<p><strong>ಪುಣೆ:</strong> ‘ಜಗತ್ತು ಭಾರತವನ್ನು ಹೆಚ್ಚು ಸಕಾರಾತ್ಮಕವಾಗಿ ಗ್ರಹಿಸುತ್ತಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನಿವಾರ ಇಲ್ಲಿ ಹೇಳಿದರು.</p>.<p>ನಗರದಲ್ಲಿ ನಡೆದ ಸಿಂಬಯೋಸಿಸ್ ಇಂಟರ್ನ್ಯಾಷನಲ್ನ (ಡೀಮ್ಡ್ ಯೂನಿವರ್ಸಿಟಿ) 22ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ಜಾಗತಿಕ ರಾಜಕೀಯ ಮತ್ತು ಆರ್ಥಿಕತೆಯು ಗಮನಾರ್ಹ ಬದಲಾವಣೆಗೆ ಒಳಗಾಗುತ್ತಿರುವ ಕಾಲಘಟ್ಟದಲ್ಲಿ, ದೇಶದ ವಿಕಾಸವು ಪ್ರಸ್ತುತ ನಿರಾಕರಿಸಲಾಗದ ವಾಸ್ತವ’ ಎಂದರು.</p>.<p>‘ಜಗತ್ತಿನಲ್ಲಿ ಹಲವು ಶಕ್ತಿ ಕೇಂದ್ರಗಳು ಹೊರಹೊಮ್ಮಿವೆ. ಯಾವುದೇ ದೇಶ ಎಷ್ಟೇ ಶಕ್ತಿಶಾಲಿಯಾಗಿರಲಿ, ಎಲ್ಲ ವಿಷಯಗಳಲ್ಲೂ ತನ್ನ ಇಚ್ಚೆಯನ್ನು ಮತ್ತೊಂದು ದೇಶದ ಮೇಲೆ ಹೇರಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ವಿಶ್ವವು ಪ್ರಸ್ತುತ ನಮ್ಮನ್ನು ಹೇಗೆ ಗ್ರಹಿಸುತ್ತದೆ? ಎಂಬುದಕ್ಕೆ ಉತ್ತರ ಏನೆಂದರೆ... ಮೊದಲಿಗಿಂತ ಹೆಚ್ಚು ಸಕಾರಾತ್ಮಕವಾಗಿ ಮತ್ತು ಗಂಭೀರವಾಗಿ. ಇದಕ್ಕೆ ಕಾರಣಗಳು ನಮ್ಮ ರಾಷ್ಟ್ರೀಯ ಬ್ರ್ಯಾಂಡ್ ಹಾಗೂ ವೈಯಕ್ತಿಕ ಖ್ಯಾತಿ’ ಎಂದರು.</p>.<p>‘ಭಾರತೀಯರನ್ನು ಜಗತ್ತು ಪ್ರಸ್ತುತ ಶಿಸ್ತು, ಬದ್ಧತೆಯಿಂದ ಕೆಲಸ ಮಾಡುವವರು, ತಂತ್ರಜ್ಞಾನದ ಕುಶಲತೆ ಹೊಂದಿರುವವರು, ಕುಟುಂಬ ಕೇಂದ್ರಿತ ಸಂಸ್ಕೃತಿಯನ್ನು ಪಾಲಿಸುವ ಜನರು ಎಂದು ಪರಿಗಣಿಸುತ್ತಿದೆ’ ಎಂದು ಸಚಿವರು ತಿಳಿಸಿದರು.</p>
<p><strong>ಪುಣೆ:</strong> ‘ಜಗತ್ತು ಭಾರತವನ್ನು ಹೆಚ್ಚು ಸಕಾರಾತ್ಮಕವಾಗಿ ಗ್ರಹಿಸುತ್ತಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನಿವಾರ ಇಲ್ಲಿ ಹೇಳಿದರು.</p>.<p>ನಗರದಲ್ಲಿ ನಡೆದ ಸಿಂಬಯೋಸಿಸ್ ಇಂಟರ್ನ್ಯಾಷನಲ್ನ (ಡೀಮ್ಡ್ ಯೂನಿವರ್ಸಿಟಿ) 22ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ಜಾಗತಿಕ ರಾಜಕೀಯ ಮತ್ತು ಆರ್ಥಿಕತೆಯು ಗಮನಾರ್ಹ ಬದಲಾವಣೆಗೆ ಒಳಗಾಗುತ್ತಿರುವ ಕಾಲಘಟ್ಟದಲ್ಲಿ, ದೇಶದ ವಿಕಾಸವು ಪ್ರಸ್ತುತ ನಿರಾಕರಿಸಲಾಗದ ವಾಸ್ತವ’ ಎಂದರು.</p>.<p>‘ಜಗತ್ತಿನಲ್ಲಿ ಹಲವು ಶಕ್ತಿ ಕೇಂದ್ರಗಳು ಹೊರಹೊಮ್ಮಿವೆ. ಯಾವುದೇ ದೇಶ ಎಷ್ಟೇ ಶಕ್ತಿಶಾಲಿಯಾಗಿರಲಿ, ಎಲ್ಲ ವಿಷಯಗಳಲ್ಲೂ ತನ್ನ ಇಚ್ಚೆಯನ್ನು ಮತ್ತೊಂದು ದೇಶದ ಮೇಲೆ ಹೇರಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ವಿಶ್ವವು ಪ್ರಸ್ತುತ ನಮ್ಮನ್ನು ಹೇಗೆ ಗ್ರಹಿಸುತ್ತದೆ? ಎಂಬುದಕ್ಕೆ ಉತ್ತರ ಏನೆಂದರೆ... ಮೊದಲಿಗಿಂತ ಹೆಚ್ಚು ಸಕಾರಾತ್ಮಕವಾಗಿ ಮತ್ತು ಗಂಭೀರವಾಗಿ. ಇದಕ್ಕೆ ಕಾರಣಗಳು ನಮ್ಮ ರಾಷ್ಟ್ರೀಯ ಬ್ರ್ಯಾಂಡ್ ಹಾಗೂ ವೈಯಕ್ತಿಕ ಖ್ಯಾತಿ’ ಎಂದರು.</p>.<p>‘ಭಾರತೀಯರನ್ನು ಜಗತ್ತು ಪ್ರಸ್ತುತ ಶಿಸ್ತು, ಬದ್ಧತೆಯಿಂದ ಕೆಲಸ ಮಾಡುವವರು, ತಂತ್ರಜ್ಞಾನದ ಕುಶಲತೆ ಹೊಂದಿರುವವರು, ಕುಟುಂಬ ಕೇಂದ್ರಿತ ಸಂಸ್ಕೃತಿಯನ್ನು ಪಾಲಿಸುವ ಜನರು ಎಂದು ಪರಿಗಣಿಸುತ್ತಿದೆ’ ಎಂದು ಸಚಿವರು ತಿಳಿಸಿದರು.</p>