<p><strong>ಬೀಜಿಂಗ್:</strong>ಕೋವಿಡ್–19 ಪಿಡುಗು ಹಾಗೂ ದೇಶದ ಗಡಿಯಲ್ಲಿ ಸಂಘರ್ಷ ಸ್ಥಿತಿ ನಿರ್ಮಾಣ ಇವು ಈ ವರ್ಷ ಭಾರತ ಎದುರಿಸಿದ ಎರಡು ಅಸಾಮಾನ್ಯ ಸವಾಲುಗಳು ಎಂದು ಚೀನಾದಲ್ಲಿನ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಹೇಳಿದರು.</p>.<p>ಅವರು ಬೀಜಿಂಗ್ನಲ್ಲಿರುವ ಇಂಡಿಯಾ ಹೌಸ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಕೋವಿಡ್ನಿಂದಾಗಿ ಚೀನಾದಲ್ಲಿರುವ ಭಾರತೀಯರು ಸಾಕಷ್ಟು ಸಮಸ್ಯೆ ಎದುರಿಸಬೇಕಾಯಿತು. ಭಾರತಕ್ಕೆ ತೆರಳಿದ್ದವರು ಕೂಡ ಚೀನಾಕ್ಕೆ ಬರಲು ಸಾಧ್ಯವಾಗಲಿಲ್ಲ. ವೀಸಾಕ್ಕೆ ಸಂಬಂಧಿಸಿದ ಸಮಸ್ಯೆ ಹಾಗೂ ವಿಮಾನಗಳ ಹಾರಾಟವನ್ನು ರದ್ದು ಮಾಡಿದ್ದೇ ಈ ಸಮಸ್ಯೆಗೆ ಕಾರಣ ಎಂದು ಹೇಳಿದರು.</p>.<p>ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಾಡಿದ್ದ ಬಾಷಣವನ್ನೂ ಮಿಸ್ರಿ ಓದಿದರು. ಗಡಿಯಲ್ಲಿನ ಸ್ಥಿತಿಯನ್ನು ಉಲ್ಲೇಖಿಸುವ ಮೂಲಕ ಲಡಾಖ್ನ ಪೂರ್ವ ಗಡಿಯಲ್ಲಿ ಚೀನಾ–ಭಾರತ ನಡುವಿನ ಸಂಘರ್ಷವನ್ನು ವಿವರಿಸಿದರು.</p>.<p>‘ಸ್ವಾತಂತ್ರ್ಯ ಸಂಗ್ರಾಮ ಸಂದರ್ಭದಲ್ಲಿ ಎದುರಿಸಿದಂತಹ ಸ್ಥಿತಿಯನ್ನೇ ಭಾರತೀಯರು ಎದುರಿಸುತ್ತಿದ್ದೇವೆ. ಎಲ್ಲ ಭೇದಭಾವ ತೊರೆದು, ಒಗ್ಗಟ್ಟಿನಿಂದ ಈ ಸವಾಲನ್ನು ನಾವು ಎದುರಿಸಬೇಕು’ ಎಂದರು.</p>.<p>‘ಚೀನಾದಲ್ಲಿರುವ ಭಾರತೀಯರೂ ಹಲವು ಸಮಸ್ಯೆ ಎದುರಿಸುತ್ತಿದ್ದು, ರಾಯಭಾರಿ ಕಚೇರಿ ನಿಮ್ಮ ನೆರವಿಗೆ ಧಾವಿಸಲಿದೆ’ ಎಂದೂ ಹೇಳಿದರು.</p>.<div style="text-align:center"><figcaption><em><strong>ಚೀನಾದಲ್ಲಿನ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೀಜಿಂಗ್ನಲ್ಲಿ ಶನಿವಾರ ರಾಷ್ಡ್ರ ಧ್ವಜಾರೋಹಣ ನೆರವೇರಿಸಿದರು – ಪಿಟಿಐ ಚಿತ್ರ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong>ಕೋವಿಡ್–19 ಪಿಡುಗು ಹಾಗೂ ದೇಶದ ಗಡಿಯಲ್ಲಿ ಸಂಘರ್ಷ ಸ್ಥಿತಿ ನಿರ್ಮಾಣ ಇವು ಈ ವರ್ಷ ಭಾರತ ಎದುರಿಸಿದ ಎರಡು ಅಸಾಮಾನ್ಯ ಸವಾಲುಗಳು ಎಂದು ಚೀನಾದಲ್ಲಿನ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಹೇಳಿದರು.</p>.<p>ಅವರು ಬೀಜಿಂಗ್ನಲ್ಲಿರುವ ಇಂಡಿಯಾ ಹೌಸ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಕೋವಿಡ್ನಿಂದಾಗಿ ಚೀನಾದಲ್ಲಿರುವ ಭಾರತೀಯರು ಸಾಕಷ್ಟು ಸಮಸ್ಯೆ ಎದುರಿಸಬೇಕಾಯಿತು. ಭಾರತಕ್ಕೆ ತೆರಳಿದ್ದವರು ಕೂಡ ಚೀನಾಕ್ಕೆ ಬರಲು ಸಾಧ್ಯವಾಗಲಿಲ್ಲ. ವೀಸಾಕ್ಕೆ ಸಂಬಂಧಿಸಿದ ಸಮಸ್ಯೆ ಹಾಗೂ ವಿಮಾನಗಳ ಹಾರಾಟವನ್ನು ರದ್ದು ಮಾಡಿದ್ದೇ ಈ ಸಮಸ್ಯೆಗೆ ಕಾರಣ ಎಂದು ಹೇಳಿದರು.</p>.<p>ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಾಡಿದ್ದ ಬಾಷಣವನ್ನೂ ಮಿಸ್ರಿ ಓದಿದರು. ಗಡಿಯಲ್ಲಿನ ಸ್ಥಿತಿಯನ್ನು ಉಲ್ಲೇಖಿಸುವ ಮೂಲಕ ಲಡಾಖ್ನ ಪೂರ್ವ ಗಡಿಯಲ್ಲಿ ಚೀನಾ–ಭಾರತ ನಡುವಿನ ಸಂಘರ್ಷವನ್ನು ವಿವರಿಸಿದರು.</p>.<p>‘ಸ್ವಾತಂತ್ರ್ಯ ಸಂಗ್ರಾಮ ಸಂದರ್ಭದಲ್ಲಿ ಎದುರಿಸಿದಂತಹ ಸ್ಥಿತಿಯನ್ನೇ ಭಾರತೀಯರು ಎದುರಿಸುತ್ತಿದ್ದೇವೆ. ಎಲ್ಲ ಭೇದಭಾವ ತೊರೆದು, ಒಗ್ಗಟ್ಟಿನಿಂದ ಈ ಸವಾಲನ್ನು ನಾವು ಎದುರಿಸಬೇಕು’ ಎಂದರು.</p>.<p>‘ಚೀನಾದಲ್ಲಿರುವ ಭಾರತೀಯರೂ ಹಲವು ಸಮಸ್ಯೆ ಎದುರಿಸುತ್ತಿದ್ದು, ರಾಯಭಾರಿ ಕಚೇರಿ ನಿಮ್ಮ ನೆರವಿಗೆ ಧಾವಿಸಲಿದೆ’ ಎಂದೂ ಹೇಳಿದರು.</p>.<div style="text-align:center"><figcaption><em><strong>ಚೀನಾದಲ್ಲಿನ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೀಜಿಂಗ್ನಲ್ಲಿ ಶನಿವಾರ ರಾಷ್ಡ್ರ ಧ್ವಜಾರೋಹಣ ನೆರವೇರಿಸಿದರು – ಪಿಟಿಐ ಚಿತ್ರ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>