಸುವ ವಿಮಾನಗಳಿಗೆ ಅನ್ವಯಿಸುವುದಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಕೋವಿಡ್–19 ಪಿಡುಗಿನ ಕಾರಣದಿಂದಾಗಿ ಕಳೆದ ಮಾರ್ಚ್ 25ರಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧಿಸಲಾಗಿದೆ. ವಂದೇ ಭಾರತ್ ಮಿಷನ್ನಡಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರಲು ಮೇ 7ರಿಂದ ವಿಶೇಷ ವಿಮಾನಗಳನ್ನು ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಪಿಡುಗಿನ ಕಾರಣದಿಂದಾಗಿ ನಾಗರಿಕ ವಿಮಾನಯಾನ ನಿಯಂತ್ರಕರ ಒಪ್ಪಿಗೆ ಪಡೆದು ಕಾರ್ಯಾಚರಣೆ ನಡೆಸುವ ವಿಮಾನಗಳನ್ನು ಹೊರತುಪಡಿಸಿ, ಉಳಿದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಡಿ.31ರವರೆಗೂ ನಿಷೇಧಿಸಲಾಗಿದೆ.</p>.<p>‘2020ರ ಜೂನ್.26ರಂದು ಹೊರಡಿಸಿರುವ ಸುತ್ತೋಲೆಯ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದ್ದು, ಭಾರತದಿಂದ ಹೊರಡುವ ಮತ್ತು ಭಾರತಕ್ಕೆ ಆಗಮಿಸುವ ಅಂತರರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನಸೇವೆಯನ್ನು ಡಿ.31ರ ರಾತ್ರಿ 11.59ರವರೆಗೆ ನಿಷೇಧಿಸಲಾಗಿದೆ’ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯವು (ಡಿಜಿಸಿಎ) ಉಲ್ಲೇಖಿಸಿದೆ.</p>.<p>‘ಈ ನಿರ್ಬಂಧವು ಸರಕು ಸಾಗಣೆ ವಿಮಾನಗಳಿಗೆ ಹಾಗೂ ಡಿಜಿಸಿಎಯಿಂದ ಒಪ್ಪಿಗೆ ಪಡೆದು ಕಾರ್ಯಾಚರಣೆ ನಡೆಸುವ ವಿಮಾನಗಳಿಗೆ ಅನ್ವಯಿಸುವುದಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಕೋವಿಡ್–19 ಪಿಡುಗಿನ ಕಾರಣದಿಂದಾಗಿ ಕಳೆದ ಮಾರ್ಚ್ 25ರಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧಿಸಲಾಗಿದೆ. ವಂದೇ ಭಾರತ್ ಮಿಷನ್ನಡಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರಲು ಮೇ 7ರಿಂದ ವಿಶೇಷ ವಿಮಾನಗಳನ್ನು ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>